Tuesday, April 16, 2024
Google search engine
Homeತುಮಕೂರು ಲೈವ್ತುರುವೇಕೆರೆ: ಕರೊನಾ ಸಿಬ್ಬಂದಿಗೆ ಧಮ್ಕಿ: ಆರೋಪಿ ಬಂಧನ

ತುರುವೇಕೆರೆ: ಕರೊನಾ ಸಿಬ್ಬಂದಿಗೆ ಧಮ್ಕಿ: ಆರೋಪಿ ಬಂಧನ

Publicstory. in


ತುರುವೇಕೆರೆ: ಕೊರೊನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿ ಶುಕ್ರವಾರ ಕರ್ತವ್ಯದಲ್ಲಿದ್ದ ಸಿಬ್ಬಂದಿಗೆ ಧಮ್ಕಿ, ಬೆದರಿಕೆ ಹಾಕಿದ ಕಾರಣ ವ್ಯಕ್ತಿಯೊರ್ವನನ್ನು ಪಟ್ಟಣದ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ತಾಲ್ಲೂಕಿನ ಕಸಬಾದ ಲೋಕಮ್ಮನಹಳ್ಳಿ ಗ್ರಾಮದ ಪರಮೇಶ್ವರಯ್ಯ ಅವರ ಮಗ ಮಲ್ಲಿಕಾರ್ಜುನ್(40) ಎಂದು ಗುರುತಿಸಲಾಗಿದೆ.

ಗೃಹರಕ್ಷಕ ಮಹಿಳಾ ಸಿಬ್ಬಂದಿ ಹಾಗು ಕಂದಾಯ ಇಲಾಖೆಯ ಸಿಬ್ಬಂದಿ ಜನರು ಅನಾವಶ್ಯಕವಾಗಿ ಯಾರೂ ಓಡಾಡಬಾರದೆಂದು ಇಂದು ಬೆಳಗ್ಗೆ ದಬ್ಬೇಘಟ್ಟ ರಸ್ತೆಯಲ್ಲಿ ಜಾಗೃತಿ ಮೂಡಿಸುತ್ತಿದ್ದರು.
ಇದೇ ಮಾರ್ಗದಲ್ಲಿ ಮಲ್ಲಿಕಾರ್ಜುನ್ ಅವರ ಕಾರು ಬಂದದ್ದನ್ನು ಕಂಡು ನಿಯೋಜನೆಗೊಂಡ ಸಿಬ್ಬಂದಿಗಳು ಪ್ರಶ್ನಿಸಿದ್ದಾರೆ. ಇದಕ್ಕೆ ಕೋಪಗೊಂಡ ಚಾಲಕ ಮಲ್ಲಿಕಾರ್ಜುನ್ ಕರ್ತವ್ಯನಿರತ ಸಿಬ್ಬಂದಿಗಳ ಮೇಲೆ ಅವಾಚ್ಯ ಶಬ್ಬಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾನೆ.
ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ಬಂಧಿಸಿ ಕಲಂ353, 188 ಮತ್ತು 504 ರೀತ್ಯ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಆರೋಪಿಯ ಕಾರನ್ನು ವಶಪಡಿಸಿಕೊಳ್ಳಲಾಗಿದೆಂದು ಪೊಲೀಸರು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?