ತುಮಕೂರು ಲೈವ್

ವರದಿಗಾರ ಅಪಘಾತದಲ್ಲಿ ಸಾವು

ತುಮಕೂರು:

ಕರ್ತವ್ಯನಿರತ ಪತ್ರಕರ್ತರೊಬ್ಬರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ರಾಮನಗರದಲ್ಲಿ ನಡೆದಿದೆ. ಪಬ್ಲಿಕ್ ಟಿವಿ ಜಿಲ್ಲಾ ವರದಿಗಾರ ಹನುಮಂತು ಮೃತ ವ್ಯಕ್ತಿ.

ರಾಮನಗರ ಜಿಲ್ಲಾ ಕಾರಾಗೃಹದ ಮುಂಭಾಗ ಇಂದು ಮಧ್ಯಾಹ್ನ ಅಪಘಾತ ನಡೆದಿದೆ. ಎಟಿಎಂ ಹಣ ಸಾಗಿಸುತ್ತಿದ್ದ ವಾಹನ ಡಿಕ್ಕಿ ಹೊಡೆದ ಪರಿಣಾಮ ಹನುಮಂತು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಕಾರಣವಾದ ವಾಹನವನ್ನ ಜಪ್ತಿ ಮಾಡಿ ಚಾಲಕನನ್ನು ಬಂಧಿಸಿದ್ದಾರೆ. ಅಪಘಾತದ ಸಂಬಂಧ ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಮೃತರು 2 ವರ್ಷದ ಮಗಳು ಹಾಗೂ ಪತ್ನಿಯನ್ನು ಅಗಲಿದ್ದಾರೆ.

ಇನ್ನು ಹನುಮಂತು ಸಾವಿಗೆ ಸಂತಾಪ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ, ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.

Comment here