Friday, March 29, 2024
Google search engine
Homeತುಮಕೂರ್ ಲೈವ್ಕೋರಾದ ಅಂಕಿತಾ ಪ್ತಶ್ನೆಗೆ ದಂಗು ಬಡಿದರು...

ಕೋರಾದ ಅಂಕಿತಾ ಪ್ತಶ್ನೆಗೆ ದಂಗು ಬಡಿದರು…

ಕೋರ ಗ್ರಾಮ ಪಂಚಾತಿಯು ಮಕ್ಕಳ ಗ್ರಾಮ ಸಭೆಯನ್ನು ಗ್ರಾಮ ಪಂಚಾತಿಯ ಆವರಣದಲ್ಲಿ ನಡೆಸಲಾಯಿತು. ಮಕ್ಕಳ ಗ್ರಾಮ ಸಭೆಯಲ್ಲಿ ಸರ್ಕಾರಿ ಶಾಲೆ ಏಳನೇ ತರಗತಿ ಅಂಕಿತ ಶಾಲಾ ಆವರಣದಲ್ಲಿ ವಿದ್ಯುತ್ ಕಂಬ ಇದ್ದು ಅದನ್ನು ತಕ್ಷಣವೇ ತೆರವುಗೊಳಿಸುವಂತೆ ಒತ್ತಾಯಿಸಿದರು.

ಜಿಲ್ಲಾ ಮಕ್ಕಳ ತನಿಖಾ ಸಮಿತಿಯ ಕೆ.ಟಿ ತಿಪ್ಪೇಸ್ವಾಮಿ ಪ್ರಾಸ್ತಾವಿಕ ಮಾತನಾಡಿದರು. ಜೀವಿಸುವ ಹಕ್ಕು ರಕ್ಷಣಾ ಹಕ್ಕು, ಭಾಗವಹಿಸುವ ಹಕ್ಕು, ವಿಕಾಸ ಹೊಂದುವ ಹಕ್ಕುಗಳ ಬಗ್ಗೆ ತಿಳುವಳಿಕೆ ಮೂಡಿಸಿದರು.

ಭಾರತ ಸರ್ಕಾರ ಮಕ್ಕಳ ಹಕ್ಕುಗಳ ಒಡಂಬಡಿಕೆ ವಿಶ್ವ ಸಂಸ್ಥೆಗೆ ಸಲ್ಲಿಸಿ 30 ವರ್ಷ ಕಳೆದಿದೆ. ಭಾರತದಲ್ಲಿ ಒಟ್ಟು ಜನಸಂಖ್ಯೆಯಲ್ಲಿ 40ರಷ್ಟು ಮಕ್ಕಳಿದ್ದಾರೆ. ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ರಾಜ್ಯದ ಎಲ್ಲಾ ಪಂಚಾಯತಿಗಳು ಕೂಡ ಮಕ್ಕಳ ಗ್ರಾಮಸಭೆ ನಡೆಸಬೇಕು. ಮಕ್ಕಳ ಹಕ್ಕುಗಳ ಕುಂದು ಕೊರತೆಗಳು ಮತ್ತು ಸಮಸ್ಯೆಗಳನ್ನು ಹಂಚಿಕೊಳ್ಳಲು ಒಂದು ವೇದಿಕೆ ಕೊಡಬೇಕು.

ವೇದಿಕೆ ಬಳಸಿಕೊಳ್ಳಲು ಅವಕಾಶ ನೀಡಬೇಕು. ಊರು, ಶಾಲೆಯ ಹಾಗೂ ವ್ಯಯಕ್ತಿಕ ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳಬಹುದು ಎಂದರು.

ಮಕ್ಕಳ ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷ ನಜೀರ್ ಅಹಮ್ಮದ್ ಮಾತನಾಡಿ ನಮ್ಮ ಪಂಚಾಯತಿ ಹಿಂದಿನ ಮಕ್ಕಳ ಗ್ರಾಮ ಸಭೆಯಲ್ಲಿ ಕೇಳಿದ ಸಮಸ್ಯೆಗಳನ್ನು ನಾವು ಬಗೆಹರಿಸಿದ್ದೇವೆ. ಮಕ್ಕಳು ತಮ್ಮ ಹಕ್ಕುಗಳನ್ನು ಪ್ರತಿಪಾದಿಸಿದ್ದಾರೆ. ಮಕ್ಕಳು ಕೇಳಿದ ಸಮಸ್ಯೆಗೆಳು ನಾವು ಬಗೆಹರಿಸಿದ ಮೇಲೆ ಅದನ್ನು ಕಾಪಾಡಿಕೊಳ್ಳುವುದು ನಿಮ್ಮ ಕರ್ತವ್ಯ ಎಂದು ಹೇಳಿದರು.

ಸಭೆಯಲ್ಲಿ 9 ಶಾಲೆಯ 121 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು ಮಕ್ಕಳು 31 ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳುವ ಮೂಲಕ ತಮ್ಮ ಶಾಲೆಯ, ಊರಿನ, ನೆರೆಹೊರೆ ಹಾಗೂ ವೈಯಕ್ತಿಕ ಸಮಸ್ಯೆಗಳನ್ನು ಕೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?