Thursday, March 28, 2024
Google search engine
Homeತುಮಕೂರು ಲೈವ್ಕೊರೊನಾ: ಹೂ ಬೆಳೆಗಾರರಿಗೆ ₹ 25,000 ದವರೆಗೂ ಪರಿಹಾರ

ಕೊರೊನಾ: ಹೂ ಬೆಳೆಗಾರರಿಗೆ ₹ 25,000 ದವರೆಗೂ ಪರಿಹಾರ

ತುರುವೇಕೆರೆ: ಲಾಕ್ಡೌನ್ನಿಂದ ತೀವ್ರ ಸಂಕಷ್ಟಕ್ಕೊಳಗಾದ ತಾಲ್ಲೂಕಿನ ಹೂ ಬೆಳೆಯುವ ಬೆಳೆಗಾರರಿಗೆ ಸರ್ಕಾರದಿಂದ ಪರಿಹಾರಧನ ಘೋಷಣೆಯಾಗಿದ್ದು ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸ ಬಹುದಾಗಿದೆ.

ಗರಿಷ್ಠ 1 ಹೆಕ್ಟೇರ್ ವರೆಗಿನ ಹೂ ಬೆಳೆಗಾರರಿಗೆ 25 ಸಾವಿರದಂತೆ. ಅದಕ್ಕಿಂತ ಕಡಿಮೆ ಇರುವ ಹೂ ಬೆಳೆಗಾರರಿಗೆ ವಿಸ್ತೀರ್ಣಕ್ಕೆ ಅನುಗುಣವಾಗಿ ಪರಿಹಾರಧನ ನೀಡಲಾಗುವುದು.

2019-20 ನೇ ಸಾಲಿನ ಬೆಳೆ ಸಮೀಕ್ಷೆಯಲ್ಲಿನ ಹೂ ಬೆಳೆಗಾರರ ದೃಢೀಕರಿಸಿದ ಪಟ್ಟಿಯನ್ನು ತಾಲ್ಲೂಕು ಮಟ್ಟದಲ್ಲಿ ತೋಟಗಾರಿಕೆ ಕಚೇರಿ, ತಾಲ್ಲೂಕು ಕಚೇರಿ, ಗ್ರಾಮಪಂಚಾಯಿತಿ ಹಾಗೂ ರೈತ ಸಂಪರ್ಕ ಕೇಂದ್ರಗಳ ನಾಮಫಲಕಗಳಲ್ಲಿ ಪ್ರದರ್ಶಿಸಲಾಗುವುದು.

ಸದರಿ ಪಟ್ಟಿಯಲ್ಲಿ ಇರುವ ರೈತರು ಯಾವುದೇ ಅರ್ಜಿ ಹಾಗೂ ದಾಖಲಾತಿಗಳನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಬೆಳೆಸಮೀಕ್ಷೆ ಪಟ್ಟಿಯಲ್ಲಿ ಇಲ್ಲದಿರುವ ಇತರೆ ರೈತರು ಪ್ರಾಮಾಣಿಕವಾಗಿ ಹೂ ಬೆಳೆದಿದ್ದಲ್ಲಿ ಸಂಬಂಧಪಟ್ಟ ತಾಲ್ಲೂಕಿನ ತೋಟಗಾರಿಕೆ ಕಚೇರಿಯಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳಾದ ಪಹಣಿ, ಆಧಾರ್ಕಾರ್ಡ್, ರೈತರ ಬ್ಯಾಂಕ್ ಪಾಸ್ಬುಕ್ ಜೆರಾಕ್ಸ್, ಬೆಳೆಯ ಸ್ವಯಂ ದೃಢೀಕರಣದೊಂದಿಗೆ ಮೇ.16ರಿಂದ ಮೇ.28 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಹಾಗು ಹೋಬಳಿಮಟ್ಟದ ತೋಟಗಾರಿಕಾ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಟಿ.ಆಂಜನೇಯರೆಡ್ಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?