Thursday, March 28, 2024
Google search engine
Homeಜಸ್ಟ್ ನ್ಯೂಸ್ಜನರ ಸೇವೆ ಮಾಡಲು ಮತ್ತೆ ಚುನಾವಣೆಗೆ ನಿಲ್ಲುತ್ತೇನೆ:ಮಾಜಿ ಶಾಸಕ ಕೆ.ಎನ್.ರಾಜಣ್ಣ

ಜನರ ಸೇವೆ ಮಾಡಲು ಮತ್ತೆ ಚುನಾವಣೆಗೆ ನಿಲ್ಲುತ್ತೇನೆ:ಮಾಜಿ ಶಾಸಕ ಕೆ.ಎನ್.ರಾಜಣ್ಣ

ಮಧುಗಿರಿ – ಜನರ ಸೇವೆ ಮಾಡಲು ಮತ್ತೆ ಚುನಾವಣೆಗೆ ನಿಲ್ಲುತ್ತೇನೆ. ಆದರೆ ಯಾವ ಪಕ್ಷದಿಂದ ಬರುತ್ತೇನೆ ಎಂದು ತೀರ್ಮಾನಿಸಿಲ್ಲ. ನಾನು ಯಾವುದೇ ಪಕ್ಷದಿಂದ ನಿಂತರೂ ನಿಮ್ಮ ಸಹಕಾರ ಹಾಗೂ ಆಶಿರ್ವಾದವೇ ಮುಖ್ಯ ಎಂದು ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.

ತಾಲೂಕಿನ ಹೊಸಕೆರೆ ಗ್ರಾಮದಲ್ಲಿ ನೂತನ ಟಿಡಿಸಿಸಿ ಬ್ಯಾಂಕಿನ 31ನೇ ಶಾಖೆಯ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರ ಯಾರಿಗೂ ಶಾಶ್ವತವಲ್ಲ, ಅಧಿಕಾರ ಇದ್ದಾಗ ಜನರ ವಿಶ್ವಾಸ ಗಳಿಸುವುದು ಮುಖ್ಯ. ಬರುವ ದಾರಿಯಲ್ಲಿ ಎಲ್ಲಾ ಗ್ರಾಮಗಳಲ್ಲೂ ಅದ್ಭುತ ಸ್ವಾಗತ ಕೋರಿದ ಎಲ್ಲರಿಗೂ ಅಭಿನಂದನೆಗಳು. ಅಧಿಕಾರ ಇರಲಿ ಬಿಡಲಿ ನಿಮ್ಮ ಪ್ರೀತಿ ವಿಶ್ವಾಸ ಸದಾ ನಮ್ಮ ಮೇಲೆ ಇರಲಿ. ನನ್ನ ಅಧಿಕಾರಾವಧಿಯಲ್ಲಿ ಜಾತಿ ಹಾಗೂ ಪಕ್ಷಬೇದ ಮಾಡದೇ ಎಲ್ಲರಿಗೂ ಕೆಲಸ ಮಾಡಿದ್ದೇನೆ, ಎಲ್ಲರಿಗೂ ಸರಕಾರಿ ಸೌಲಭ್ಯ ಸಿಗುವಂತೆ ಕಾರ್ಯ ನಿರ್ವಹಿಸಿದ್ದೇನೆ.

ಶಾಲಾ ವಿಧ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ನೀಡಿದ್ದೇವೆ. ಸುಮಾರು 25 ಸಾವಿರಕ್ಕೂ ಹೆಚ್ಚು ಆದಾಯ ಮತ್ತು ಜಾತಿ ಪ್ರಮಾಣ ಪತ್ರವನ್ನು ಮನೆ ಮನೆಗೆ ತಲುಪಿಸಿದ್ದೇವೆ. ತಾಲೂಕಿನಲ್ಲಿ ಸುಮಾರು 160 ಕೋಟಿಗೂ ಹೆಚ್ಚು ಸಾಲ ಮನ್ನ ಆಗಿದೆ, ನಾವು ಬಡವರ ಪರ ಕೆಲಸ ಮಾಡುತ್ತಿದ್ದರೆ ಕೆಲವರು ನಮ್ಮ ಬ್ಯಾಂಕನ್ನು ಸೂಪರ್ ಸೀಡ್ ಮಾಡಲು ಯತ್ನಿಸಿದ್ದರು. ಆದರೆ ಇಂದು ಅವರೇ ಅಧಿಕಾರ ಕಳೆದುಕೊಂಡು ಜೀರೋ ಟ್ರಾಫಿಕ್ ಇಲ್ಲದೆ ಓಡಾಡುತ್ತಿದ್ದಾರೆ ಎಂದರು.

ನನ್ನ ಅಧಿಕಾರಾವದಿಯಲ್ಲಿ ಗೋಶಾಲೆಗಳನ್ನು ತೆರೆದು ಉಚಿತ ಮೇವು ನೀಡುವುದರ ಜೊತೆಗ್ಲೆ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಈಗ ಮೇವು ನೀಡುವುದು ದೊಡ್ಡ ದಂದೆಯಾಗಿದ್ದು, ಕಳ್ಳ ಬಿಲ್ಲುಗಳ ಹಗರಣವಾಗಿದೆ ಎಂದರು.

ಜಿಲ್ಲೆಯಲ್ಲಿನ ನೀರಿನ ಸಮಸ್ಯೆ ಉಂಟಾಗಲು ದೇವೇಗೌಡರ ಕುಟುಂಬವೇ ಕಾರಣ ಇದಕ್ಕೆ ಲೋಕಸಭಾ ಚುನಾವಣೆಯಲ್ಲಿ ಉತ್ತಮ ತೀರ್ಪು ನೀಡಿದ್ದಿರಾ. ಮುಂದಿನ ದಿನಗಳಲ್ಲಿ ಮಧುಗಿರಿಯಲ್ಲಿ ಜಿಲ್ಲಾ ಕೇಂದ್ರವನ್ನಾಗಿಸಲು ಹಾಗೂ ತಾಲೂಕಿನ 54 ಕೆರೆಗಳಿಗೆ ನೀರು ತುಂಬಿಸಲು ನನಗೆ ಮತ್ತು ಸಂಸದರಿಗೆ ಸಹಕಾರ ನೀಡಬೇಕು ಎಂದರು.

ಗ್ರಾಮೀಣ ಭಾಗದ ರೈತರ ಅನುಕೂಲಕ್ಕಾಗಿ ಪ್ರತಿ ಹೋಬಳಿಯಲ್ಲಿ ಡಿಸಿಸಿ ಬ್ಯಾಂಕ್ ತೆರೆಯಲಾಗುತ್ತಿದ್ದು, ನೂತನವಾಗಿ ಪ್ರಾರಂಭವಾಗುತ್ತಿರುವ ಬ್ಯಾಂಕ್ ನಿಮ್ಮೆಲ್ಲರ ಆಸ್ತಿ, ಇಲ್ಲಿ ಪ್ರತಿನಿತ್ಯದ ವ್ಯವಹಾರ ನಡೆಸುವುದರಿಂದ ನಿಮ್ಮ ಬ್ಯಾಂಕ್ ಅಭಿವೃದ್ಧಿ ಹೊಂದುತ್ತದೆ. ಬ್ಯಾಂಕಿನಲ್ಲಿ ಚಿನ್ನಾಭರಣಗಳ ಮೇಲೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುತ್ತಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದ ಅವರು ಗ್ರಾಮೀಣ ಮಕ್ಕಳಲ್ಲಿ ಉತ್ತಮ ಪ್ರತಿಭೆಯಿದ್ದು, ಅವರಿಗೆ ಉತ್ತಮ ವಿದ್ಯಾಭ್ಯಾಸ ನೀಡಿಸುವುದು ಪೋಷಕರ ಆದ್ಯ ಕರ್ತವ್ಯ ಎಂದರು.

ಸಂಸದ ಜಿ.ಎಸ್.ಬಸವರಾಜು ಮಾತನಾಡಿ, ಹೆಚ್ಚು ಕೆಲಸ ಮಾಡುವವರನ್ನು ಜನ ಸೋಲಿಸುತ್ತಾರೆ, ಆದರೆ ಬೆಂಗಳೂರಿನಲ್ಲಿ ಕುಳಿತುಕೊಂಡು ಆಡಳಿತ ನಡೆಸುವವರನ್ನು ಗೆಲ್ಲಿಸುತ್ತಾರೆ ಇದು ನಮ್ಮ ದುರ್ವಿಧಿ. ಮಧುಗಿರಿ ತಾಲೂಕು ಸಹಕಾರ ಕ್ಷೇತ್ರದಲ್ಲಿ ತುಂಬಾ ಮುಂದುವರೆದಿದೆ. ತಾಲೂಕಿನಲ್ಲಿ ಈಗಾಗಲೇ ಸುಮಾರು 160 ಕೋಟಿಗೂ ಹೆಚ್ಚು ಸಾಲ ಮನ್ನ ವಾಗಿದೆ. ಇದಕ್ಕೆ ಮೂಲಕಾರಣ ರಾಜಣ್ಣನವರು ಆದರೆ ಅವರನ್ನು ಸೋಲಿಸಿ ಕ್ಷೇತ್ರದ ಜನತೆಯ ದೊಡ್ಡ ತಪ್ಪು ಮಾಡಿದ್ದಿರಾ, ಆದರೆ ಮುಂದಿನ ದಿನಗಳಲ್ಲಿ ಆ ತಪ್ಪನ್ನೂ ಮಾಡದೆ ಅವರ ಕೈ ಬಲಪಡಿಸಿ ಎಂದ ಅವರು, 25 ನದಿಗಳ ನೀರು ಸಮುದ್ರದ ಪಾಲಾಗುತ್ತಿದ್ದು, ಅವುಗಳನ್ನು ನಮ್ಮ ಜಿಲ್ಲೆಗೆ ತರುವುದು ನಮ್ಮ ಆದ್ಯ ಕರ್ತವ್ಯ. ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸುವುದೇ ನನ್ನ ಮೊದಲ ಗುರಿ ಎಂದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಎನ್.ಗಂಗಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಜಿ.ಜೆ.ರಾಜಣ್ಣ, ಚೌಡಪ್ಪ, ಮಾಜಿ ಸದಸ್ಯ ಎಸ್.ಡಿ.ಕೃಷ್ಣಪ್ಪ, ಚಿನ್ನಪ್ಪ, ತಾ.ಪಂ ಅಧ್ಯಕ್ಷೆ ಇಂದಿರಾ ದೇನಾನಾಯ್ಕ್, ಸದಸ್ಯಗಳಾದ ರಾಜು, ಜೆ.ಡಿ.ವೆಂಕಟೇಶ್, ಚಂದ್ರಕಲಾ, ರುದ್ರಮ್ಮ ಈರಣ್ಣ, ಜಿಲ್ಲಾ ಬ್ಯಾಂಕ್‍ನ ನಿರ್ದೇಶಕರುಗಳಾದ ಲಕ್ಷ್ಮೀನಾರಾಯಣ, ಹನುಮಾನ್, ಜಿ.ಎಸ್.ರವಿ, ನರಸಿಂಹಯ್ಯ, ರಾಜಕುಮಾರ್, ತಿಮ್ಮರಾಜು, ಡಿ.ಪಿ.ಮಂಜುನಾಥ್, ಗ್ರಾ.ಪಂ ಅಧ್ಯಕ್ಷರುಗಳಾದ ದೇವರಾಜು, ಕಾಂತರಾಜು, ವಿ.ಅರ್.ಭಾಸ್ಕರ್, ತುಮುಲ್ ನಿರ್ದೇಶಕ ಈಶ್ವರಯ್ಯ, ಮುಖಂಡರುಗಳಾದ ಲಕ್ಷ್ಮೀನಾರಾಯಣ್, ಪಿ.ಸಿ.ಕೃಷ್ಣರೆಡ್ಡಿ, ಎಸ್.ಎನ್.ರಾಜು, ಈರಣ್ಣ, ಶ್ರೀನಿವಾಸ್, ಶ್ರೀನಿವಾಸ್ ರೆಡ್ಡಿ, ಎಂ.ಬಿ.ಮರಿಯಣ್ಣ, ನಾಗೇಶ್ ಬಾಬು, ಸುವರ್ಣಮ್ಮ, ಎಸ್.ಆರ್.ರಾಜಗೋಪಾಲ್, ಎಂ.ಎಸ್.ಮಲ್ಲಿಕಾರ್ಜುನಯ್ಯ, ಮುದ್ದಲಿಂಗಪ್ಪ, ಸಿದ್ದಗಂಗಪ್ಪ, ಸಾಧಿಕ್, ನಾಗರಾಜು, ರಂಗಪ್ಪ, ರಾಜಕುಮಾರ್, ಸೀತಾರಾಮ್ ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ರಾಮಕೃಷ್ಣ, ಹಾಗೂ ಸಿಬ್ಬಂದಿಗಳು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?