Thursday, March 28, 2024
Google search engine
Homeತುಮಕೂರು ಲೈವ್ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ; ಅರ್ಜಿ ಆಹ್ವಾನ

ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ; ಅರ್ಜಿ ಆಹ್ವಾನ

Publicstory. in


ತುರುವೇಕೆರೆ: ಆದಿಚುಂಚನಗಿರಿ ಮಠದ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಅವರ ಮಾರ್ಗದರ್ಶನದಂತೆ ತಾಲ್ಲೂಕಿನ ಒಕ್ಕಲಿಗ ಸಮುದಾಯದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡುತ್ತಿದ್ದು ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು ಡಿ.10ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಒಕ್ಕಲಿಗ ಸಮುದಾಯದ ತಾಲ್ಲೂಕು ಅಧ್ಯಕ್ಷ ಪಿ.ಎಚ್.ಧನಪಾಲ್ ತಿಳಿಸಿದರು.

ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿರುವ ಒಕ್ಕಲಿಗ ಸಮುದಾಯ ಭವನದಲ್ಲಿ ನಡೆದ ಪ್ರತಿಭಾಪುರಸ್ಕಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ತಾಲ್ಲೂಕಿನಲ್ಲಿರುವ ಒಕ್ಕಲಿಗ ಸಮುದಾಯದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಶೇ.90 ಅಂಕಗಳಿಗಿಂತ ಮೇಲ್ಪಟ್ಟ ಹಾಗು ಪಿಯುಸಿಯಲ್ಲಿ ಶೇ.85ಕ್ಕಿಂತ ಮೇಲ್ಪಟ್ಟ ಅಂಕಗಳನ್ನು ಪಡೆದ ತಾಲ್ಲೂಕಿನ ಎಲ್ಲ ಅರ್ಹ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಹಾಗು ಅಗತ್ಯ ದಾಖಲೆಗಳೊಂದಿಗೆ ತಾಲ್ಲೂಕು ಒಕ್ಕಲಿಗ ಸಮುದಾಯದ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವಿದ್ಯಾನಿಧಿಯಿಂದ ಹಾಗು ದಾನಿಗಳಿಂದ ಸಂಗ್ರಹಿಸಿದ ಹಣದಿಂದ ಒಕ್ಕಲಿಗ ಸಮುದಾಯದ ಬಡ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೆ ನೆರವು ನೀಡುವ ಯೋಜನೆಯನ್ನು ನಮ್ಮ ಸಂಘವು ಸಹ ಹೊಂದಿದೆ.

ರಾಜ್ಯದಲ್ಲಿ ಸಾವಿರಾರು ವರ್ಷಗಳ ಚಾರಿತ್ರಿಕ ಇತಿಹಾಸವಿರುವ ಒಕ್ಕಲಿಗರು. ಆ ಸಮುದಾಯದ ಏಳಿಗೆಗೆ ನಿಗಮ ಮಂಡಳಿಯೊಂದನ್ನು ಸ್ಥಾಪಿಸಿ, ಈಗಿರುವ ಮೀಸಲಾತಿಯ ಪ್ರಮಾಣವನ್ನು ಹೆಚ್ಚಿಸ ಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಒಕ್ಕಲಿಗ ಸಮುದಾಯದ ಉಪಾಧ್ಯಕ್ಷ ಚಂದ್ರೇಗೌಡ, ಖಜಾಂಚಿ ಉಗ್ರೇಗೌಡ, ನಿರ್ದೇಶಕರುಗಳಾದ ಶ್ರೀನಿವಾಸ್, ರಾಜಣ್ಣ, ವ್ಯವಸ್ಥಾಪಕ ಶಂಕರಪ್ಪ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?