Friday, March 29, 2024
Google search engine
Homeತುಮಕೂರು ಲೈವ್ಕೆಂಪಯ್ಯ ಕೊಲೆ: ತನಿಖಾ ವೈಫಲ್ಯದ ಕಡೆ ವರದಿ ಬೊಟ್ಟು

ಕೆಂಪಯ್ಯ ಕೊಲೆ: ತನಿಖಾ ವೈಫಲ್ಯದ ಕಡೆ ವರದಿ ಬೊಟ್ಟು

ತುರುವೇಕೆರೆ: ಇಲ್ಲಿನ ಗಿರಿಯನಹಳ್ಳಿ ಕೆಂಪಯ್ಯ ನಿಗೂಢ ಸಾವು ಪ್ರಕರಣದಲ್ಲಿ ಪೊಲೀಸರು ದೂರುದಾರರ ಮನವಿಯ ಅಂಶಗಳನ್ನ ಪರಿಗಣಿಸಿಲ್ಲ.

ತನಿಖೆಯ ಪ್ರಾಥಮಿಕ ಹಂತದ ಕ್ರಮಗಳನ್ನು ಕೈಗೊಂಡಿಲ್ಲಅಶಕ್ತ ಕುಟುಂಬದ ರಕ್ಷಣೆಗೆ ಮುಂದಾಗಿಲ್ಲ. ಸರಿಯಾಗಿ ತನಿಖೆಯನ್ನು ನಡೆಸದೆ ಪೊಲೀಸ್ ಇಲಾಖೆ ಮತ್ತು ಸರ್ಕಾರ ಸಂಪೂರ್ಣ ವಿಫಲ ವಾಗಿದೆ ಎಂದು ಸತ್ಯಶೋಧನ ಸಮಿತಿ ಹಾಗೂ ಪಿಯುಸಿಎಲ್ ಅಧ್ಯಕ್ಷ ಕೆ.ದೊರೈರಾಜ್ ಆರೋಪಿಸಿದರು.

ತುಮಕೂರಿನ ಪತ್ರಿಕಾಭವನದಲ್ಲಿಂದು ಪಿಯುಸಿಎಲ್ ಮತ್ತು ಪರ್ಯಾಯ ಕಾನೂನು ವೇದಿಕೆ ಸದಸ್ಯರು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಸರ್ಕಾರದ ಸ್ವತ್ತನ್ನು ರಕ್ಷಿಸಲು ಮುಂದಾದ ನೌಕರರಿಗೆ ರಕ್ಷಣೆ ನೀಡಿಲ್ಲ. ಇದು ಸರ್ಕಾರದ ವೈಫಲ್ಯವಾಗಿದೆ ಎಂದು ದೂರಿದರು.

ಮೃತನ ಕುಟುಂಬದಲ್ಲಿ ಹೆಣ್ಣುಮಕ್ಕಳೇ ಇದ್ದು ಅವರಿಗೆ ರಕ್ಷಣೆ ಕೊಡಬೇಕಾದ ಪೊಲೀಸ್ ಇಲಾಖೆ ಕೈಚೆಲ್ಲಿ ಕುಳಿತಿದೆ ತರುವೇಕೆರೆಯಲ್ಲಿ ದೌರ್ಜನ್ಯಗಳು ನಡೆಯುತ್ತಿದ್ದರೂ ಬಡವರ ಗೋಳನ್ನು ಕೇಳುವವರೇ ಇಲ್ಲ.ಈ ಕೂಡಲೇ ಮೃತನ ಕುಟುಂಬಕ್ಕೆ ರಕ್ಷಣೆ ನೀಡಬೇಕು. ಕೆಂಪಯ್ಯ ನಿಗೂಢ ಸಾವು ಪ್ರಕರಣವನ್ನು ಸೂಕ್ತ ತನಿಖೆ ನಡೆಸಬೇಕು ಬಡಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಮೃತ ಕೆಂಪಯ್ಯ ಪುತ್ರಿ ಚೈತ್ರ ಮಾತನಾಡಿ, ನಮಗೆ ಜೀವಬೆದರಿಕೆ ಇದೆ. ನಮಗೆ ರಕ್ಷಣೆ ಬೇಕು. ಮನೆಯಲ್ಲಿ ವಾಸಿಸಲು ಕಷ್ಟವಾಗಿದೆ. ನಮಗೆ ನ್ಯಾಯ ದೊರಕಿಸಿಕೊಡಬೇಕು. ಹಣ್ಣುಮಕ್ಕಳೇ ಇರುವುದರಿಂದ ರಕ್ಷಣೆ ಕೊಡಬೇಕು. ನಮ್ಮ ತಂದೆಯ ಸಾವಿಗೆ ಕಾರಣವಾಗಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕು. ಆ ಮೂಲಕ ನ್ಯಾಯ ದೊರಕಿಸಿಕೊಡಬೇಕು ಎಂದು ಮಾಧ್ಯಮದವರಿಗೆ ಮನವಿ ಮಾಡಿದರು

ಪರ್ಯಾಯ ಕಾನೂನು ವೇದಿಕೆಯ ಸದಸ್ಯ ಹಾಗೂ ಹೈಕೋರ್ಟ್ ವಕೀಲ ಎಸ್. ಶಿವಮಣಿಥನ್ ಮಾತನಾಡಿ ಕೆಂಪಯ್ಯ ನಿಗೂಡ ಸಾವು ಪ್ರಕರಣದಲ್ಲಿ ಸ್ಥಳ ಮಹಜರು ಮಾಡಿಲ್ಲ. ಎಎಸ್.ಪಿ. ಸಾಕ್ಷ್ಯಗಳನ್ನು ತುಮಕೂರಿಗೆ ಕರೆಸಿಕೊಂಡು ಹೇಳಿಕೆ ಪಡೆದಿದ್ದಾರೆ. ಘಟನೆ ಸ್ಥಳದಲ್ಲಿ ಹೇಳಿಕೆ ಪಡೆದಿಲ್ಲ.ಇದು ಪೊಲೀಸರ ವೈಪಲ್ಯ ಎಂದು ಟೀಕಿಸಿದರು.

ದಂಡಿನಶಿವರ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಗಂಗಣ್ಣ ದೂರುದಾರರಿಂದ ಒತ್ತಾಯಪೂರಕವಾಗಿ ದೂರು ನೀಡಲು ವಿಳಂಬಕ್ಕೆ ಸಂಬಂಧಿಕರ ಜೊತೆ ಚರ್ಚಿಸಿದ್ದು ಕಾರಣ ಎಂದು ಬರೆಸಿಕೊಂಡಿದ್ದಾರೆ. ಘಟನೆ ಸಂಬಂಧ ಸಾಕ್ಷ್ಯ ಸಂಗ್ರಹ ಮಾಡಿಲ್ಲ. ಆರೋಪಿಗಳು ಸ್ಥಳದಲ್ಲಿದ್ದರೂ ಅವರ ಸಿಮ್ ಮತ್ತು ಕಾಲರ್ ಐಡಿ ಡಿಟೈಲ್ ಸಂಗ್ರಹ ಮಾಡಿಲ್ಲ. ಎಎಸ್.ಪಿ. ಚಾರ್ಜ್ ಶೀಟ್ ಸಲ್ಲಿಸಿಲ್ಲ. ಮರಣೋತ್ತರ ಪರೀಕ್ಷೆಯ ವರದಿಯನ್ನು ನೀಡಿಲ್ಲ. ಪೊಲೀಸರೊಂದಿಗೆ ವೈದ್ಯರು ಶಾಮೀಲಾಗಿದ್ದಾರೆ.

ಕಂದಾಯ ಇಲಾಖೆಯೂ ಕ್ರಮ ಜರುಗಿಸಿಲ್ಲ. ಪೊಲೀಸ್, ವೈದ್ಯರ ಲೋಪಗಳು ಎದ್ದುಕಾಣುತ್ತವೆ ಎಂದು ಆರೋಪಿಸಿದರು.
ಎಫ್ ಐಆರ್ ದಾಖಲಿಸಿ ತಿಂಗಳು ಕಳೆದರೂ ಚಾರ್ಜ್ ಶೀಟ್ ಸಲ್ಲಿಸಿಲ್ಲ.

ಪತ್ರಿಕಾಗೋಷ್ಠಿಯಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಸಂಚಾಲಕ ಎ.ನರಸಿಂಹಮೂರ್ತಿ, ಸತ್ಯಶೋಧನ ಸಮಿತಿಯ ಸದಸ್ಯ ಟಿ.ವಿ.ನರಸಿಂಹಪ್ಪ, ಪರ್ಯಾಯ ಕಾನೂನು ವೇದಿಕೆಯ ಬಸವಪ್ರಸಾದ್ ಕುನಾಲೆ, ಪಿಯುಸಿಎಲ್ ಉಪಾಧ್ಯಕ್ಷೆ ದೀಪಿಕ, ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್, ಎನ್.ಕೆ.ಸುಬ್ರಮಣ್ಯ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?