Saturday, April 13, 2024
Google search engine
Homeತುಮಕೂರು ಲೈವ್ಕೋವಿಡ್: ತುಮಕೂರು ಖಾಸಗಿ ಆಸ್ಪತ್ರೆ ಗಳಲ್ಲಿ 2500 ಹಾಸಿಗೆ ಲಭ್ಯ

ಕೋವಿಡ್: ತುಮಕೂರು ಖಾಸಗಿ ಆಸ್ಪತ್ರೆ ಗಳಲ್ಲಿ 2500 ಹಾಸಿಗೆ ಲಭ್ಯ

Publicstory


ತುಮಕೂರು: ಕೋವಿಡ್ ಪರೀಕ್ಷೆ ಹೆಸರಲ್ಲಿ ಬೇರೆಡೆಗೆ ಕಳುಹಿಸದೆ ಆಸ್ಪತ್ರೆಯಲ್ಲಿರುವ ಸೌಲಭ್ಯಗಳನ್ನು ಬಳಿಸಿಕೊಂಡು ಪರೀಕ್ಷೆ ನಡೆಸಿ ಚಿಕಿತ್ಸೆ ನೀಡಬೇಕು ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಖಾಸಗಿ ಆಸ್ಪತ್ರೆಗಳ ವೈದ್ಯರಿಗೆ ಸೂಚನೆ ನೀಡಿದರು.

ತುಮಕೂರು ನಗರದಲ್ಲಿರುವ ಖಾಸಗಿ ಆಸ್ಪತ್ರೆಗಳು ಒಗ್ಗೂಡಿ ಅಶ್ವಿನಿ ಆಯುರ್ವೇಧಿಕ್ ಆಸ್ಪತ್ರೆಯಲ್ಲಿ ತೆರೆದಿರುವ ಕೋವಿಡ್ ಆಸ್ಪತ್ರೆ ವೀಕ್ಷಿಸಿದ ನಂತರ ಖಾಸಗಿ ಆಸ್ಪತ್ರೆಗಳ ವೈದ್ಯರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್-19ನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಕೋೀವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡುವುದು ನಿಮ್ಮ ಕರ್ತವ್ಯವಾಗಿದೆ. ಆಸ್ಪತ್ರೆಗೆ ಬರುವವರನ್ನು ಚಿಕಿತ್ಸೆ ನೀಡದೆ ಕೋವಿಡ್ ಪರೀಕ್ಷೆಯ ವರದಿ ಕೇಳಿ ವಾಪಸ್ಸು ಕಳುಹಿಸಿದರೆ ಹೇಗೆ ? ತುರ್ತು ಸಂದರ್ಭದಲ್ಲಿ ಬರುವ ರೋಗಿಗಳಿಗೆ ಮೊದಲು ಚಿಕಿತ್ಸೆ ನೀಡಿ ಬಡವರ ಸೇವೆ ಮಾಡಿದರೆ ನಿಮ್ಮ ವೃತ್ತಿಗೆ ಗೌರವ ಬರುತ್ತದೆ ಎಂದರು.

ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆಗಳನ್ನು ಕೋವಿಡ್-19 ಚಿಕಿತ್ಸೆಗಾಗಿ ಮೀಸಲಿಡಬೇಕು, ಅದರಂತೆ ಜಿಲ್ಲೆಯಲ್ಲಿ 80 ಖಾಸಗಿ ಆಸ್ಪತ್ರೆಗಳಿವೆ. ತುಮಕೂರು ನಗರದಲ್ಲಿಯೇ 39 ಖಾಸಗಿ ಆಸ್ಪತ್ರೆಗಳಿವೆ. ಅವುಗಳಲ್ಲಿ ಲಭ್ಯವಿರುವ ಹಾಸಿಗೆ ಹಾಗೂ ಐ.ಸಿ.ಯುಗಳ ಪೈಕಿ ಶೇ.50ರಷ್ಟು ಸರ್ಕಾರಕ್ಕೆ ದೊರೆಯಲಿವೆ. ಜಿಲ್ಲೆಯಲ್ಲಿ ಸುಮಾರು 2500ಕ್ಕೂ ಹೆಚ್ಚು ಹಾಸಿಗೆಗಳು ಖಾಸಗಿ ಆಸ್ಪತ್ರೆಗಳಿಂದ ಲಭ್ಯವಾಗಲಿವೇ ಎಂದು ತಿಳಿಸಿದರು.

ವೈದ್ಯಕೀಯ ವೃತ್ತಿ ಶ್ರೇಷ್ಠವಾಗಿದ್ದು ಹಣಕ್ಕಿಂತ ಸೇವೆಗೆ ಹೆಚ್ಚಿನ ಆದ್ಯತೆ ನೀಡಬೇಕು, ಅನಾರೋಗ್ಯದಿಂದ ಆಸ್ಪತ್ರೆಗೆ ಬರುವವರಿಗೆ ಮಾಮೂಲಿನಂತೆ ಸೂಕ್ತ ಚಿಕಿತ್ಸೆ ನೀಡಿ, ಕೋವಿಡ್ ಲಕ್ಷಣವಿರುವ ರೋಗಿಗಳು ಬಂದರೆ, ಪರೀಕ್ಷೆಮಾಡಿ ಚಿಕಿತ್ಸೆ ನೀಡಬೇಕು, ಈ ಬಗ್ಗೆ ಸಂಬಂಧಿಸಿದ ಪ್ರಾಧಿಕಾರಕ್ಕೆ ವರದಿ ಮಾಡಬೇಕು. ಅವರಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಲಭ್ಯವಾದರೆ ಜೀವ ಉಳಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಕೋವಿಡ್ ನಮ್ಮ ದೇಶ ಅಲ್ಲದೆ ಇಡೀ ಪ್ರಪಂಚಕ್ಕೆ ವ್ಯಾಪಿಸಿದೆ. ನಾವೆಲ್ಲರೂ ಒಂದಾಗಿ ಕೋವಿಡ್ ವಿರುದ್ದ ಹೋರಾಡಬೇಕು. ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಖಾಸಗೀ ಆಸ್ಪತ್ರೆಗಳು ಸರ್ಕಾರದೊಂದಿಗೆ ಕೈ ಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ಮಾತನಾಡಿ ಖಾಸಗಿ ಆಸ್ಪತ್ರೆಗಳ ಮನವಿಯಂತೆ ಕೆಲ ಆಸ್ಪತ್ರೆಗಳು ಒಗ್ಗೂಡಿ ಸರ್ಕಾರದ ಮಾರ್ಗಸೂಚಿಯನ್ವಯ ಕೋವಿಡ್ ಆಸ್ಪತ್ರೆ ತೆರೆಯಲು ಅನುಮತಿ ನೀಡಲಾಗಿದೆ, ಅದರಂತೆ ತುಮಕೂರು ನಗರದಲ್ಲಿ ಎರಡು ಕಡೆ ಕೋವಿಡ್ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳು ತೆರೆದಿವೆ ಎಂದರು.

ಸರ್ಕಾರದ ನಿರ್ದೇಶನದಂತೆ ಖಾಸಗೀ ಆಸ್ಪತ್ರೆಗಳು ಶೇ.50ರಷ್ಟು ಬೆಡ್ ಗಳನ್ನು ಸರ್ಕಾರಕ್ಕೆ ಬಿಟ್ಟುಕೊಡಬೇಕು. ಜಿಲ್ಲೆಯಲ್ಲಿ ಆರ್.ಟಿ.ಪಿಸಿಆರ್ ಲ್ಯಾಬ್ ಗಳ ಸಂಖ್ಯೆ ಹೆಚ್ಚಳ ಮಾಡುತ್ತಿರುವುದರಿಂದ ಪರೀಕ್ಷೆಗಳ ಸಂಖ್ಯೆಯಲ್ಲೂ ಹೆಚ್ಚಳವಾಗಲಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಶಾಸಕ ಜ್ಯೋತಿಗಣೇಶ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ವೀರಭದ್ರಯ್ಯ, ರೆಡ್ ಕ್ರಾಸ್ ಛೇರ್ಮನ್ ನಾಗಣ್ಣ, ಚರಕ ಆಸ್ಪತ್ರೆಯ ಡಾ. ಬಸವರಾಜ್, ಡಾ. ಪ್ರಭಾಕರ, ಡಾ. ಮಹೇಶ ಸೇರಿದಂತೆ ಖಾಸಗೀ ಆಸ್ಪತ್ರೆಯ ವೈದ್ಯರು/ಪ್ರತಿನಿಧಿಗಳು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?