Public story.in
ತುಮಕೂರು: ತುಮಕೂರು ನಗರದಲ್ಲಿ ರಸ್ತೆ ಅಗೆದು ಕೈಗೊಂಡಿರುವ ಕಾಮಗಾರಿಗಳನ್ನು ಸಮರ್ಪಕವಾಗಿ ಪುನರ್ ಸ್ಥಾಪಿಸುವಲ್ಲಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಂಪನಿಗಳಿಗೆ ಮಹಾನಗರ ಪಾಲಿಕೆ ಆಯುಕ್ತ ಭೂಬಾಲನ್ ದಂಡ ವಿಧಿಸಿದ್ದಾರೆ.
ರಸ್ತೆಯಲ್ಲಿ ಕೈಗೊಂಡಿರುವ ಕಾಮಗಾರಿಯನ್ನು ತುರ್ತಾಗಿ ಯಥಾಸ್ಥಿತಿಯಲ್ಲಿ ನಿರ್ವಹಿಸಲು ವಿವಿಧ ಇಲಾಖೆಗಳಿಗೆ ಮತ್ತು ಏಜೆನ್ಸಿಗಳಿಗೆ ಸೂಚಿಸಲಾಗಿದ್ದರೂ ಸೂಕ್ರ ಕ್ರಮ ಕೈಗೊಂಡಿಲ್ಲ ಎಂದು ಬೂಬಾಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಪರ್ಮಪಕವಾಗಿ ಕಾಮಗಾರಿಯನ್ನು ಪೂರೈಸದೆ ಇರುವ ಹಿನ್ನೆಲೆಯಲ್ಲಿ ಕೆಯುಡಬ್ಲ್ಯೂಎಸ್ ಅಂಡ್ ಡಿಬಿ ಗೆ 60 ಲಕ್ಷ, ಬೆಸ್ಕಾಂ ಇಲಾಖೆಗೆ 10 ಲಕ್ಷ, ಮೆಘಾ ಗ್ಯಾಸ್ ಕಂಪನಿಗೆ 20 ಲಕ್ಷ ಮತ್ತು ರಿಲಯನ್ಸ್ ಜಿಯೋ ಕಂಪನಿಗೆ 10 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
ಅಗೆದಿರುವ ರಸ್ತೆಗಳನ್ನು ಪುನರ್ ಸ್ಥಾಪನೆ ಕನಿಷ್ಠಾವಧಿಯಲ್ಲಿ ಸಮರ್ಪಕವಾಗಿ ನಿರ್ವಹಿಸಿ ಸಾರ್ವಜನಿಕರ ಅನುಕೂಲ ಮಾಡಲು ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ರೀತಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
Comment here