Wednesday, April 17, 2024
Google search engine
Homeತುಮಕೂರ್ ಲೈವ್ಮಧುಗಿರಿ: ಅಭಿವೃದ್ಧಿ ಗೆ ಹಕ್ಕೊತ್ತಾಯ

ಮಧುಗಿರಿ: ಅಭಿವೃದ್ಧಿ ಗೆ ಹಕ್ಕೊತ್ತಾಯ

ತಾಲೂಕಿನ ಐಡಿಹಳ್ಳಿ ಗ್ರಾಮದಲ್ಲಿ ಮಯೂರ ಕನ್ನಡ ಅಭಿಮಾನಿಗಳ ಸಂಘದ ವತಿಯಿಂದ ಹಮ್ಮಿಕೊಂಡಿದ್ದ 64 ವೈಭವದ ಗಡಿನಾಡ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜೆಎಸ್‍ಎನ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಅಂಗವಿಕಲರಿಗೆ ವೀಲ್ ಚೇರ್ ವಿತರಿಸಲಾಯಿತು

ಮಧುಗಿರಿ ; ಕರ್ನಾಟಕ ರಾಜ್ಯದ ಏಕೀಕರಣಕ್ಕಾಗಿ ದುಡಿದಂತಹ ಮಹನೀಯರನ್ನು ಸದಾ ನೆನಪು ಮಾಡಿಕೊಳ್ಳುತ್ತಾ, ನಮ್ಮ ನೆಲ, ಜಲ ಮತ್ತು ಭಾಷೆಯನ್ನು ರಕ್ಷಣೆ ಮಾಡಬೇಕು ಎಂದು ತಹಶೀಲ್ದಾರ್ ಎಲ್.ಎಂ.ನಂದೀಶ್ ತಿಳಿಸಿದರು.

ತಾಲೂಕಿನ ಐಡಿಹಳ್ಳಿ ಗ್ರಾಮದಲ್ಲಿ ಮಯೂರ ಕನ್ನಡ ಅಭಿಮಾನಿಗಳ ಸಂಘದ ವತಿಯಿಂದ ಹಮ್ಮಿಕೊಂಡಿದ್ದ 64 ವೈಭವದ ಗಡಿನಾಡ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕನ್ನಡ ಭಾಷೆ 2500 ವರ್ಷಗಳ ಹಿಂದಿನಿಂದಲೂ ಗತವೈಭವವನ್ನು ಹೊಂದಿರುವ ಭಾಷೆಯಾಗಿದ್ದು, ಭಾರತದಲ್ಲಿ ಅತ್ಯಂತ ಶ್ರೇಷ್ಠ ಭಾಷೆ ನಮ್ಮದ್ದಾಗಿದೆ. ಕನ್ನಡ ಉಳಿಸಲು ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಪಡಲು ಒಗ್ಗಟ್ಟಾಗಬೇಕು ಎಂದರು.

ಜೆಎಸ್‍ಎನ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಹಾಗೂ ಸಮಾಜ ಸೇವಕ ಜಗದೀಶ್ ರೆಡ್ಡಿ ಮಾತನಾಡಿ, ನವಂಬರ್ ತಿಂಗಳಲ್ಲಿ ಮಾತ್ರವಲ್ಲದೆ ವರ್ಷಪೂರ್ತಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಯುವಕರು ಸಜ್ಜಾಗಬೇಕು. ಕನ್ನಡದ ಪ್ರೇಮ ಪ್ರತಿಯೊಬ್ಬ ಕನ್ನಡಿಗನ ರಕ್ತದಲ್ಲೂ ಇರಬೇಕು, ನಾಡು-ನುಡಿ ವಿಚಾರವಾಗಿ ಯಾವುದೇ ಹೋರಾಟ ಮಾಡಲು ನಾವು ಸಿದ್ಧರಿದ್ದೇವೆ ಎಂದರು.

ಗಡಿನಾಡ ಪ್ರದೇಶವಾಗಿರುವ ಇಲ್ಲಿ ಸಾರ್ವಜನಿಕರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇಲ್ಲಿ ಉದ್ಯೋಗ ಸೃಷ್ಟಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಸರ್ಕಾರದ ಗಮನ ಸೆಳೆಯಲು ನಾವೆಲ್ಲರೂ ಒಗ್ಗಟಾಗಿ ಹೋರಾಟ ನಡೆಸಬೇಕಾಗಿದ್ದು, ಗಡಿನಾಡಿನಲ್ಲಿ ಉದ್ಯೋಗ ಸೃಷ್ಠಿಸಲು ಕಾರ್ಖಾನೆಗಳನ್ನು ತೆರೆಯಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದ ಅವರು, ತಾಲ್ಲೂಕಿನ ಬಡ ಜನರಿಗೆ ಯಾವುದೇ ಕಷ್ಟ-ಸುಖ ಬಂದರೂ ನಾನು ಎಂದಿಗೂ ಜೊತೆಯಲ್ಲಿರುತ್ತಾನೆ ಎಂದರು.

ಸಾಹಿತಿ ಹಾಗೂ ಅಧ್ಯಾಪಕ ಕೆ.ಜಿ.ಪರಶುರಾಮ್ ಮಾತನಾಡಿ, ಸತತ ಬರಗಾಲಕ್ಕೆ ತುತ್ತಾಗಿರುವ ಮಧುಗಿರಿ ತಾಲೂಕನ್ನು 371ಜೆ ಗೆ ಸೇರಿಸಲು ಒತ್ತಾಯ ಮಾಡಬೇಕು, ಗಡಿನಾಡಿನಲ್ಲಿ ಇರುವ ಎಲ್ಲರಿಗೂ ಕಡ್ಡಾಯ ಶಿಕ್ಷಣ ನೀಡಬೇಕು ಹಾಗೂ ಸರ್ಕಾರ ಶಿಕ್ಷಣಕಾಗಿ ನೀಡಿರುವ ಎಲ್ಲಾ ಸೌಲಭ್ಯಗಳನ್ನು ಗಡಿ ನಾಡಿನ ಜನರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಜೆಎಸ್‍ಎನ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಅಂಗವಿಕಲರಿಗೆ ವೀಲ್ ಚೇರ್, ಆಟೋ ಚಾಲಕರಿಗೆ ಸಮವಸ್ತ್ರ, ವಿಧ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ನೋಟ್ ಪುಸ್ತಕ, ಸವಿತಾ ಸಮಾಜ ಹಾಗೂ ಮಡಿವಾಳ ಸಮಾಜದವರಿಗೆ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.

ವೇದಿಕೆಯ ಅಧ್ಯಕ್ಷ ಎಸ್.ಮಹಾಲಿಂಗಯ್ಯ, ಗೌರವಾಧ್ಯಕ್ಷ ಪಿ ನಾಗರೆಡ್ಡಿ, ಟ್ರಸ್ಟ್ ನ ಕಾರ್ಯದರ್ಶಿ ಶುಭ, ಗ್ರಾಮ ಪಂಚಾಯಿತಿ ಅಧ್ಯಕ್ಷ ಪಾರ್ವತಮ್ಮ, ಉಪಾಧ್ಯಕ್ಷ ನಾಗರಾಜು, ಮಾಜಿ ಅಧ್ಯಕ್ಷ ಶನಿವಾರಂ ರೆಡ್ಡಿ, ಸದಸ್ಯರಾದ ಜಿಲಾನ್, ಪಿಡಿಒ ನಟರಾಜ್, ಉಪಪ್ರಾಂಶುಪಾಲ ನಾಗರಾಜು, ಉಪ ತಹಸೀಲ್ದಾರ್ ನಾರಾಯಣಪ್ಪ, ತನುಜ, ಶಿಕ್ಷಕ ಸಂಜಯ್, ಮುಖಂಡರುಗಳಾದ ರಾಜಣ್ಣ, ವೇಣುಗೋಪಾಲ್ ಹಾಗೂ ಮುಂತಾದವರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?