Friday, April 19, 2024
Google search engine
Homeತುಮಕೂರು ಲೈವ್ವೈದ್ಯರು, ನರ್ಸ್ ಗಳಿಗೆ ಸ್ಯಾ‌ನಿಟೈಸರ್, ಮಾಸ್ಕ್

ವೈದ್ಯರು, ನರ್ಸ್ ಗಳಿಗೆ ಸ್ಯಾ‌ನಿಟೈಸರ್, ಮಾಸ್ಕ್

publicstory. in


ಶಿರಾ: ಇಲ್ಲಿನ ರಾಮ್ ಮನೋಹರ್ ಲೋಹಿಯಾ ಸಮತಾ ವಿದ್ಯಾಲಯ ಟ್ರಸ್ಟ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ಮಾಸ್ಕ್, ಸ್ಯಾನಿಟೈಸರ್ ಮತ್ತು ಹ್ಯಾಂಡ್ ಗ್ಲೌಸ್‍ಗಳನ್ನು ನರ್ಸ್, ವೈದ್ಯರು, ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಕಾರ್ಯಕರ್ತರುಗಳಿಗೆ ವಿತರಿಸಲು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.

ಜಿಲ್ಲಾಧಿಕಾರಿ ಡಾ. ರಾಕೇಶ್‍ಕುಮಾರ್ ಮಾತನಾಡಿ ಕೋವಿಡ್-19 ಹಿನ್ನೆಲೆಯಲ್ಲಿ ಕೊರೊನಾ ವಾರಿಯರ್ಸ್‍ ಗಳಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಜಿಲ್ಲಾಡಳಿತದ ವಿತರಿಸಲಾಗುವುದು ನಿಮ್ಮ ಕಾರ್ಯವೈಖರಿ ಇಡೀ ದೇಶವೇ ನೋಡುತ್ತಿದೆ ಎಂದರು.

ಸ್ಯಾನಿಟೈಜರ್‍ಗಳನ್ನು ಹಸ್ತಾಂತರಿಸಿ ಮಾತನಾಡಿದ ಹೈಕೋರ್ಟಿನ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಲಾಕ್‍ಡೌನ್ ಆಗಿರುವುದರಿಂದ ಕೊರೊನಾ ವಾರಿಯರ್ಸ್‍ಗಳಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್‍ಗಳ ಸಮಸ್ಯೆಯಾಗುತ್ತಿದೆ.ಮನೆ-ಮನೆಗೆ ಭೇಟಿ ನೀಡಿ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಿ, ಕುಟುಂಬ ಸದಸ್ಯರಿಗೆ ತಪಾಸಣೆ ಮಾಡುತ್ತಿದ್ದಾರೆ.

ಅದಕ್ಕಾಗಿಯೇ ಅವರಿಗೆ ಅನುಕೂಲವಾಗುವಂತೆ ಹೆಡ್ ಶೀಲ್ಡ್ ಮಾಸ್ಕ್‍ಗಳನ್ನು ಸಹ ನೀಡಲಾಗಿದೆ.ಶಿರಾ ತಾಲೂಕಿನರುವ ನಮ್ಮ ಶಾಲೆಯಲ್ಲಿ 20 ಟೈಲರ್‍ಗಳಿಂದ ಸುಮಾರು 1 ಲಕ್ಷ ಮಾಸ್ಕ್ ತಯಾರಿಸಿ, ಕಳೆದ 3 ವಾರಗಳಿಂದ ಹಂಚುತ್ತಿದ್ದೇವೆ ಎಂದರು.

ಆಶಾ ಕಾರ್ಯಕರ್ತೆಯರಿಗೆ 75 ಲೀಟರ್ ಸ್ಯಾನಿಟೈಜರ್, 800 ಹ್ಯಾಂಡ್ ಗ್ಲೋಸ್, 2500 ಮಾಸ್ಕ್, 200 ಹೆಡ್ ಶೀಲ್ಡ್ ಮಾಸ್ಕ್ ಅಂಗನವಾಡಿ ಕಾರ್ಯಕರ್ತೆಯರಿಗೆ 25 ಲೀಟರ್ ಸ್ಯಾನಿಟೈಜರ್, 1500 ಹೋಂ ಗಾರ್ಡ್‍ಗಳಿಗೆ 20 ಲೀಟರ್ ಸ್ಯಾನಿಟೈಜರ್, 1500 ಮಾಸ್ಕ್, ಮಹಾನಗರ ಪಾಲಿಕೆಯ ಆವರಣದಲ್ಲಿ ಪೌರ ಕಾರ್ಮಿಕರಿಗೆ 25 ಲೀಟರ್ ಸ್ಯಾನಿಟೈಜರ್, 2000 ಮಾಸ್ಕ್, ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಕಟ್ಟಡ ಕಾರ್ಮಿಕರಿಗೆ 5 ಲೀಟರ್ ಸ್ಯಾನಿಟೈಜರ್, 1500 ಮಾಸ್ಕ್ ವಿತರಿಸಿದರು.

ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್, ಡಿಹೆಚ್‍ಓ ಡಾ. ಚಂದ್ರಿಕಾ, ಜಿಲ್ಲಾ ಸರ್ಜನ್ ಡಾ.ವೀರಭದ್ರಯ್ಯ ಮೊದಲಾದವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?