Friday, March 29, 2024
Google search engine
Homeತುಮಕೂರು ಲೈವ್ಊರುಕೆರೆಯಲ್ಲಿ ರೌಡಿಗಳ ಆರ್ಭಟ

ಊರುಕೆರೆಯಲ್ಲಿ ರೌಡಿಗಳ ಆರ್ಭಟ

Tumukuru: ಪ್ರಶ್ನಿಸಿದನೆಂಬ ಕ್ಷುಲ್ಲಕ ಕಾರಣಕ್ಕೆ ರೌಡಿಗಳ ಗುಂಪೊಂದು ಮೂವರು ನಾಗರಿಕರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ತುಮಕೂರು ಹೊರವಲಯದ ಊರುಕೆರೆ ಗ್ರಾಮದಲ್ಲಿ ನಡೆದಿದೆ.

ಊರುಕೆರೆ ಗ್ರಾಮದಲ್ಲಿ ಕೃಷ್ಣಪ್ಪ ಕಾರು ಹಿಂದಕ್ಕೆ ತೆಗೆಯುತ್ತಿದ್ದಾಗ ರಾಜಣ್ಣನವರಿಗೆ ತಗುಲಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ಕೃಷ್ಣಪ್ಪ ಮತ್ತು ಆತನ ಬೆಂಬಲಿಗರು ಹಾಡಹಗಲೇ ಲಾಂಗು, ಮಚ್ಚುಗಳನ್ನು ಹಿಡಿದು ಊರಲ್ಲೆಲ್ಲ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದರು ಎಂದು ತಿಳಿದುಬಂದಿದೆ.

ಕೃಷ್ಣಪ್ಪ, ಮಂಜುನಾಥ್, ಜಗದೀಶ್, ಅಕ್ಷಯ್, ಪುರುಷೋತ್ತಮ್ ಮತ್ತು ರಘು ತಮ್ಮ ಕೈಗಳಲ್ಲಿ ಮಚ್ಚು ಲಾಂಗುಗಳನ್ನು ಹಿಡಿದು ರಾಜಣ್ಣನೂ ಸೇರಿ ಜೊತೆಯಲ್ಲಿದ್ದವರನ್ನು ಮನಬಂದಂತೆ ಲಾಂಗುಗಳಿಂದ ಕೊಚ್ಚಿದ್ದಾರೆ ಎನ್ನಲಾಗಿದೆ.

ದಾಳಿಯಲ್ಲಿ ಸುನಿಲ್, ಪುಟ್ಟನರಸಮ್ಮ, ರಂಗಣ್ಣ ತೀವ್ರ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಟ್ಟಹಾಸದಿಂದ ಇಡೀ ಗ್ರಾಮ ಭೀತಗೊಂಡಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?