Monday, April 15, 2024
Google search engine
Homeಜಸ್ಟ್ ನ್ಯೂಸ್ಕನ್ನಡಿಗ ವಿಶ್ವನಾಥ್‌ ಸಜ್ಜನರಿಗೆ ಅಭಿನಂದನೆಗಳ ಸುರಿಮಳೆ

ಕನ್ನಡಿಗ ವಿಶ್ವನಾಥ್‌ ಸಜ್ಜನರಿಗೆ ಅಭಿನಂದನೆಗಳ ಸುರಿಮಳೆ

ಹೈದರಾಬಾದ್: ಪಶುವೈದ್ಯೆ ಅತ್ಯಾಚಾರ ಪ್ರಕರಣದ ಆರೋಪಿಗಳ ಎನ್‌ಕೌಂಟರ್‌ ಕಾರ್ಯಾಚರಣೆಯ ಮುಖ್ಯ ರುವಾರಿ  ಸೈಬರಾಬಾದ್‌ ಪೊಲೀಸ್‌ ಆಯುಕ್ತ ಹುಬ್ಬಳ್ಳಿಯವರಾದ ವಿಶ್ವನಾಥ್ ಸಜ್ಜನರ. 

ಈ ಹಿಂದೆ ಆಂಧ್ರಪ್ರದೇಶದ ವಾರಂಗಲ್‌ನಲ್ಲಿ ನಡೆದ ಆ್ಯಸಿಡ್ ದಾಳಿಯ ಆರೋಪಿಗಳನ್ನು ವಿಶ್ವನಾಥ್‌ ಎನ್‌ಕೌಂಟರ್‌ ಮಾಡಿದ್ದರು.

ಅಂತರರಾಷ್ಟ್ರೀಯ ಮಟ್ಟದಲ್ಲಿ ಕುಖ್ಯಾತಿಗೆ ಕಾರಣವಾಗಿದ್ದ  ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಎನ್‌ಕೌಂಟರ್‌ ಮಾಡಿರುವುದಕ್ಕೆ ಸೈಬರಾಬಾದ್‌ ಪೊಲೀಸ್‌ ಆಯುಕ್ತ ವಿಶ್ವನಾಥ್ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮಂದಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಅಸೂಟಿ ವಿಶ್ವನಾಥ್‌ ಅವರ ತಂದೆಯ ಸ್ವಗ್ರಾಮ . ವಿಶ್ವನಾಥ್‌ ಅವರು ಹುಟ್ಟಿ ಬೆಳದಿದ್ದು ಹುಬ್ಬಳ್ಳಿಯಲ್ಲಿ.  ಅವರ ಕುಟುಂಬದವರು ಹುಬ್ಬಳ್ಳಿಯಲ್ಲಿಯೇ ನೆಲೆಸಿದ್ದಾರೆ. ವಿಶ್ವಾನಾಥ್‌ ಅವರು ಜೆಜಿ ಕಾಲೇಜಿನಲ್ಲಿ ಬಿ.ಕಾಂ ಪೂರ್ಣಗೊಳಿಸಿದ್ದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಬಿಎ ಪದವಿ ಪಡೆದಿದ್ದಾರೆ.

1996 ಐಪಿಎಸ್‌ ಬ್ಯಾಚ್‌ನವರಾದ ವಿಶ್ವನಾಥ್‌ ಆಂಧ್ರಪ್ರದೇಶ ಪೊಲೀಸ್‌ ಇಲಾಖೆಗೆ ನಿಯೋಜನೆಯಾದರು. ಅವರಿ ಈವರೆಗೆ 8 ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ(ಎಸ್.ಪಿ) ಯಾಗಿ ಕಾರ್ಯನಿರ್ವಹಿಸಿದ್ದಾರೆ. ಆಂಧ್ರ ನಕ್ಸಲ್‌ ನಿಗ್ರಹ ದಳದಲ್ಲಿ ನಕ್ಸಲರ ಶರಣಾಗತಿ ಮಾಡಿ, ಅವರನ್ನು ಮುಖ್ಯವಾಹಿನಿ ತರುವಲ್ಲಿ ವಿಶ್ವನಾಥ್ ಅವರ ಪಾತ್ರ ಪ್ರಮುಖವಾದದ್ದು.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?