Friday, March 29, 2024
Google search engine
Homeತುಮಕೂರು ಲೈವ್ಉಪ ಮುಖ್ಯಮಂತ್ರಿ ವಿರುದ್ಧ ಸಹಿ ಸಂಗ್ರಹ ಇಲ್ಲ

ಉಪ ಮುಖ್ಯಮಂತ್ರಿ ವಿರುದ್ಧ ಸಹಿ ಸಂಗ್ರಹ ಇಲ್ಲ

ತುಮಕೂರು: ಉಪಮುಖ್ಯಮಂತ್ರಿಯ ವಿರುದ್ಧ ಸಹಿ ಸಂಗ್ರಹವನ್ನು ಮಾಡಿಲ್ಲ, ಮಾಡುತ್ತಿದ್ದೇನೆಂದು ಅಧಿಕೃತವಾಗಿ ಮಾಧ್ಯಮಗಳ ಮುಂದೆಯೂ ಹೇಳಿಲ್ಲ ಎಂದು ಶಾಸಕ ರೇಣುಕಾಚಾರ್ಯ ಸ್ಪಷ್ಟಪಡಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಉಪಮುಖ್ಯಮಂತ್ರಿಗಳ ವಿರುದ್ದ ಸಹಿ ಸಂಗ್ರಹ ನಡೆದಿರುವ ಬಗ್ಗೆಯೂ ಮಾಹಿತಿ ಇಲ್ಲ. ನಾನು ಯಾರ ವಿರುದ್ದವೂ ಇಲ್ಲ. ಆದರೆ ಶಾಸಕರು, ವಿಧಾನಪರಿಷತ್ ಸದಸ್ಯರು ಮತ್ತು ಕಾರ್ಯಕರ್ತರ ಭಾವನೆಗಳನ್ನು ಪಕ್ಷದ ರಾಜ್ಯಾಧ್ಯಕ್ಷರಿಗೆ ತಿಳಿಸಿದ್ದೇನೆ. ವಿಷಯ ಎಲ್ಲಿಗೆ ಮುಟ್ಟಬೇಕೋ ಅಲ್ಲಿಗೆ ತಲುಪಿದೆ ಎಂದು ಹೇಳಿದರು.

ಹದಿನೈದು ದಿನಗಳ ಹಿಂದೆ ದಾವಣಗೆರೆ ಮತ್ತು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ವಿರುದ್ಧ ಶಾಸಕರ ಅಭಿಪ್ರಾಯಗಳನ್ನು ಬಹಿರಂಗಪಡಿಸಿದ್ದೆ. ಅವು ನನ್ನ ಅಭಿಪ್ರಾಯಗಳಾಗಿರಲಿಲ್ಲ. ಮುಖ್ಯಮಂತ್ರಿಗಳು ನನಗೆ ಬೆಂಬಲವನ್ನು ವ್ಯಕ್ತಪಡಿಸಿಲ್ಲ. ಸಹಿ ಸಂಗ್ರಹ ಮಾಡಿಲ್ಲವೆಂದ ಮೇಲೆ ಆ ಪ್ರಶ್ನೆ ಎಲ್ಲಿ ಬಂತು ಎಂದು ತಿಳಿಸಿದರು.

ಬಹುತೇಕ ಶಾಸಕರು ಮತ್ತು ಕಾರ್ಯಕರ್ತರ ಅಭಿಪ್ರಾಯಗಳನ್ನು ನಳಿನ್ ಕುಮಾರ್ ಕಟೀಲ್ ಅವರ ಮೂಲಕ ಎಲ್ಲಿಗೆ ತಲುಪಬೇಕೋ ಅಲ್ಲಿಗೆ ಹೋಗಿ ತಲುಪಿವೆ. ಸಮರ್ಥ ಮುಖ್ಯಮಂತ್ರಿ ಇದ್ದಾರೆ. ಅವರಿದ್ದಾ ಉಪಮುಖ್ಯಮಂತ್ರಿ ಬೇಕೆ ಎಂದು ಹಲವರು ಪ್ರಶ್ನಿಸಿದ್ದಾರೆ. ಅದನ್ನಷ್ಟೇ ವ್ಯಕ್ತಪಡಿಸಿದ್ದೇನೆ. ನಾನು ಸಹಿ ಸಂಗ್ರಹ ಮಾಡಿಯೂ ಇಲ್ಲ. ಮಾಡುವಂತೆ ಹೇಳಿಯೂ ಇಲ್ಲ ಎಂದು ಪುನರುಚ್ಚರಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರೈತರ ಸಮಾವೇಶದಲ್ಲಿ 14 ಪುರುಷರು ಮತ್ತು 16 ಮಂದಿ ಮಹಿಳಾ ರೈತರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ತುಮಕೂರು ಕಾರ್ಯಕ್ರಮ ಅಭೂತಪೂರ್ವವಾಗಿ ನೆರವೇರಲಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?