Thursday, March 28, 2024
Google search engine
Homeಜಸ್ಟ್ ನ್ಯೂಸ್ಕೊರಟಗೆರೆ : ಬೀದಿಗೆ ಏಕೆ ಬಂದರು ಹಾಲು ಉತ್ಪಾದಕರು

ಕೊರಟಗೆರೆ : ಬೀದಿಗೆ ಏಕೆ ಬಂದರು ಹಾಲು ಉತ್ಪಾದಕರು

ವಿದೇಶದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವ ಕೇಂದ್ರ ಸರ್ಕಾರ ನಿರ್ಧಾರವನ್ನು ಖಂಡಿಸಿ ಕೊರಟಗೆರೆ ಹಾಲು ಉತ್ಪಾದಕರು ಬೃಹತ್ ಪ್ರತಿಭಟನೆ ನಡೆಸಿದರು. ವಿದೇಶಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದರಿಂದ ಸ್ಥಳೀಯ ಹಾಲು ಉತ್ಪಾದಕರು ಬೀದಿಪಾಲಾಗಲಿದ್ದಾರೆ ಎಂದು ಆರೋಪಿಸಿದರು.
ನ್ಯೂಜಿಲ್ಯಾಂಡ್ ತನ್ನ ಉತ್ಪಾದನೆಯ ಶೇಕಡ 93ರಷ್ಟು ಹಾಲನ್ನು ರಫ್ತು ಮಾಡುತ್ತದೆ. ಈ ಹಾಲು ನಮ್ಮ ದೇಶದೊಳಗೆ ಬಂದರೆ ರೈತರು ಮತ್ತು ಕೃಷಿಕೂಲಿಕಾರರು ತೀವ್ರ ತೊಂದರೆ ಎದುರಿಸಬೇಕಾಗುತ್ತದೆ. ಹಾಗಾಗಿ ಕೇಂದ್ರ ಸರ್ಕಾರ ಪ್ರಾದೇಶಿಕ ಸಮಗ್ರ ಆರ್ಥಿಕ ಒಪ್ಪಂದಕ್ಕೆ ಸಹಿ ಹಾಕುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.


ವಿದೇಶೀ ಹಾಲನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವುದರಿಂದ ನಮ್ಮ ರೈತರ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಬೇರೆ ದೇಶಗಳೂ ಕೂಡ ನಮ್ಮ ಮಾರುಕಟ್ಟೆಗೆ ಲಗ್ಗೆ ಇಡಲು ಸಿದ್ದತೆ ನಡೆಸಿವೆ. ಇಂತಹ ಸನ್ನಿವೇಶದಲ್ಲಿ ಭಾರತ ಸರ್ಕಾರ ರೈತರ ವಿರೋಧಿ ನೀತಿ ಅನುಸರಿಸಲು ಮುಂದಾಗಿದೆ. ವಿದೇಶೀ ಹಾಲು ನಮ್ಮ ಮಾರುಕಟ್ಟೆ ಪ್ರವೇಶಿಸಿದರೆ ಲಕ್ಷಾಂತರ ಮಂದಿ ಹಾಲು ಉತ್ಪಾಧಕರು ಕೆಲಸ ನಿರುದ್ಯೋಗಿಗಳಾಗಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಅಲ್ಲದೆ ವಿದೇಶ ಬಹುರಾಷ್ಟ್ರೀಯ ಕಂಪನಿಗಳು ನಮ್ಮ ಮಾರುಕಟ್ಟೆಯ ಮೇಲೆ ಸವಾರಿ ಮಾಡಲಿವೆ ಎಂದು ಎಚ್ಚರಿಸಿದರು.


ಈಗಾಗಲೇ ಹಾಲು ಉತ್ಪಾದನೆ ರೈತರಿಗೆ ನಷ್ಟವನ್ನು ಉಂಟು ಮಾಡುತ್ತಿದೆ. ಆದರೂ ಅನಿವಾರ್ಯವಾಗಿ ಹೈನುಗಾರಿಕೆಯಲ್ಲಿ ರೈತರು ತೊಡಗಿದ್ದಾರೆ. ಅದರ ಫಲವಾಗಿ ರಾಜ್ಯದ ಪ್ರತಿನಿತ್ಯದ 80-85 ಲಕ್ಷ ಕುಟುಂಬಗಳಿಗೆ ಅನ್ಯಾಯವಾಗಲಿದೆ. ಜಿಲ್ಲೆಯ ಸುಮಾರು 70 ಸಾವಿರ ಕುಟುಂಬಗಳು ಹಾಲು ಉತ್ಪಾದನೆಯಲ್ಲಿ ತೊಡಗಿವೆ. ಕೇಂದ್ರ ಸರ್ಕಾರ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದರೆ ಇಷ್ಟು ಕುಟುಂಬಗಳು ಬೀದಿಗೆ ಬರಲಿವೆ. ದೇಶೀಯ ಹಾಲು ಉತ್ಪಾದಕರು ವಿದೇಶಿ ಹಾಲಿನೊಂದಿಗೆ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?