Thursday, April 25, 2024
Google search engine
Homeತುಮಕೂರು ಲೈವ್ಕರ್ನಲ್ (ಪ್ರೊ.) ವೈ. ಎಸ್. ಸಿದ್ದೇಗೌಡರಿಗೆ ಪ್ರತಿಷ್ಠಿತ ಎನ್ ಐ ಪಿಎಂ ಫೆಲೋಷಿಪ್

ಕರ್ನಲ್ (ಪ್ರೊ.) ವೈ. ಎಸ್. ಸಿದ್ದೇಗೌಡರಿಗೆ ಪ್ರತಿಷ್ಠಿತ ಎನ್ ಐ ಪಿಎಂ ಫೆಲೋಷಿಪ್

Publicstory


ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಕರ್ನಲ್ (ಪ್ರೊ.) ವೈ. ಎಸ್. ಸಿದ್ದೇಗೌಡ ಅವರು ರಾಷ್ಟ್ರೀಯ ಸಿಬ್ಬಂದಿ ನಿರ್ವಹಣಾ ಸಂಸ್ಥೆ (ಎನ್‌ಐಪಿಎಂ)ಯ ಪ್ರತಿಷ್ಠಿತ ಫೆಲೋಷಿಪ್ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಎನ್‌ಐಪಿಎಂಗೆ ಎರಡು ಬಾರಿ ಅಧ್ಯಕ್ಷರಾಗಿದ್ದ ಪ್ರೊ. ಸಿದ್ದೇಗೌಡ ಅವರು ಸಂಸ್ಥೆಯ ಪ್ರಗತಿ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಕ್ಷೇತ್ರಕ್ಕೆ ನೀಡಿರುವ ಒಟ್ಟಾರೆ ಕೊಡುಗೆಯನ್ನು ಪರಿಗಣಿಸಿ ಈ ಫೆಲೋಷಿಪ್‌ಗೆ ಆಯ್ಕೆ ಮಾಡಲಾಗಿದೆ.
ತಮ್ಮ ೩೭ ವರ್ಷಗಳ ಶೈಕ್ಷಣಿಕ ಕ್ಷೇತ್ರದ ಸೇವೆಯ ಸಂದರ್ಭದಲ್ಲಿ ರಾಷ್ಟ್ರದಾದ್ಯಂತ ವಿವಿಧ ಹಂತಗಳ ಮಾನವ ಸಂಪನ್ಮೂಲ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕವಿರಿಸಿಕೊಂಡು ಸಾವಿರಾರು ಯುವಕರು ಉತ್ತಮ ಹುದ್ದೆಗಳನ್ನು ಪಡೆಯುವಲ್ಲಿ ಪ್ರೊ. ಸಿದ್ದೇಗೌಡ ಅವರು ಮಾರ್ಗದರ್ಶನ ನೀಡಿದ್ದಾರೆ.

ಸಮಾಜ ಕಾರ್ಯ ಕ್ಷೇತ್ರದ ವಿದ್ಯಾರ್ಥಿಗಳಲ್ಲದೆ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ವಿವಿಧ ಅಧ್ಯಯನ ವಿಭಾಗಗಳಲ್ಲಿ ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಸಮರ್ಥ ವೃತ್ತಿಜೀವನವನ್ನು ಕಟ್ಟಿಕೊಳ್ಳುವಲ್ಲಿ ಅವರು ನೆರವಾಗಿದ್ದಾರೆ.

ಮೂರು ವಿಶ್ವವಿದ್ಯಾನಿಲಯಗಳಲ್ಲಿ ನಾಲ್ಕು ಬಾರಿ ಕುಲಸಚಿವರಾಗಿ ಸೇವೆ ಸಲ್ಲಿಸಿದ್ದ ಪ್ರೊ. ಸಿದ್ದೇಗೌಡ ಅವರು ತಾವು ಸೇವೆ ಸಲ್ಲಿಸಿದ ಸಂಸ್ಥೆಗಳಲ್ಲಿ ಹಾಗೂ ಪ್ರಸ್ತುತ ಕುಲಪತಿಗಳಾಗಿರುವ ತುಮಕೂರು ವಿವಿಯಲ್ಲೂ ವಿದ್ಯಾರ್ಥಿಗಳ ಔದ್ಯೋಗಿಕ ಭವಿಷ್ಯಕ್ಕೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ಕಳೆದ ಒಂದೇ ವರ್ಷದಲ್ಲಿ ಪ್ರೊ. ವೈ. ಎಸ್. ಸಿದ್ದೇಗೌಡರು ಪಡೆದಿರುವ ಪ್ರತಿಷ್ಠಿತ ಐದನೇ ಪುರಸ್ಕಾರ ಇದಾಗಿದೆ. ಪ್ರಸ್ತುತ ಸಾಧನೆಗಾಗಿ ರಾಷ್ಟ್ರೀಯ ಸಿಬ್ಬಂದಿ ನಿರ್ವಹಣಾ ಸಂಸ್ಥೆ ಹಾಗೂ ತುಮಕೂರು ವಿವಿಯ ಸಹೋದ್ಯೋಗಿಗಳು ಅವರನ್ನು ಅಭಿನಂದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?