Friday, April 26, 2024
Google search engine
Homeತುಮಕೂರು ಲೈವ್ರೈತರು ವಿರೋಧಿಸುತ್ತಿರುವ ತಿದ್ದುಪಡಿಯನ್ನು ಸಮರ್ಥಿಸಿಕೊಂಡ ಜಿಎಸ್ ಬಿ

ರೈತರು ವಿರೋಧಿಸುತ್ತಿರುವ ತಿದ್ದುಪಡಿಯನ್ನು ಸಮರ್ಥಿಸಿಕೊಂಡ ಜಿಎಸ್ ಬಿ

Publicstory.in


Tumkuru; ಕೇಂದ್ರ ಬಿಜೆಪಿ ಸರ್ಕಾರದ ಸೂಚನೆಯಂತೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಸಂಸದ ಜಿ.ಎಸ್.ಬಸವರಾಜ್ ಅವರು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ಸರ್ಕಾರದ ನಿರ್ಧಾರ ರೈತ ವಿರೋಧಿಯಲ್ಲ. ಇದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದ ಸಂಸದ ಜಿ.ಎಸ್.ಬಸವರಾಜ್ ತಿಳಿಸಿದರು.ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಆನ್‌ಲೈನ್‌ನಲ್ಲಿ ಎಲ್ಲ ವ್ಯವಹಾರ ನಡೆಯುವುದರಿಂದ ಮಾರುಕಟ್ಟೆಯಲ್ಲಿ ತೂಕ ಮತ್ತು ಅಳತೆಯಲ್ಲಿ ಆಗುತ್ತಿದ್ದ ಮೋಸ ರೈತರ ಶೋಷಣೆ ತಪ್ಪಿ ಅವರ ಮನೆ ಬಾಗಿಲಿಗೆ ಹಣ ಸಂದಾಯವಾಗಲಿದೆ ಎಂದರು.ರಾಜ್ಯದ ಬಿಜೆಪಿಯಲ್ಲಿ ಯಾವುದೆ ಭಿನ್ನಮತವಿಲ್ಲ ಎಂದುಸ್ಪಷ್ಟಪಡಿಸಿದ ಅವರು ಜಿಲ್ಲೆಯಲ್ಲಿ ದಲಿತ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ವರ್ಗಾವಣೆ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.ದೇಶದಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವಲ್ಲಿ ಪ್ರಧಾನಿ ನರೇಂದ್ರಮೋದಿ ದಿಟ್ಟಕ್ರಮ ಕೈಗೊಂಡಿದ್ದು, ವಿಶ್ವನಾಯಕರು ಕೊಂಡಾಡಿದ್ದಾರೆ ಎಂದು ಸಂಸದ ಜಿ.ಎಸ್.ಬಸವರಾಜು ತಿಳಿಸಿದರು.ಕೊರೊನಾ ಸೋಂಕು ಹರಡುವುದ ತಡೆದ ಪರಿಣಾಮ ದೇಶದಲ್ಲಿ ಸೋಂಕು ನಿಯಂತ್ರಣಕ್ಕೆ ಬಂದು ಸಾವಿನ ಸಂಖ್ಯೆಕೂಡ ಕಡಿಮೆಯಾಗಿದೆ ಎಂದರು.ಅಮೆರಿಕಾದಂತಹ ಮುಂದುವರೆದ ದೇಶವೇ ಕೊರೊನಾ ಸೋಂಕಿನಿಂದ ಕಂಗೆಟ್ಟಿದೆ. ವಿಶ್ವದ ಅನೇಕ ರಾಷ್ಟçಗಳು ಕೊರೊನ ತಡೆಯಲು ಹರಸಾಹಸಪಡುತ್ತಿವೆ. ಇಂತಹ ಸಂದರ್ಭದಲ್ಲಿ ಭಾರತದಲ್ಲಿ ತೆಗೆದುಕೊಂಡ ಕ್ರಮಗಳಿಂದ ಸೋಂಕು ಕಡಿಮೆಯಾಗಿದೆ ಎಂದು ಹೇಳಿದರು.
ಕೋವಿಡ್-19 ವಿಷಯದಲ್ಲಿ ಭಾರತ ದೇಶಕ್ಕೆ 8ನೇ ಸ್ಥಾನ ದೊರೆತಿದೆ. ಕೇಂದ್ರ ಸರ್ಕಾರ ಇದನ್ನು ನಿಯಂತ್ರಿಸಲು ವಿಫಲವಾಗಿದೆ ಎಂಬ ಪ್ರತಿಪಕ್ಷಗಳ ಆರೋಪದಲ್ಲಿ ಯಾವುದೆ ಹುರುಳಿಲ್ಲ ಎಂದು ಸಮರ್ಥಿಸಿಕೊಂಡರು.ಒಂದು ದೇಶ, ಒಂದು ಶುಲ್ಕ, ಒಂದು ದೇಶ ಒಂದು ಪಡಿತರ ಕಾರ್ಡ್ ಮೂಲಕ ಇಡಿ ದೇಶಕ್ಕೆ ಪ್ರಧಾನಿ ಮೋದಿ ಮಾದರಿ ಆಡಳಿತ ನೀಡಿದ್ದಾರೆ. 135 ಕೋಟಿ ಜನಸಂಖ್ಯೆ ಹೊಂದಿರುವ ದೇಶದಲ್ಲಿ ಅಭಿವೃದ್ಧಿಗೆ ಒತ್ತು ನೀಡಿ, ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ ಎಂದರು.ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಗಲ್ಲುಶಿಕ್ಷೆ ನೀಡುವಂತಹ ತೀರ್ಮಾನ ಕೈಗೊಂಡು ಅದಕ್ಕೆ ಸಂಬಂಧಿಸಿದಂತೆ ಸೂಕ್ತ ಕಾನೂನನ್ನು ಜಾರಿಗೆ ತಂದಿದ್ದಾರೆ ಎಂದು ಹೇಳಿದರು.ಮಾಜಿ ಶಾಸಕರಾದ ಗಂಗಹನುಮಯ್ಯ, ಡಾ. ಎಂ.ಆರ್.ಹುಲಿನಾಯ್ಕರ್, ಬಿಜೆಪಿ ಮುಖಂಡರಾದ ಶಿವಪ್ರಸಾದ್, ಹೆಬ್ಬಾಕ ರವಿಶಂಕರ್, ಕೊಪ್ಪಳ್ ನಾಗರಾಜ್, ರಂಗನಾಯಕ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?