Friday, March 29, 2024
Google search engine
Homeತುಮಕೂರ್ ಲೈವ್ಗಾಂಧಿ ಅಸ್ಮಿತೆ ಪಡೆಯಿರಿ: ಶಾಸಕ ಜ್ಯೋತಿಗಣೇಶ್

ಗಾಂಧಿ ಅಸ್ಮಿತೆ ಪಡೆಯಿರಿ: ಶಾಸಕ ಜ್ಯೋತಿಗಣೇಶ್

ಗಾಂಧಿಯವರ 150ನೇ ಜನ್ಮ ವರ್ಷಾಚರಣೆಯ ಅಂಗವಾಗಿ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗಾಂಧಿಯ ಜೀವನಚರಿತ್ರೆ ಕುರಿತ ಛಾಯಾಚಿತ್ರ ಪ್ರದರ್ಶನ ಹಲವು ಅಪರೂಪದ ಚಿತ್ರಗಳು ಗಮನ ಸೆಳೆದವು. ಅಕ್ಟೋಬರ್ 28ರವರೆಗೆ ಪ್ರದರ್ಶನ ಇರಲಿದೆ.

ವಾರ್ತಾ ಮತ್ತು ಪ್ರಸಾರ ಇಲಾಖೆ ಆಯೋಜಿಸಿದ್ದ ಪ್ರದರ್ಶನದಲ್ಲಿ ನೂರಾರು ಮಂದಿ ಪಾಲ್ಗೊಂಡು ಗಾಂಧಿ ಸ್ಮರಣೆ ಮಾಡಿಕೊಂಡರು. ಗಾಂಧಿ ಹಲವು ವೈವಿಧ್ಯಮ ಫೋಟೋಗಳು ನೋಡುಗರ ಗಮನ ಸೆಳೆದವು.ಸಾವಿರಾರು ಅಕ್ಷರಗಳಲ್ಲಿ ಹೇಳಬೇಕಾದ ವಿಷಯವು ಒಂದೊಂದು ಪೋಟೋಗಳು ಪ್ರೇಕ್ಷಕರಿಗೆ ಹೇಳಿದವು.

ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಮತ್ತು ಯುವತಿಯರು ಪ್ರದರ್ಶನಕ್ಕೆ ಭೇಟಿ ಕೊಟ್ಟು ಮಾಹಿತಿ ಪಡೆದರು. ಸಂಜೆಯವರೆಗೂ ನಡೆಯುವ ಗಾಂಧಿ ಜೀವನಚರಿತ್ರೆ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಸಾವಿರಾರು ಮಂದಿ ಭೇಟಿ ನೀರಿಕ್ಷೆ ವಾರ್ತಾ ಮತ್ತು ಪ್ರಸಾರ ಇಲಾಖೆಯದ್ದು. ಯುವ ಪೀಳಿಗೆಗೆ ಗಾಂಧಿ ಮಾಹಿತಿಯನ್ನು ರವಾನಿಸಿ ಗಾಂಧಿ ಮೌಲ್ಯಗಳನ್ನು ಪ್ರಚುರಪಡಿಸುವುದು ಪ್ರದರ್ಶನದ ಉದ್ದೇಶವಾಗಿದೆ.

ಪ್ರದರ್ಶನಕ್ಕೆ ಶಾಸಕ ಜಿ.ಬಿ ಜ್ಯೋತಿಗಣೇಶ್ ಗಾಂಧೀ ಜೀವನ ಮೌಲ್ಯಗಳು ಹಾಗೂ ಅವರ ಹೋರಾಟಗಳ ಅಪರೂಪದ ಛಾಯಾಚಿತ್ರ ವೀಕ್ಷಿಸಿ ಸ್ಮರಣೆ ಮಾಡಿಕೊಳ್ಳಬಹುದು ಎಂದರು.

ಜಿಲ್ಲಾಧಿಕಾರಿ ಡಾ.ರಾಕೇಶ್ಕುಮಾರ್ ಸತ್ಯ ಅಹಿಂಸೆಯ ಮೂಲಕ ಸ್ವಾತಂತ್ರ್ಯ ಹೋರಾಟ ಹಾಗೂ ಅಪಾರ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ತೋರಿಸಿದ ಮಹಾತ್ಮ ಗಾಂಧೀ ಸ್ಮರಣೆ ಸದಾಕಾಲವೂ ನಮಗೆಲ್ಲ ಪ್ರೇರಕ. ಗಾಂಧೀ ಕನಸನ್ನು ನನಸಾಗಿಸುವಲ್ಲಿ ಯುವಕರು ಕೈಜೋಡಿಸಬೇಕು ಎಂದು ತಿಳಿಸಿದರು.

ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರಕುಮಾರ್, ವಿಭಾಗೀಯ ಸಂಚಾಲಕ ಫಕ್ರುದ್ದೀನ್, ಬಸ್ ನಿಲ್ದಾಣಾಧಿಕಾರಿ ಶಿವಕುಮಾರ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಮಾತನಾಡಿದರು.

ಸ್ವಾತಂತ್ರ್ಯ ಸಂಗ್ರಾಮದ ಕಾಲಘಟ್ಟಗಳಲ್ಲಿ ಮಹಾತ್ಮಾ ಗಾಂಧೀ ಕರ್ನಾಟಕಕ್ಕೆ ಭೇಟಿ ನೀಡಿದ ಪ್ರದೇಶಗಳು, ಅಸ್ಪøಶತೆ ನಿವಾರಣೆಗಾಗಿ ಗಾಂಧೀ ನಡೆಸಿದ ಆಂದೋಲನ, 1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೇಸ್ ಅಧಿವೇಶನ ಸೇರಿದಂತೆ ಅವರ ಜೀವನ ಚರಿತ್ರೆಯ ಅಪರೂಪದ ಛಾಯಾಚಿತ್ರಗಳನ್ನು ಪ್ರದರ್ಶನದಲ್ಲಿ ಇಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?