Thursday, March 28, 2024
Google search engine
Homeತುಮಕೂರು ಲೈವ್ಕೊರೊನಾ: ತುಮಕೂರಿನಲ್ಲಿ ಇನ್ನೂ ಬರಬೇಕಾಗಿದೆ 650 ಮಂದಿ ವರದಿ

ಕೊರೊನಾ: ತುಮಕೂರಿನಲ್ಲಿ ಇನ್ನೂ ಬರಬೇಕಾಗಿದೆ 650 ಮಂದಿ ವರದಿ

Publicstory.in


Tumkuru: ಜಿಲ್ಲೆಯಲ್ಲಿ ಶಂಕಿತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಭಾನುವಾರ ಒಂದೇ ದಿನ 304 ಜನರ ಸ್ಯಾಬ್ ಪರೀಕ್ಷೆ ನಡೆಸಲಾಗಿದೆ.

ಜಿಲ್ಲೆಯಲ್ಲಿ ಈಗಾಗಲೇ ಹನ್ನೊಂದು ಮಂದಿಗೆ ದೃಢಪಟ್ಟಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ.‌ ಇಬ್ಬರು ಗುಣಮುಖರಾಗಿ ಮನೆ ಸೇರಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿರುವ ಜಿಲ್ಲಾಡಳಿತ ಮನೆ ಮನೆ ಸಮೀಕ್ಷೆ ಆರಂಭಿಸಿದೆ.

ಅನುಮಾನ ಬಂದವರ ರಕ್ತ, ಸ್ಯಾಬ್ ಮಾದರಿಯನ್ನು ಪರೀಕ್ಷೆ ಮಾಡಲಾಗುತ್ತಿದೆ. ಹೀಗಾಗಿ ಟೆಸ್ಟ್ ಸಂಖ್ಯೆ ಹೆಚ್ಚಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಒಂದು ಪಾಸಿಟಿವ್ ಬಾರದೇ ಇರುವುದು ಸಮಾಧಾನ ತಂದಿದೆ.

ಪರೀಕ್ಷೆಗೆ ಕಳುಹಿಸಿರುವ ವರದಿಗಳ ಫಲಿತಾಂಶ ನೋಡಬೇಕಾಗಿದೆ.

ಲಾಕ್ ಡೌನ್ ಸಡಿಲ ಗೊಳಿಸಿರುವ ಹಿನ್ನೆಲೆಯಲ್ಲಿ ಜನರು ಮತ್ತಷ್ಟು ಜಾಗರೂಕರಾಗಿರಬೇಕು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

_ಇಲ್ಲಿಯವರೆಗೆ ಪರೀಕ್ಷೆ ಮಾಡಿದ 6000ಕ್ಕೂ ಹೆಚ್ಚಿನ ಜನರಲ್ಲಿ ನೆಗಟಿವ್ ಬಂದಿದೆ.

ವೈದ್ಯರ ಸಲಹಾ ಚೀಟಿಯಿಲ್ಲದೆ ಜ್ವರ, ಶೀತ, ಕೆಮ್ಮು, ಸಾರಿ ಹಾಗೂ ಐಎಲ್‍ಐಗೆ ಸಂಬಂಧಪಟ್ಟಂತಹ ಯಾವುದೇ ಔಷಧಗಳನ್ನು ವಿತರಣೆ/ಮಾರಾಟ ಮಾಡಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ರಾಕೇಶ್‍ಕುಮಾರ್ ಔಷಧ ವ್ಯಾಪಾಸ್ಥರಿಗೆ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19ಗೆ ಸಂಬಂಧಿಸಿದಂತೆ ಜಿಲ್ಲಾ ಔಷಧ ವ್ಯಾಪಾರಸ್ಥರ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುನ್ನಚ್ಚರಿಕಾ ಕ್ರಮವಾಗಿ ಮೆಡಿಕಲ್ ಸ್ಟೋರ್‍ಗಳಲ್ಲಿ ಔಷಧಿ ಕೊಳ್ಳಲು ಬರುವ ರೋಗಿ ಮತ್ತು ಅವರನ್ನು ತಪಾಸಣೆ ಮಾಡಿರುವ ವೈದ್ಯರ ದೂರವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಪಡೆಯಬೇಕು. ಅಲ್ಲದೇ ಈ ಮಾಹಿತಿಯನ್ನು ಸರ್ಕಾರ ನೀಡಿರುವ ವೆಬ್‍ಸೈಟ್‍ನಲ್ಲಿ ನಮೂದಿಸಬೇಕೆಂದು ಅವರು ನಿರ್ದೇಶನ ನೀಡಿದರು.

ವೈದ್ಯರ ಸಲಹಾ ಚೀಟಿಯಿಲ್ಲದೇ ಔಷಧಗಳನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದ್ದಲ್ಲಿ ಅಂತಹವರ ವಿರುದ್ಧ ಎಪಿಡೆಮಿಕ್ ಆಕ್ಟ್ ಅಡಿಯಲ್ಲಿ ಸೂಕ್ತ ಕ್ರಮ ಜರುಗಿಸಿ ಪರವಾನಗಿಗಳನ್ನು ರದ್ದುಪಡಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?