Monday, April 15, 2024
Google search engine
Homeತುಮಕೂರು ಲೈವ್ಅಲ್ಪಸಂಖ್ಯಾತರಿಗೆ ಅನುದಾ‌ನ ಕಡಿತ: ಮಾಜಿ ಶಾಸಕ‌ ರಫೀಕ್ ಗರಂ

ಅಲ್ಪಸಂಖ್ಯಾತರಿಗೆ ಅನುದಾ‌ನ ಕಡಿತ: ಮಾಜಿ ಶಾಸಕ‌ ರಫೀಕ್ ಗರಂ

Tumkuru: ಮುಖ್ಯಮಂತ್ರಿ ಯಡಿಯೂರಪ್ಪ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಮೀಸಲಿಡುತ್ತಿದ್ದ ಅನುದಾನವನ್ನು ಕಡಿತಗೊಳಿಸಿದ್ದಾರೆ ಎಂದು ಮಾಜಿ ಶಾಸಕ ರಫೀಕ್ ಅಹಮದ್ ದೂರಿದರು.

ತುಮಕೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಬಜೆಟ್ ನಲ್ಲಿ ಹೊಸ ಘೋಷಣೆ ಮಾಡಿಲ್ಲ. ಮುಖ್ಯಮಂತ್ರಿಯೇ ಹೇಳುವಂತೆ ಕೇಂದ್ರ ಕೂಡ ಅನುದಾನ ಕಡಿಮೆ ಮಾಡಿದೆ. ಹೀಗಾರಿ ರಾಜ್ಯದಲ್ಲಿ ಅಭಿವೃದ್ಧಿ ಕಾರಣಲು ಆಗುವುದಿಲ್ಲ ಎಂದರು.

ಮುಖ್ಯಮಂತ್ರಿಗಳು ಕೆಲವೊಂದು ಯೋಜನೆಗಳಿಗೆ ಅನುದಾನ ಕಡಿತ ಮಾಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಕೊಡುತ್ತಿದ್ದ 7 ಕೆ.ಜಿ. ಅಕ್ಕಿ ಬದಲಿಗೆ 5 ಕೆಜಿಗೆ ಇಳಿಸಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ಹೇಳಿದರು.

ಹಿಂದಿನ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗೆ 2300 ಕೋಟಿ ರೂಪಾಯಿ ನೀಡಿತ್ತು. ಈಗ 1200 ಕೋಟಿ ರೂಪಾಯಿ ನೀಡಿ ಒಂದು ಸಾವಿರ ಕೋಟಿ ಕಡಿತಗೊಳಿಸಿದ್ದಾರೆ ಎಂದು ತಿಳಿಸಿದರು.

ಹಿಂದಿನ ಸರ್ಕಾರದ ಬಹಳಷ್ಟು ಯೋಜನೆಗಳನ್ನು ರೂಪಿಸಿದ್ದರು. ಈಗ ಒಂದು ಯೋಜನೆಯೂ ಇಲ್ಲ. ಇದು ಆತಂಕ ಸೃಷ್ಟಿ ಮಾಡಿದೆ. ಅಲ್ಲಸಂಖ್ಯಾತರಿಗಾಗಿ ಸಿದ್ದರಾಮಯ್ಯ ಸರ್ಕಾರ 800 ಕೋಟಿ ರೂಪಾಯಿ ನೀಡಿತ್ತು. ಎಚ್.ಡಿ.ಕುಮಾರಸ್ವಾಮಿ ಸರ್ಕಾರ 400 ಕೋಟಿ ನೀಡಿತ್ತು. ಆದರೆ ಯಡಿಯೂರಪ್ಪ ಸರ್ಕಾರ ಕೇವಲ 200 ಕೋಟಿ ನೀಡಿ ಅಪಾರ ಪ್ರಮಾಣದ ಹಣವನ್ನು ಕಡಿತ ಮಾಡಿದೆ ಎಂದು ದೂರಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?