Tuesday, April 16, 2024
Google search engine
Homeತುಮಕೂರ್ ಲೈವ್ಆತ್ಮವಿಶ್ವಾಸದಿಂದ ಬದುಕಿ: ಪ್ರೊ.‌ಪರಶುರಾಮ್

ಆತ್ಮವಿಶ್ವಾಸದಿಂದ ಬದುಕಿ: ಪ್ರೊ.‌ಪರಶುರಾಮ್

ಜಿಲ್ಲಾ ಯುವಜನ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿದ ಪ್ರೊಫೆಸರ್


Public story


Tumkuru: ಆತ್ಮವಿಶ್ವಾಸದಿಂದ ಬದುಕು ಸಾಗಿಸುವ ಮೂಲಕ ಇನ್ನೊಬ್ಬರಿಗೆ ಪ್ರೇರಣೆಯಾಗಬೇಕು ಎಂದು ತುಮಕೂರು ವಿವಿಯ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷ ಪ್ರೊ.ಕೆ.ಜಿ.ಪರಶುರಾಮ್ ತಿಳಿಸಿದರು.
ನಗರದ ಕನ್ನಡ ಭವನದಲ್ಲಿ, ನೆಹರು ಯುವ ಕೇಂದ್ರ, ಜನಮುಖಿ ಕಲಾ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ ತುಮಕೂರು ಇವರ ಅಶ್ರಯದಲ್ಲಿ ಏರ್ಪಡಿಸಿದ್ದ ಜಿಲ್ಲಾ ಯುವಜನ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವಜನರ ಪ್ರತಿಭೆಯನ್ನು ಅನವರಣಗೊಳಿಸಲು ನೆಹರು ಯುವ ಕೇಂದ್ರ ವೇದಿಕೆಯನ್ನು ಸೃಷ್ಟಿಸುತ್ತದೆ. ಊರು ಉಸಾಬರಿ ನಮಗೇಕೆ ಎನ್ನುವ ಧೋರಣೆಯಲ್ಲಿ ಇಂದಿನ ಯುವಜನರಿದ್ದಾರೆ. ಇದರಿಂದ ಹೊರಬಂದು ಗ್ರಾಮ ಪಂಚಾಯಿತಿಯಲ್ಲಿ ನಡೆಯುವ ಗ್ರಾಮ ಸಭೆಗಳಲ್ಲಿ ಭಾಗವಹಿಸಬೇಕು. ಗ್ರಾಮಗಳ ಅಭಿವೃದ್ಧಿಯ ಚಿಂತನೆ ಬಗ್ಗೆ ಚರ್ಚಿಸಬೇಕು ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಮಾತನಾಡಿ,ಯುವಶಕ್ತಿ ಅಣುಶಕ್ತಿಯಂತೆ ಭಯಂಕರ ಇಂಥ ಯುವಶಕ್ತಿಯನ್ನು ಸರಿದಾರಿಯಲ್ಲಿ ತೋಡಗಿಸಿಕೊಂಡರೆ ಭಾರತವನ್ನು ವಿಶ್ವಗುರು ಆಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಯುವಕರು ಉತ್ಪಾದಕ ವಲಯವಿದ್ದಂತೆ ಆದ್ದರಿಂದ ಜ್ಞಾನ ಮತ್ತು ಕೌಶಲ್ಯವನ್ನು ಪಡೆದುಕೊಂಡು ಕೈಗಾರಿಕೆಗಳನ್ನು ಪ್ರಾರಂಭಿಸಲು ಮುಂದಾಗಬೇಕು ಎಂದರು.
ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಮತ್ತು ಪರಿಷತ್ ಕಾರ್ಯಕಾರಿ ಸಮಿತಿಯ ಸದಸ್ಯ ಕೆ.ಟಿ.ತಿಪ್ಪೆಸ್ವಾಮಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಶೇ ೬೩ ರಷ್ಟು ಯುವಜನರು ಇದ್ದಾರೆ. ರಾಜ್ಯದಲ್ಲಿರುವ ೨.೮ ಲಕ್ಷ ಯುವಜನರನ್ನು ಅಭಿವೃದ್ಧಿಯತ್ತ ಕೊಂಡೊಯ್ದರೆ ದೇಶವೇ ಅಭಿವೃದ್ಧಿಯತ್ತ ಸಾಗುತ್ತದೆ. ಇತ್ತಿಚಿನ ದಿನಗಳಲ್ಲಿ ಯುವಜನತೆ ಸರ್ಕಾರದ ಯೋಜನೆಗನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ. ನಾನಾ ಇಲಾಖೆಗಳಲ್ಲಿ ಸಿಗುವ ಯೋಜನೆಗಳಲ್ಲಿ ಯುವಜನರು ಸಂಪೂರ್ಣ ಬಳಸಿಕೊಂಡು ಸ್ವಯಂ ಸಬಲೀಕರಣ ಹೊಂದಬೇಕು ಎಂದರು.
ಅರೆಯೂರು ಕೆನರಾ ಬ್ಯಾಂಕ್ ವ್ಯವಸ್ಥಾಪಕ ದೀಪಕ್.ಆರ್ ಪ್ರಧಾನ ಮಂತ್ರಿ ಸಾಮಾಜಿಕ ಆರ್ಥಿಕ ಯೋಜನೆಗಳ ಬಗ್ಗೆ ಮಾತನಾಡಿ, ಪ್ರಧಾನ ಮಂತ್ರಿ ಜನ್‌ಧನ್ ಮತ್ತು ಜೀವನ್ ಜ್ಯೋತಿ ಯೋಜನೆ, ಪ್ರಧಾನ ಮಂತ್ರಿ ಮುದ್ರಾ ಯೋಜನೆಯಂತವು ಸಾಕಷ್ಟಿವೆ. ಯುವಜನರು ಕೌಶಲ್ಯ ತರಬೇತಿ ಪಡೆದುಕೊಂಡು ಬ್ಯಾಂಕ್ ಮತ್ತು ಇಲಾಖೆಗಳಲ್ಲಿ ಸಾಲ ಸೌಲಭ್ಯ ಪಡೆದುಕೊಂಡು ಸಮಾಜದ ಅಭಿವೃದ್ಧಿಗೆ ಪೂರಕವಾಗುವ ಚಟುವಟಿಕೆಗಳನ್ನು ಮಾಡಬೇಕು ಎಂದು ತಿಳಿಸಿದರು.
ಪ್ರಗತಿಪರ ರೈತ ಸಿ.ಕೆ.ಪ್ರಕಾಶ್ ಮಾತನಾಡಿ, ಯುವ ಜನೆತೆ ಕೃಷಿಯನ್ನು ನಂಬಿ ಕೃಷಿ ಮಾಡಿದರೆ ಆದಾಯ ಕಟ್ಟಿಟ್ಟ ಬುತ್ತಿ. ಆದ್ದರಿಂದ ಸುಸ್ಥಿರ ಕೃಷಿ ಮಾಡಲು ಎಲ್ಲರೂ ಮುಂದಾಗಬೇಕು. ಇದರಿಂದ ಯುವ ಜನರು ಉದ್ಯೋಗವನ್ನು ಆರಸುತ್ತಾ ನಗರಗಳ ಕಡೆ ಮುಖ ಮಾಡುವುದು ತಪ್ಪುತ್ತದೆ ಎಂದರು.
ಸಂಶೋಧಕ ಡಾ.ಬಿ.ನಂಜುAಡ ಸ್ವಾಮಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಸ್ಥಳಿಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನ ಎಂಬ ವಿಷಯದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪರಸ್ಕೃತ ಲೋಕೇಶ್, ವಿಜಯ್‌ಕುಮಾರ್, ಚಂದನ್ ಹಾಗೂ ಸ್ವಯಂಸೇವಕರು, ಯುವಕರು ಹಾಜರಿದ್ದರು.

ತುಮಕೂರು ಪೋಟೋ : ತುಮಕೂರು ನಗರದ ಕನ್ನಡ ಭವನದಲ್ಲಿ, ನೆಹರು ಯುವ ಕೇಂದ್ರ, ಜನಮುಖಿ ಕಲಾ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ ತುಮಕೂರು ಇವರ ಅಶ್ರಯದಲ್ಲಿ ಏರ್ಪಡಿಸಿದ್ದ ಜಿಲ್ಲಾ ಯುವಜನ ಸಮಾವೇಶ ಕಾರ್ಯಕ್ರಮವನ್ನು ತುಮಕೂರು ವಿವಿಯ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ವಿಭಾಗದ ಪ್ರೊ.ಕೆ.ಜಿ.ಪರಶುರಾಮ್ ಉದ್ಘಾಟಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?