Friday, March 29, 2024
Google search engine
Homeತುಮಕೂರು ಲೈವ್ಕೊರೊನಾ: ಕೈ‌‌‌ಚೆಲ್ಲುತ್ತಿದ್ದಾರಾ ಉಸ್ತುವಾರಿ ಸಚಿವರು?

ಕೊರೊನಾ: ಕೈ‌‌‌ಚೆಲ್ಲುತ್ತಿದ್ದಾರಾ ಉಸ್ತುವಾರಿ ಸಚಿವರು?

ತುಮಕೂರು: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣ ನಮ್ಮ ಕೈ ಮೀರಿ ಹೋಗುತ್ತಿದೆ ಎಂದು ಹೇಳುವ ಮೂಲಕ ಯುದ್ಧಕ್ಕೆ ಮೊದಲೇ ಉಸ್ತುವಾರಿ ಸಚಿವರು ಕೈ ಚೆಲ್ಲುತ್ತಿದ್ದಾರ ಎಂಬ ಅನುಮಾನ ಮೂಡುವಂತಿದೆ.

ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಸಾವಿರ ಗಡಿ ದಾಟಿದರೂ ಅಲ್ಲಿ ನಿರ್ವಹಣೆ ಮಾಡಲಾಗುತ್ತಿದೆ. ಮುನ್ನೂರರ ಗಡಿ ದಾಟಿಲ್ಲದ ಜಿಲ್ಲೆಯಲ್ಲಿ ಈಗಲೇ ಪರಿಸ್ಥಿತಿ ಕೈ ಮೀರುತ್ತಿದೆ ಎಂದರೆ ಏನರ್ಥ ಎಂದು ಜನರು ಕೇಳುವಂತಾಗಿದೆ.

ಲಾಕ್ ಡೌನ್ ಸಮಯ ಸೇರಿದಂತೆ ಪರಿಸ್ಥಿತಿ ನಿಭಾಯಿಸಲು ಇಲ್ಲಿಯವರೆಗೂ ಸಿಕ್ಕ ಸಮಯದಲ್ಲಿ ಜಿಲ್ಲಾಡಳಿತ ಏನು ಮಾಡುತ್ತಿತ್ತು. ಉಸ್ತುವಾರಿ ಸಚಿವರಿಗೆ ಇದೆಲ್ಲ ಗೊತ್ತಿರಲಿಲ್ಲವೇ ಎಂಬ ಪ್ರಶ್ನೆ ಮೂಡುತ್ತದೆ.

ಅವರದೇ ಪಕ್ಷದ ಮುಖಂಡರಾದ ಸೊಗಡು ಶಿವಣ್ಣ ತಮ್ಮ ಹೋಟೆಲ್ ಬಿಟ್ಟು ಕೊಡುವುದಾಗಿ ಹೇಳಿ ಎಷ್ಟು ತಿಂಗಳು ಕಳೆದಿವೆ. ಸಂಸದರು ತಮ್ಮ ಒಡೆತನ ಸಿಐಟಿ ಕಾಲೇಜು ಬಿಟ್ಟು ಕೊಡುವುದಾಗಿ ಹೇಳಿ ಎಷ್ಟು ತಿಂಗಳಾಗಿವೆ. ಇಲ್ಲಿ ಕೋವಿಡ್ ರೋಗಿಗಳ ನಿರ್ವಹಣಾ ಕೇಂದ್ರ ತೆರೆಯಲು ಜಿಲ್ಲಾಡಳಿತಕ್ಕೆ, ಉಸ್ತುವಾರಿ ಸಚಿವರಿಗೆ ಏನು ಅಡ್ಡಿಯಾಗಿತ್ತು ಎಂಬುದನ್ನು ಜನರ ಮುಂದೆ ಇಡಬೇಕಾಗಿದೆ ಎಂದು ಜನರು ಕೇಳುತ್ತಿದ್ದಾರೆ.

ರೋಗ ಎಷ್ಟೇ ಉಲ್ಬಣಿಸಿದರೂ ಚಿಕಿತ್ಸೆ ನೀಡಲು ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುವುದನ್ನು ಬಿಟ್ಟು ಈಗ ಈ ರೀತಿ ಹೇಳುತ್ತಿರುವುದು ಸರಿ ಅಲ್ಲ ಎಂದು ಜನರು ಹೇಳುತ್ತಿದ್ದಾರೆ.

ಇಷ್ಟು ದಿನ ಏನು ಮಾಡುತ್ತಿದ್ದರು. ಏಕಾಗಿ ಮೊದಲೇ ತಯಾರಿ ನಡೆಸಲು ಸಾಧ್ಯವಿರಲಿಲ್ಲವೇ ಎಂಬ ಪ್ರಶ್ನೆ ಸಹ ಜನರಿಂದ ಕೇಳಿ ಬರುತ್ತಿವೆ.

ವಾರ್ತಾ ಇಲಾಖೆ ನೀಡಿರುವ ಉಸ್ತುವಾರಿ ಸಚಿವರ ಪತ್ರಿಕಾಗೋಷ್ಠಿಯ ವಿವರ ಹೀಗಿದೆ


ಜಿಲ್ಲಾಡಳಿತದಿಂದ ಸೂಕ್ತ ಕ್ರಮ ಕೈಗೊಳ್ಳುತ್ತಿದ್ದರೂ ಕೋವಿಡ್-19 ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವುದು ಕಳವಳಕಾರಿ ಸಂಗತಿ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಆತಂಕ ವ್ಯಕ್ತಪಡಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸೋಂಕು ಸಮುದಾಯದಲ್ಲಿ ಹರಡುತ್ತಿರುವುದು ಆಘಾತವನ್ನುಂಟು ಮಾಡಿದೆ. ಇದರಿಂದ ಸೋಂಕು ನಿಯಂತ್ರಣ ನಮ್ಮ ಕೈತಪ್ಪುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರ್ವಜನಿಕರ ಸಹಭಾಗಿತ್ವದಿಂದ ಮಾತ್ರ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ತರಬಹದು ಎಂದರು.

ಜಿಲ್ಲೆಯಲ್ಲಿ 9 ಕೋವಿಡ್ ಕೇರ್ ಸೆಂಟರ್‍ಗಳಿದ್ದು, ಈ ಸೆಂಟರ್‍ನಲ್ಲಿ ರೋಗ ಲಕ್ಷಣಗಳಿಲ್ಲದ ಅಥವಾ ಸಣ್ಣ-ಪುಟ್ಟ ಖಾಯಿಲೆಯಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರ ಖಾಯಿಲೆಯಿಂದ ಬಳಲುತ್ತಿರುವವರಿಗೆ ಈ ಸೋಂಕು ತಗುಲಿದರೆ ಗುಣಪಡಿಸುವುದು ಕಷ್ಟಸಾಧ್ಯ ಎಂದು ಹೇಳಿದರು.

ರೋಗಲಕ್ಷಣಗಳು ಕಂಡುಬಂದ ರೋಗಿಗಳಿಗೆ ಮನೆಯಲ್ಲಿಯೇ ಸ್ವಯಂ ಔಷಧೋಪಚಾರದ ಪ್ರಯೋಗ ಮಾಡಿ ರೋಗ ಉಲ್ಬಣವಾಗಿ ಅಸಹಾಯಕ ಸ್ಥಿತಿ ತಲುಪಿದಾಗ ಆಸ್ಪತ್ರೆಗೆ ಕರೆತರದೆ ರೋಗಿಯನ್ನು ತಕ್ಷಣವೇ ಪರೀಕ್ಷೆಗೊಳಪಡಿಸುವುದರಿಂದ ಅನಾಹುತಗಳನ್ನು ತಡೆಯಬಹುದೆಂದು ತಿಳಿಸಿದರು.

ಪೋಷಕರು ಮಕ್ಕಳನ್ನು ಹೊರಗಡೆ ಬಿಡಬಾರದು. ಮಕ್ಕಳಿಗೆ ರೋಗ ತಗುಲಿದರೆ ನಿಯಂತ್ರಿಸುವುದು ಬಹಳ ಕಷ್ಟ ಎಂದರಲ್ಲದೆ ಸೋಂಕಿತರು ಗುಣಮುಖರಾದ ಕೂಡಲೇ ಎಲ್ಲೆಂದರಲ್ಲಿ ಓಡಾಡದೆ, ಸಮುದಾಯದಲ್ಲಿ ಬೆರೆಯದೆ ಕನಿಷ್ಟ ಒಂದು ವಾರಗಳ ಕಾಲ ಹೋಮ್ ಕ್ವಾರೆಂಟೈನ್‍ಗೊಳಗಾಗಬೇಕು ಎಂದು ಸಲಹೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?