Friday, March 29, 2024
Google search engine
Homeತುಮಕೂರು ಲೈವ್ಕೊರೊನಾ: ಖರೀದಿಯಲ್ಲಿ ಅವ್ಯವಹಾರ ಆರೋಪ ಬೆನ್ನಲ್ಲೇ ತುಮಕೂರು DHO ಎತ್ತಂಗಡಿ

ಕೊರೊನಾ: ಖರೀದಿಯಲ್ಲಿ ಅವ್ಯವಹಾರ ಆರೋಪ ಬೆನ್ನಲ್ಲೇ ತುಮಕೂರು DHO ಎತ್ತಂಗಡಿ

Publicstory. in


ತುಮಕೂರು: ಕೊರೊನಾ ಸೋಂಕಿತರನ್ನು ಪರೀಕ್ಷಿಸಬೇಕಾದರೆ ವೈದ್ಯರು ಬಳಸುವ ಪಿಪಿಇ ಸಾಮಾಗ್ರಿಗಳ ಖರೀದಿಯಲ್ಲಿ ಅವ್ಯವಹಾರ ನಡೆಸಿದ ಆರೋಪ ಕೇಳಿ ಬಂದಿದ್ದ ತುಮಕೂರು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಚಂದ್ರಿಕಾ ಅವರನ್ನು ಸರ್ಕಾರ ಏಕಾಏಕಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಖರೀದಿಯಲ್ಲಿ ಅವ್ಯವಹಾರ ಎಸಗಲಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ ದಿಲೀಪ್ ಕುಮಾರ್ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.

ಆದರೆ, ವರ್ಗಾವಣೆಗೆ ಸರ್ಕಾರ ಯಾವುದೇ ಕಾರಣ ನೀಡಿಲ್ಲ. ಬೇರೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಈ ಸಾಮಗ್ರಿಗಳನ್ನು ಆಯಾ ಆಯಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಂಡುಕೊಳ್ಳಬೇಕಿತ್ತು. ಆದರೆ ಡಿಎಚ್ಒ ಅವರು ಅಧಿಕಾರಿಗಳನ್ನು ಕರೆಸಿ ಏಕಾಏಕಿ ಕಚೇರಿಗೆ ಕರೆಸಿಕೊಂಡು ಜಿಲ್ಲೆಯ ಎಲ್ಲ 145 ಪಿಎಸ್ ಸಿಗಳಿಗೆ ಖರೀದಿಸಲು ಒತ್ತಾಯಿಸಿದ್ದರು. ಅಲ್ಲದೇ ಪಾರ್ಮ್ ಗಳಿಗೆ ಸಹಿ ಹಾಕಿದ್ದರು. ಒಂದೇ ಏಜೆನ್ಸಿಗೆ ಆರ್ಡರ್ ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿತ್ತು.

ಚಂದ್ರಿಕಾ ಅವರನ್ನು ಹೊಸದುರ್ಗ ತಾಲ್ಲೂಕು ಆಸ್ಪತ್ರೆಯ ನೇತ್ರ ತಜ್ಞರಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಚಂದ್ರಿಕಾ ಜಾಗಕ್ಕೆ ತುಮಕೂರು ಜಿಲ್ಲೆಯ ಜಿಲ್ಲಾಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ ನಾಗೇಂದ್ರಪ್ಪ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಏನಿದು ಹಗರಣ


RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?