Friday, April 19, 2024
Google search engine
Homeತುಮಕೂರು ಲೈವ್ರೋಗಗಳಿಗೆ ತುತ್ತಾಗುತ್ತಿರುವ ಬಡ್ತಿ ಹೊಂದಿದ ಶಿಕ್ಷಕರು; ಆತಂಕ

ರೋಗಗಳಿಗೆ ತುತ್ತಾಗುತ್ತಿರುವ ಬಡ್ತಿ ಹೊಂದಿದ ಶಿಕ್ಷಕರು; ಆತಂಕ

ಮಧುಗಿರಿ ಪಟ್ಟಣದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಮುಖ್ಯ ಶಿಕ್ಷಕರ ಕಾರ್ಯಾಗಾರ ಮತ್ತು ಕ್ಯಾಲೆಂಡರ್ ಬಿಡುಗಡೆ ಸಮಾರಂಭವನ್ನು ತಹಶೀಲ್ದಾರ್ ಎಲ್.ಎಂ.ನಂದೀಶ್ ಉದ್ಘಾಟಿಸಿದರು.

Publicstory. in


ಮಧುಗಿರಿ: ಶಿಕ್ಷಕ ವೃತ್ತಿ ತಂತಿ ಮೆಲಿನ ನಡಿಗೆಯಾಗಿದ್ದು, ಬಡ್ತಿ ಹೊಂದಿದ ಶಿಕ್ಷಕರು ಕೆಲವೇ ತಿಂಗಳುಗಳಲ್ಲಿ ಖಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಅಧ್ಯಕ್ಷ ವಿ.ಹೆಚ್.ವೆಂಕಟೇಶಯ್ಯ ಆತಂಕ ವ್ಯಕ್ತಪಡಿಸಿದರು.

ಪಟ್ಟಣದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಮುಖ್ಯ ಶಿಕ್ಷಕರ ಕಾರ್ಯಾಗಾರ ಮತ್ತು ಕ್ಯಾಲೆಂಡರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಾಥಮಿಕ ಶಿಕ್ಷಣ ರಾಷ್ಟ್ರದ ಭದ್ರ ಬುನಾದಿಯಾಗಿದೆ. ಶಿಕ್ಷಕರ ಕರ್ತವ್ಯ ದುಸ್ತರವಾಗಿದೆ. ಮುಖ್ಯ ಶಿಕ್ಷಕರು ಸಹ ಶಿಕ್ಷಕರಿಗೆ ಹೆದರುವಂತಹ ಪರಿಸ್ಥಿತಿ ಇದೆ ಎಂದರು.

ಈ ಕಾರ್ಯಾಗಾರದಲ್ಲಿ ಭಾಗವಹಿಸಿ ಸಂಪನ್ಮೂಲ ವ್ಯಕ್ತಿಗಳಿಂದ ಸಲಹೆಗಳನ್ನು ಪಡೆದುಕೊಳ್ಳಿ, ದಾಖಲಾತಿಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡಿ ನಿಯಮಗಳನ್ನು ತಿಳಿದುಕೊಳ್ಳಿ ಎಂದು ಹೇಳಿದರು.

ಮುಗ್ದ ಶಿಕ್ಷಕರಿಗೆ ತೊಂದರೆಯಾದಲ್ಲಿ ಶಿಕ್ಷಕರ ಹಾಗೂ ಸರ್ಕಾರಿ ನೌಕರರ ಸಂಘ ನೆರವಿಗೆ ಬರಲಿದೆ. ಯಾವುದೇ ಇಲಾಖೆಯ ನೌಕರರ ಸಮಸ್ಯೆಗಳು ಇದ್ದರೂ ಬಗೆಹರಿಸಲಾಗುವುದು. 2022ಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದ ಮಾದರಿ ವೇತನ ಕೊಡಿಸುವುದಾಗಿ ರಾಜ್ಯಾಧ್ಯಕ್ಷ ಷಡಕ್ಷರಿ ಭರವಸೆ ನೀಡಿದ್ದಾರೆ ಎಂದರು.

ತಾಲ್ಲೂಕಿನ ಸುಮಾರು 600 ಜನ ಸರ್ಕಾರಿ ನೌಕರರಿಗೆ ಹಾಗೂ ಶಿಕ್ಷಕರಿಗೆ ಡಿ.ಎಲ್ ಮಾಡಿಸಿಕೊಡುವುದಾಗಿ ತಿಳಿಸಿದರು.

ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ರಾಮಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲೆಯ ಪ್ರತಿಯೊಂದು ವಿಷಯಕ್ಕೂ ಮುಖ್ಯ ಶಿಕ್ಷಕರನ್ನೇ ಹೊಣೆಗಾರರನ್ನಾಗಿ ಮಾಡುತ್ತಿದ್ದು, ಇಲಾಖೆ ಅಧಿಕಾರಿಗಳು ಮನೋಸ್ಥೈರ್ಯ ತುಂಬಬೇಕು ಎಂದರು.

ಮುಖ್ಯ ಶಿಕ್ಷಕ ವೆಂಕಟರಮಣಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿ, ಈ ಹಿಂದೆ ಶಾಲೆಗಳಲ್ಲಿಡಿ.ಗ್ರೂಪ್ ನೌಕರರಿದ್ದು, ಸ್ವಚ್ಚತಾ ಕಾರ್ಯ ಮಾಡುತ್ತಿದ್ದರು. ಈಗ ಆ ಕಾರ್ಯಕ್ಕೆ ವಿಧ್ಯಾರ್ಥಿಗಳನ್ನು ಬಳಸಿಕೊಂಡರೆ ಪೋಷಕರು ಪ್ರಶ್ನಿಸುತ್ತಾರೆ. ಆದ್ದರಿಂದ ಸರ್ಕಾರ ಶಾಲೆಗಳಿಗೆ ಡಿ.ಗ್ರೂಪ್ ನೌಕರರನ್ನು ನೇಮಿಸಬೇಕು. ಇಲ್ಲದಿದ್ದರೆ ಗ್ರಾ.ಪಂ ನವರು ಶಾಲಾ ಆವರಣ, ಶೌಚಾಲಯ ಸ್ವಚ್ಚಗೊಳಿಸಲು ನೆರವು ನೀಡಬೇಕು ಎಂದರು.

ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಜಗದೀಶ್ ಮಾತನಾಡಿದರು. ತಹಶೀಲ್ದಾರ್ ಎಲ್.ಎಂ.ನಂದೀಶ್, ಬಿಇಓ ರಂಗಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟರಂಗಾರೆಡ್ಡಿ, ಮುಖ್ಯ ಶಿಕ್ಷಕರ ಸಂಘದ ಉಪಾದ್ಯಕ್ಷ ನರಸಪ್ಪ, ಪ್ರೌಡಾಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನ್, ಶಿಕ್ಷಣ ಸಂಯೋಜಕ ಪ್ರಾಣೇಶ್, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಜಯರಾಮಯ್ಯ, ಪದಾಧಿಕಾರಿಗಳಾದ ಸಂಜಯ್, ಬಸವರಾಜು, ಹೆಚ್.ಆರ್.ಶಶಿಕುಮಾರ್, ಚಂದ್ರಕಲಾ, ನಟರಾಜು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?