ತುಮಕೂರು ಲೈವ್

ಕೊನೆಯುಸಿರೆಳೆದ ಭೂಗತ ದೊರೆ

ತುಮಕೂರು

ಭೂಗತ ಲೋಕದ ಮಾಜಿ ದೊರೆ ಹಾಗೂ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ನಿಧನರಾಗಿದ್ದಾರೆ.

ಕೆಲವು ವರ್ಷಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಮುತ್ತಪ್ಪ ರೈ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಕೆಲದಿನಗಳಿಂದ ಅವರ ಆರೊಗ್ಯ ಸ್ಥಿತಿ ಗಂಭೀರವಾಗಿತ್ತು.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಬೆಳಗ್ಗೆ 8 ಗಂಟೆಗೆ ಮಗ ರಿಕಿ ರೈ ಮಾಧ್ಯಮಗಳಿಗೆ ಮಾಹಿತಿ ನೀಡಲಿದ್ದಾರೆ.

ಹಲವು ವರ್ಷಗಳ ಕಾಲ ಇಡೀ ಭೂಗತ ಜಗತ್ತನ್ನು ಆಳಿದ ಮುತ್ತಪ್ಪ ರೈ, ನಂತರ ಅದರಿಂದ ಹೊರ ಬಂದು ವಿಭಿನ್ನ ಬದುಕು ಕಟ್ಟಿಕೊಂಡಿದ್ದರು.

ಮೂಲತಃ ಪುತ್ತೂರಿನ ಕೆಯ್ಯೂರು ನಿವಾಸಿಯಾಗಿದ್ದ ಮುತ್ತಪ್ಪ ರೈ ಅವರು ಬೆಂಗಳೂರಿನ ಬಿಡದಿ ಬಳಿ ವಾಸವಾಗಿದ್ದರು. ಜಯ ಕರ್ನಾಟಕ ಹೆಸರಿನಲ್ಲಿ ಸಂಘಟನೆ ಕಟ್ಟಿಕೊಂಡಿದ್ದರು.

Comment here