Saturday, April 20, 2024
Google search engine
Homeತುಮಕೂರು ಲೈವ್ಇದೇ ಜೂನ್ 18ರಂದು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ

ಇದೇ ಜೂನ್ 18ರಂದು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ

ಜೂನ್ 18ರಂದು ನಡೆಯಲಿರುವ ದ್ವಿತೀಯ ಪಿಯುಸಿ ಇಂಗ್ಲೀಷ್ ವಿಷಯ ಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಲ್ಲದೆ ನಡೆಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜರುಗಿದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಮಾರ್ಚ್ ಮಾಹೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆದಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ಇಂಗ್ಲೀಷ್ ವಿಷಯ ಮಾತ್ರ ನಡೆಯದೆ ಬಾಕಿ ಉಳಿದಿತ್ತು.

ಸರ್ಕಾರದ ನಿರ್ದೇಶನದಂತೆ ಇಂಗ್ಲೀಷ್ ವಿಷಯ ಪರೀಕ್ಷೆಯನ್ನು ಇದೇ ಜೂನ್ 18ರಂದು ನಡೆಸಲಾಗುವುದು. ಜಿಲ್ಲೆಯಲ್ಲಿ ಮಾರ್ಚ್ ಮಾಹೆಯಲ್ಲಿ ಸುಸೂತ್ರವಾಗಿ ಪರೀಕ್ಷೆ ನಡೆಸಿದಂತೆ ಜೂನ್ 18ರಂದು ಸಹ ಯಾವುದೇ ಲೋಪದೋಷಗಳಿಲ್ಲದೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕೆಂದು ನಿರ್ದೇಶನ ನೀಡಿದರು.

ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಕೊಠಡಿಗೆ ಉತ್ತಮ ಗಾಳಿ-ಬೆಳಕಿನ ವ್ಯವಸ್ಥೆ, ಪರೀಕ್ಷೆ ಬರೆಯಲು ಸುಸ್ಥಿತಿಯಲ್ಲಿರುವ ಮೇಜುಗಳ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.

ಕೋವಿಡ್-19 ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷೆ ಬರೆಯಲು ಬರುವ ಎಲ್ಲಾ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಥರ್ಮಲ್ ಸ್ಕ್ರಿನಿಂಗ್‍ಗೆ ಒಳಪಡಿಸಬೇಕು. ವಿದ್ಯಾರ್ಥಿಗಳು ಸೇರಿದಂತೆ ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾದವರೆಲ್ಲರೂ ಮಾಸ್ಕ್ ಧರಿಸಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮುನ್ನ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸಬೇಕೆಂದರಲ್ಲದೆ, ಪರೀಕ್ಷಾ ಕೊಠಡಿಗಳು ಮಳೆ ನೀರು ಸೋರದಂತೆ ಎಚ್ಚರಿಕೆ ವಹಿಸಬೇಕು ಸೂಚಿಸಿದರು.

ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯಕ್ಕೆ ಒಂದು ಗಂಟೆ ಮುನ್ನ ಪರೀಕ್ಷಾ ಕೇಂದ್ರದಲ್ಲಿ ಹಾಜರಿರುವಂತೆ ಸೂಚನೆ ನೀಡಬೇಕು. ಥರ್ಮಲ್ ಸ್ಕ್ರಿನಿಂಗ್ ಪ್ರಕ್ರಿಯೆಯನ್ನು ಸಾಮಾಜಿಕ ಅಂತರ ಕಾಪಾಡಿಕೊಂಡು ನಡೆಸಬೇಕೆಂದರಲ್ಲದೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆತಂಕ/ಗೊಂದಲಗಳು ಸೃಷ್ಟಿಯಾಗದಂತೆ ಸುಲಲಿತ ವಾತಾವರಣ ಕಲ್ಪಿಸಬೇಕು.

ಕಂಟೋನ್‍ಮೆಂಟ್ ವಲಯದಿಂದ ಬಂದ ವಿದ್ಯಾರ್ಥಿಗಳು ಹಾಗೂ ಕೆಮ್ಮು/ನೆಗಡಿ/ಜ್ವರ ಕಾಣಿಸಿಕೊಂಡ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕೆಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?