Friday, April 19, 2024
Google search engine
Homeಜಸ್ಟ್ ನ್ಯೂಸ್ಕರೊನಾ ಪೀಡಿತ 10 ತಿಂಗಳ ಮಗು ಗುಣಮುಖ: ವೈದ್ಯರಲ್ಲಿ ಮಂದಹಾಸ

ಕರೊನಾ ಪೀಡಿತ 10 ತಿಂಗಳ ಮಗು ಗುಣಮುಖ: ವೈದ್ಯರಲ್ಲಿ ಮಂದಹಾಸ

Publicstory.in


ಮಂಗಳೂರು: 10 ತಿಂಗಳ ಮಗುವಿನ ಕರೋನಾ ಪ್ರಕರಣವು, ರಾಜ್ಯದಲ್ಲೇ ವಿಶಿಷ್ಟ ಪ್ರಕರಣವಾಗಿತ್ತು. ಕೇವಲ ಎದೆ ಹಾಲು ಕುಡಿಯುವ ಪುಟ್ಟ ಕಂದನಿಗೆ ಕರೋನಾ ಚಿಕಿತ್ಸೆ ನೀಡುವುದು ವೈದ್ಯರಿಗೂ ಸವಾಲಾಗಿತ್ತು.

ಪುಟ್ಟ ‌ಮಗುವಿನ‌ ಐಸೋಲೇಶನ್ ನೊಂದಿಗೆ, ಚಿಕಿತ್ಸೆ ನೀಡುವುದು ಬಹಳ ಸೂಕ್ಷ್ಮವಾಗಿತ್ತು. ವೈದ್ಯರು ಈ ಸವಾಲನ್ನು ಬಹಳ ನಾಜೂಕಾಗಿ ನಿರ್ವಹಿಸಿದ್ದು, ವೆನ್ ಲಾಕ್ ಹಾಗೂ ಖಾಸಗಿ ಆಸ್ಪತ್ರೆ ವೈದ್ಯರು ಗುಣಮಟ್ಟದ ಚಿಕಿತ್ಸೆ ನೀಡಿ, ಮಗುವನ್ನು ಗುಣಮುಖಗೊಳಿಸಿದ್ದಾರೆ. ಇದು ಜಿಲ್ಲೆಯ ವೈದ್ಯಕೀಯ ಕ್ಷೇತ್ರಕ್ಕೂ ಖ್ಯಾತಿ ತಂದಿದೆ.

ಅದೇ ರೀತಿ, ಮಗುವಿನ ಗ್ರಾಮದಲ್ಲಿ ಯಾರಿಗೂ ಕರೋನಾ ಹರಡದಿರುವುದು ಸಮಾಧಾನಕರ ವಿಷಯವಾಗಿದೆ. ಕರೋನಾ ದೃಟಪಟ್ಟ ನಂತರ ಇಡೀ ಸಜೀಪನಡು ಗ್ರಾಮವನ್ನು ಸಂಪೂರ್ಣ ಸೀಲ್ ಮಾಡಲಾಗಿತ್ತು. ಗ್ರಾಮಸ್ಥರು ಬಹಳ ಉತ್ತಮ‌ ಸಹಕಾರ ನೀಡಿದ್ದಾರೆ.

ಈ ಅವಧಿಯಲ್ಲಿ ಜಿಲ್ಲಾಡಳಿತ ಗ್ರಾಮಸ್ಥರಿಗೆ ಎಲ್ಲಾ ಅಗತ್ಯ ಸಾಮಾಗ್ರಿಗಳು, ಸೌಲಭ್ಯಗಳನ್ನು ಮನೆ ಬಾಗಿಲಿಗೆ‌ ಒದಗಿಸಿದೆ.

ಮಗುವು ಸಂಪೂರ್ಣ ಗುಣಮುಖ ವಾಗಿ, ಇಂದು ಆಸ್ಪತ್ರೆ ಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದೆ.

ಮಗುವಿನ ತಾಯಿ ಹಾಗೂ ಅಜ್ಜಿಯ ಪರೀಕ್ಷಾ ವರದಿಗಳು ನೆಗೆಟಿವ್ ಆಗಿರುತ್ತದೆ. ಇವರೂ ಕೂಡಾ ಇಂದು ಡಿಸ್ಚಾಜ್೯ ಆಗಿರುತ್ತಾರೆ.
ಇದುವರೆಗೆ ದ.ಕ. ಜಿಲ್ಲೆಯ 12 ಕರೋನಾ‌ ಪಾಸಿಟಿವ್ ಪ್ರಕರಣಗಳಲ್ಲಿ 6 ಮಂದಿ ಗುಣಮುಖರಾಗಿ, ಬಿಡುಗಡೆಗೊಂಡಿದ್ದು, ಶೇಕಡಾ 50 ಪ್ರಗತಿಯಾಗಿದೆ.

ಈ ವಾರ ಪೂರ್ತಿ ಅಂದರೆ ಏಪ್ರಿಲ್ 5 ರಿಂದ 11 ರವರೆಗೆ‌ ದ.ಕ. ಜಿಲ್ಲೆಯಲ್ಲಿ ಯಾವುದೇ ಹೊಸ ಕರೋನಾ ಪ್ರಕರಣಗಳು ದೃಢಪಟ್ಟಿರುವುದಿಲ್ಲ. ಇದು ಜಿಲ್ಲೆಯ ಮಟ್ಟಿಗೆ ಆಶಾದಾಯಕ ಸಂಗತಿ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?