Publicstory. in
Tumkur: ತುಮಕೂರು ವಿಶ್ವವಿದ್ಯಾನಿಲಯದ 13ನೇ ಘಟಿಕೋತ್ಸವ ಫೆಬ್ರವರಿ 25ರಂದು ಬೆಳಗ್ಗೆ 11 ಗಂಟೆಗೆ ವಿವಿಯ ಡಾ.ಶಿವಕುಮಾರಸ್ವಾಮೀಜಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕುಲಪತಿ ಪ್ರೊ.ವೈ.ಎನ್.ಸಿದ್ದಗೌಡ ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 1587 ಸ್ನಾತಕೋತ್ತರ ವಿದ್ಯಾರ್ಥಿಗಳು, 6257 ಸ್ನಾತಕ ವಿದ್ಯಾರ್ಥಿಗಳು ಸೇರಿ 7800 ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಿಸಲಾಗುವುದು ಎಂದು ತಿಳಿಸಿದರು.
ಘಟಿಕೋತ್ಸವದಲ್ಲಿ 94 ಮಂದಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗುವುದು. ಕುಣಿಗಲ್ ತಾಲೂಕಿನ ಮಂಚೇಗೌಡ ಎಂಬುವರು, ಶಿಕ್ಷಣ, ಸಮಾಜಸೇವೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದು ಇವರು ಸೇರಿದಂತೆ ಮೂವರಿಗೆ ಡಿಲಿಟ್ ಪದವಿ ನೀಡಲಾಗುವುದು ಎಂದರು.
ಇದೇ ವೇಳೆ ಮೂರು ನಗದು ಬಹುಮಾನಗಳನ್ನು ನೀಡಲು ಉದ್ದೇಸಿಸಿದೆ. ಸ್ನಾತಕ ಪದವಿಯಲ್ಲಿ ಪ್ರತಿಯೊಂದು ವಿಭಾಗದ 10 ಮಂದಿ ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ನೀಡಲಾಗುವುದು, ಸ್ನಾತಕೋತ್ತರ ಪದವಿಯಲ್ಲಿ ಪ್ರತಿವಿಭಾಗದ ಐದು ಮಂದಿ ವಿದ್ಯಾರ್ಥಿಗಳಿಗೆ ಪದಕಗಳನ್ನು ವಿತರಿಸಲಾಗುವುದು ಎಂದು ಹೇಳಿದರು.
ಫೆ.25ರಂದು ಬೆಳಗ್ಗೆ 11 ಗಂಟೆಗೆ ಆರಂಭವಾಗುವ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲ ಅಧ್ಯಕ್ಷತೆ ವಹಿಸುವರು. ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಅಧ್ಯಕ್ಷ ಮಾಣಿಕ್ ರಾವ್ ಎಂ ಸಲುಂಬೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು ಘಟಿಕೋತ್ಸವದ ಭಾಷಣ ಮಾಡುವರು. ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ್ ಭಾಗವಹಿಸುವರು ಎಂದು ಸಿದ್ದೇಗೌಡ ತಿಳಿಸಿದರು.
ಘಟಿಕೋತ್ಸವದಲ್ಲಿ 94 ಮಂದಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗುವುದು. ಕುಣಿಗಲ್ ತಾಲೂಕಿನ ಮಂಚೇಗೌಡ ಎಂಬುವರು, ಶಿಕ್ಷಣ, ಸಮಾಜಸೇವೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದು ಇವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು. ಮೂವರಿಗೆ ಡಿಲಿಟ್ ಪದವಿ ನೀಡಲಾಗುವುದು ಎಂದರು.
ಗೌರವ ಡಾಕ್ಟರೇಟ್ ಗಾಗಿ 9 ಅರ್ಜಿಗಳು ಬಂದಿದ್ದವು. ಅವುಗಳ ಪೈಕಿ ಮಂಚೇಗೌಡ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
Comment here