Thursday, March 28, 2024
Google search engine
Homeತುಮಕೂರು ಲೈವ್ಡಿಕೆಶಿ ಪದಗ್ರಹಣ: ಗ್ರಾಮಗಳಲ್ಲಿ ನೇರ ಪ್ರಸಾರ: ರಾಜೇಂದ್ರ

ಡಿಕೆಶಿ ಪದಗ್ರಹಣ: ಗ್ರಾಮಗಳಲ್ಲಿ ನೇರ ಪ್ರಸಾರ: ರಾಜೇಂದ್ರ

ತುಮಕೂರು: ಕಾಂಗ್ರೆಸ್ ಪಕ್ಷವನ್ನು ಮುನ್ನೆಡೆಸಲು ಸಮರ್ಥ ಹಾಗೂ ದಕ್ಷ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಆಯ್ಕೆಯಾಗಿರುವುದು ಪಕ್ಷಕ್ಕೆ ದೊಡ್ಡ ಶಕ್ತಿಯನ್ನು ತಂದಿದೆ ಎಂದು ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಆರ್.ರಾಜೇಂದ್ರ ತಿಳಿಸಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡುತ್ತಿರುವ ಡಿ.ಕೆ.ಶಿವಕುಮಾರ್ ಕಾರ್ಯಕ್ರಮ ನಿಮಿತ್ತ ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್-19ರ ಹಿನ್ನಲೆಯಲ್ಲಿ ಅಧ್ಯಕ್ಷರ ಪದಗ್ರಹಣದಲ್ಲಿ ಭಾಗವಹಿಸಲು ಕಷ್ಟಸಾಧ್ಯ, ಅದ್ದುದರಿಂದ ಜಿಲ್ಲೆಯ ಎಲ್ಲಾ ಪಂಚಾಯ್ತಿ ಮಟ್ಟದಲ್ಲಿ ಮತ್ತು ವಾರ್ಡಗಳಲ್ಲಿ ಎಲ್.ಇ.ಡಿ.ಗಳನ್ನು ಅಳವಡಿಸಿ, ಪ್ರತಿಯೊಬ್ಬ ಕಾರ್ಯಕರ್ತರು ನೇರವಾಗಿ ಅಧಿಕಾರ ಸ್ವೀಕಾರ ಕಾರ್ಯಕ್ರಮವನ್ನು ವೀಕ್ಷಿಸುವಂತೆ ವ್ಯೆವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ತುಮಕೂರು ಜಿಲ್ಲೆಯಲ್ಲಿ ಯುವಕರನ್ನು ಕಾಂಗ್ರೆಸ್ ಪಕ್ಷಕ್ಕೆ ತರುವ ಕೆಲಸವನ್ನು ಮಾಡುತ್ತೇನೆ. ಪ್ರತಿ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ವವನ್ನು ಸಂಘಟಿಸುವ ಕೆಲಸ ಮಾಡಬೇಕಿದೆ ಎಂದರು.

ತುಮಕೂರು ಉಸ್ತುವಾರಿ ಭವ್ಯ ಮಾತನಾಡಿ, ಕೋರೋನ ಸಂದರ್ಭದಲ್ಲಿ ರಾಜೇಂದ್ರ ಸುಮಾರು ಲಕ್ಷಕ್ಕೂ ಅಧಿಕ ಜನರಿಗೆ ಅನ್ನದಾಸೋಹದ ವ್ಯವಸ್ಥೆ ಮಾಡಿರುವುದು ಶ್ಲಾಘನೀಯ ಎಂದರು. ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡಬೇಕೆಂದರು.

ರಾಜ್ಯ ಯುವ ಕಾಂಗ್ರೆಸ್ನ ಉಸ್ತುವಾರಿ ರಾಘವೇಂದ್ರ ಪ್ರಸಾದ್ ಮಾತನಾಡಿ ತುಮಕೂರು ಜಿಲ್ಲೆಯ ಎಲ್ಲಾ 11 ತಾಲ್ಲೂಕುಗಳಿಗೂ ಉಸ್ತುವಾರಿಗಳನ್ನು ನೇಮಕ ಮಾಡಲಾಗುವುದು. ಪ್ರತಿ ಬೂತ್ ಗೆ 5 ಜನ ಕಾರ್ಯಕರ್ತರನ್ನು ನೇಮಕ ಮಾಡಿ ಪ್ರತಿ ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಸಮಾರಂಭವನ್ನು ವೀಕ್ಷಸಲು ಅನುಕೂಲ ಮಾಡಬೇಕೆಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?