Wednesday, March 27, 2024
Google search engine
Homeತುಮಕೂರ್ ಲೈವ್ಎಸ್ಎಸಿ ಮಯೂರು ವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ

ಎಸ್ಎಸಿ ಮಯೂರು ವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ

Punlicstory


ತುರುವೇಕೆರೆ: ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಎಸ್ಎಸಿ ಮಯೂರು ವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೇ ಅಧ್ಯಕ್ಷರು, ಅತಿಥಿಗಳಾಗಿ ಭಾಗವಹಿಸಿ ಸಂಭ್ರಮದಿಂದ ಆಚರಿಸಿದರು.

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಜವಹರಲಾಲ್ ನೆಹರೂ ಅವರು ಮಕ್ಕಳಿಗೆ ತೋರುತ್ತಿದ್ದ ಪ್ರೀತಿ, ಕಾಳಜಿ, ಉದಾರತೆಗಳ ಕುರಿತು ಮಾತನಾಡಿದರು. ಕೆಲ ವಿದ್ಯಾರ್ಥಿಗಳು ನೆಹರೂ ಜೈಲಿನಲ್ಲಿದ್ದಾಗ ತನ್ನ ಮಗಳಾದ ಇಂದಿರಾ ಗಾಂಧಿಗೆ ಬರೆದ ಪತ್ರಗಳ ಬಗ್ಗೆ ಮಾಡುತ್ತಾ ದೊಡ್ಡವರನ್ನೂ ನಾಚುವಂತೆ ಭಾಷಾ ಮಾಡಿ ಕಾರ್ಯಕ್ರಮದಲ್ಲಿದ್ದವರಿಂದ ಚಪ್ಪಾಳೆ ಗಿಟ್ಟಿಸಿದರು.

ಮಕ್ಕಳಿಂದ ಜರುಗಿದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಎಲ್ಲರನ್ನೂ ಹುಬ್ಬೇರುವಂತೆ ಮಾಡಿತು. ಮಕ್ಕಳ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಓಟದ ಸ್ಪರ್ಧೆ, ಕೆರೆ ದಡ, ಕಪ್ಪೆ ಓಟ, ಬಾಲನ್ನು ಬಕೀಟ್ನೊಳಗೆ ಹಾಕುವುದು, ಬಿಸ್ಕೇಟ್ ತಿನ್ನುವುದು, ಬಲೂನು ಊದುವ, ಮ್ಯೂಜಿಕಲ್ ಚೇರ್, ಭಾಷಣ ಮತ್ತು ಪ್ರಬಂಧ ಸ್ಪರ್ಧಿಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ಕೊಟ್ಟು ಪ್ರೋತ್ಸಾಹಿಸಲಾಯಿತು. ನಂತರ ಮಕ್ಕಳಿಗೆ ಸಿಹಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಜಯದೇವಮೂರ್ತಿ, ಶಿಕ್ಷಕರುಗಳಾದ ವಿಮಲ, ರೇಖಾ, ರಾಧಾ, ಶ್ರುತಿ, ಸೌಮ್ಯ, ನಾಗೇಶ್, ಗೌಡ, ಇಂದಿರಾ, ಕೋಮಲ, ಲತಾ, ಗೀತಾ, ಕವಿತ, ಸದಾಶಿವಯ್ಯ, ಮಮತಿ ಮತ್ತು ಸಿಬ್ಬಂದಿಗಳು ಉಪಸ್ಥಿತಿರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?