Friday, March 29, 2024
Google search engine
Homeತುಮಕೂರು ಲೈವ್ಚಿರತೆಗೆ ಮಗು ಬಲಿ

ಚಿರತೆಗೆ ಮಗು ಬಲಿ

Tumkuru: ಚಿರತೆ ದಾಳಿಗೆ ಬಾಲಕಿ ಮೃತಪಟ್ಟಿದ್ದಾಳೆ.

ತುಮಕೂರು ತಾಲೂಕು ಹೆಬ್ಬೂರು ಹೋಬಳಿಯ ಕಣಕುಪ್ಪೆ ಪಂಚಾಯಿತಿ ಬೈಚೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಗಂಗಚಿಕ್ಕಣ್ಣ ಅವರ ಮೊಮ್ಮಗ ಮನೆ ಮುಂದೆ ಆಟ ಆಡುವಾಗ ಚಿರತೆ ದಾಳಿ ಮಾಡಿದೆ.

ಇಂದು ಸಂಜೆ 6 ಗಂಟೆಗೆ ಮತ್ತೆ ಚಿರತೆ ದಾಳಿ ನಡೆಸಿದ್ದ 3 ವರ್ಷದ ಮಗು ಬಲಿಯಾಗಿದೆ.

ಈಚೆಗಷ್ಟೇ ಇಲ್ಲಿಯೇ ಸಮೀಪ ಐದು ವರ್ಷದ ಮಗವನ್ನು ಚಿರತೆ ಕೊಂದಿತ್ತು.

ಬೈಚೇನಹಳ್ಳಿ ಗ್ರಾಪಂ ಸದಸ್ಯ ಗಂಗಚಿಕ್ಕಣ್ಣ ಅವರ ಮೊಮ್ಮಗು ಚಂದನ್ ಮನೆಯ ಮುಂದೆ ಆಟವಾಡುತ್ತಿದ್ದಳು. ಈ ಸಮಯದಲ್ಲಿ ರಾತ್ರಿ ೮ ಗಂಟೆ ವೇಳೆಗೆ ಚಿರತೆ ದಾಳಿ ನಡೆಸಿದ್ದು, ಮಗುವನ್ನು ಹೊತ್ತೊಯ್ದಿದೆ.

ಮಗುವಿನ ತಂದೆ ತಾಯಿ ಬೆಂಗಳೂರಿನಲ್ಲಿ ವಾಸವಾಗಿದ್ದು, ಮಗು ಅಜ್ಜನೊಂದಿಗೆ ಬೈಚೇನಹಳ್ಳಿಯಲ್ಲಿತ್ತು. ಮಗುವಿನ ತಂದೆ ಶಂಕರ್ ದಂಪತಿ ಶನಿವಾರವಷ್ಟೇ ಮಗುವನ್ನು ನೋಡಲು ಬೆಂಗಳೂರಿನಿಂದ ಬಂದಿದ್ದರು ಎನ್ನಲಾಗಿದೆ.

ಘಟನೆ ಬಳಿಕ ಅರಣ್ಯ ಹಾಗೂ ಪೊಲೀಸ್ ಅಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಮಗುವಿನ ಶವ ಪತ್ತೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಮನೆಯ ಸಮೀಪದಲ್ಲಿ ರಕ್ತದ ಕಲೆಗಳು ಪತ್ತೆಯಾಗಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?