Wednesday, April 24, 2024
Google search engine
Homeತುಮಕೂರು ಲೈವ್ಡ್ರೌನ್ ಪ್ರತಾಪ್ ವಿರುದ್ಧ ಎಫ್ಐಆರ್ ದಾಖಲು

ಡ್ರೌನ್ ಪ್ರತಾಪ್ ವಿರುದ್ಧ ಎಫ್ಐಆರ್ ದಾಖಲು

ತುಮಕೂರು (ಜು.20):

ಡ್ರೋನ್ ತಯಾರಿಸಿರುವುದಾಗಿ ಹೇಳಿಕೊಂಡು ತಿರುಗಾಡುತ್ತಿದ್ದ ಡ್ರೋನ್ ಪ್ರತಾಪ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಈತನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಡ್ರೋನ್ ಪ್ರತಾಪ್ ಬಂಧನಕ್ಕಾಗಿ ಮೂರು ತಂಡಗಳಿಂದ ಶೋಧ ಕಾರ್ಯ ನಡೆಯುತ್ತಿದೆ. ತಲಘಟ್ಟಪುರ ಪೊಲೀಸರು ಮತ್ತು ಬಿಬಿಎಂಪಿ ಹೋಂ ಕ್ವಾರಂಟೈನ್ ಸಿಟಿಜನ್ ಸ್ಕ್ವಾಡ್ ಪ್ರತಾಪ್ ಗಾಗಿ ಹುಡುಕಾಟ ನಡೆಸುತ್ತಿದೆ.

ಬಂಧನ ಮಾಡುತ್ತಿರುವುದು ಆತ ಸುಳ್ಳು ಹೇಳಿದ್ದಕ್ಕಲ್ಲ. ಬದಲಾಗಿ ಡ್ರೋನ್ ಪ್ರತಾಪ್ ಇದೇ 15 ರಂದು ಹೈದರಾಬಾದ್ ನಿಂದ ಬೆಂಗಳೂರಿಗೆ ಬಂದಿದ್ದ. ಹೊರ ರಾಜ್ಯದಿಂದ ಬಂದ ಹಿನ್ನೆಲೆಯಲ್ಲಿ ನಗರದ ತಲಘಟ್ಟಪುರದ ಅಪಾರ್ಟ್ ಮೆಂಟ್ವೊಂದರಲ್ಲಿ ಪ್ರತಾಪ್ ಹೋಂ ಕ್ವಾರಂಟೈನ್ ಆಗಿದ್ದ.

ನಿಯಮದ ಪ್ರಕಾರ ಆತ 14 ದಿನಗಳ ಕಾಲ ಕ್ವಾರಂಟೈನ್ ಆಗಬೇಕಿತ್ತು. ಆದರೆ, ಕ್ವಾರಂಟೈನ್ ಆದ ಮರುದಿನವೇ ಖಾಸಗಿ ಚಾನೆಲ್‌ ನ ಸಂದರ್ಶನದಲ್ಲಿ ಪ್ರತಾಪ್ ಪಾಲ್ಗೊಂಡಿದ್ದ.

ಪ್ರತಾಪ್ ಕ್ವಾರಂಟೈನ್ ನಿಯಮಗಳ ಸ್ಪಷ್ಟ ಉಲ್ಲಂಘನೆ ಮಾಡಿದ್ದಾನೆ ಎನ್ನುವುದು ಸ್ಪಷ್ಟವಾಗಿದೆ. ಹೀಗಾಗಿ, ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಡ್ರೋನ್ ಪ್ರತಾಪ್ ಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

ಸದ್ಯ ಪ್ರತಾಪ್ ಫೋನ್ ಸ್ವಿಚ್ ಆಫ್ ಆಗಿದೆ. ಈತ ಮಂಡ್ಯ ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಪ್ರತಾಪ್ ಇದ್ದಾನೆ ಎನ್ನುವ ಮಾಹಿತಿ ಇದೆ. ಹೀಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.

ಡ್ರೋನ್ ತಯಾರಿಸಿದ್ದೇನೆ, ಬೇರೆ ರಾಷ್ಟ್ರಗಳಲ್ಲಿ ತನ್ನನ್ನು ಕರೆದು ಗೌರವಿಸಿವೆ ಎಂದು ಪ್ರತಾಪ್ ಹೇಳಿಕೊಂಡಿದ್ದ. ಅಲ್ಲದೆ, ಸಾಕಷ್ಟು ಮಾಧ್ಯಮಗಳಿಗೆ ಸಂದರ್ಶನ ಕೂಡ ನೀಡಿದ್ದ. ಆದರೆ, ಇದೆಲ್ಲವೂ ಸುಳ್ಳು ಎಂಬುದು ಇತ್ತೀಚೆಗೆ ಗೊತ್ತಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?