Wednesday, March 27, 2024
Google search engine
Homeತುಮಕೂರು ಲೈವ್₹1 ಕೋಟಿ ಪರಿಹಾರ ಕೊಡಲು ಶಾಸಕ ಮಸಾಲ ಜಯರಾಂ ಒತ್ತಾಯ

₹1 ಕೋಟಿ ಪರಿಹಾರ ಕೊಡಲು ಶಾಸಕ ಮಸಾಲ ಜಯರಾಂ ಒತ್ತಾಯ

ತುಮಕೂರು: ಹೃದಯಾಘಾತದಿಂದ ಅಕಾಲಿಕ ಮರಣ ಹೊಂದಿದ ಐ.ಎ.ಎಸ್. ಅಧಿಕಾರಿ ಹೆಚ್.ಗಂಗಾಧರಯ್ಯ ಕೃಟುಂಬಸ್ತರಿಗೆ ಒಂದು ಕೋಟಿ ಪರಿಹಾರ ನೀಡುವಂತೆ ಶಾಸಕ ಮಸಾಲಜಯರಾಮ್ ಸರ್ಕಾರಕ್ಕೆ ಒತ್ತಾಯಿಸಿದರು.

ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನೋಡೆಲ್ ಅಧಿಕಾರಿಯಾಗಿ (ಕೆಎಎಸ್) ಕೋವಿಡ್ 19 ಕರ್ತವ್ಯದಲ್ಲಿದ್ದ ಹೆಚ್.ಗಂಗಾಧರಯ್ಯ ಅವರು ಹೃದಯಾಘಾತದಿಂದ ಮರಣ ಹೊಂದಿದ್ದು,ತುಂಬಾ ದುಃಖ ಕರವಾದ ಸಂಗತಿಯಾಗಿದ್ದು ಒಬ್ಬ ದಕ್ಷ, ಪ್ರಾಮಾಣಿಕ ಅಧಿಕಾರಿಯಿಂದ ತಾಲೂಕಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಕುಟುಂಬಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು 25ಲಕ್ಷ ಪರಿಹಾರವನ್ನು ಈಗಾಗಲೇ ಘೊಷಿಸಿದ್ದಾರೆ ಆದರೆ 1ಕೋಟಿ ಪರಿಹಾರ ಹಾಗೂ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.

ಭಾರತೀಯ ವಾಯು ಸೇನೆಯಲ್ಲಿ ಸೇವೆಯನ್ನು ಸಲ್ಲಿಸಿ ನಂತರ,ಸರ್ಕಾರದ,ಕಂದಾಯ ಇಲಾಖೆಯ ವಿವಿಧ ಹುದ್ದೆಗಳಲ್ಲಿ,ಕಾರ್ಯನಿರ್ವಹಿಸಿ,ಕೆ.ಎ.ಎಸ್ ಅಧಿಕಾರಿಯಾಗಿದ್ದು ಅಕಾಲಿಕ ಮರಣ ಹೊಂದಿರುವುದು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಪ್ರಾರ್ಥಿಸಿದರು.

ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು.

ಶಾಸಕ ಮಸಾಲಜಯರಾಮ್, ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಂಶಿಕೃಷ್ಣ, ಉಪವಿಭಾಗಾಧಿಕಾರಿಗಳು, ಹಾಗೂ ತಹಶೀಲ್ದಾರ್ ರವರು ಅಂತಿಮ ಹಂತದವರೆಗೂ ಜೊತೆಗಿದ್ದು ಕುಟುಂಬದವರಿಗೆ ಧೈರ್ಯ ತುಂಬಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?