Thursday, March 28, 2024
Google search engine
Homeತುಮಕೂರು ಲೈವ್ಡಿಕೆಶಿ ಒಬ್ಬ ವ್ಯಕ್ತಿಯಲ್ಲ, ಅದೊಂದು ಶಕ್ತಿ...

ಡಿಕೆಶಿ ಒಬ್ಬ ವ್ಯಕ್ತಿಯಲ್ಲ, ಅದೊಂದು ಶಕ್ತಿ…

ತುಳಸೀ ತನಯ

ತುಮಕೂರು:
ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಶ್ರೀಮತಿ ಗೌರಮ್ಮ ದಂಪತಿಯ ಪ್ರಥಮ ಪುತ್ರನಾಗಿ ಜನಿಸಿದ ಡಿ.ಕೆ. ಶಿವಕುಮಾರ್ (ಜನನ 15ನೇ ಮೇ 1962) ತಮ್ಮ ತಂದೆಯಿಂದಲೇ ನಾಯಕತ್ವದ ಗುಣಗಳನ್ನು ಪಡೆದುಕೊಂಡು ಬಂದರು.

18ನೇ ವಯಸ್ಸಿನಲ್ಲಿಯೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗವಾದ 0SUI ಗೆ ಸೇರ್ಪಡೆಗೊಂಡು ಅನತಿ ಕಾಲದಲ್ಲಿಯೇ ಬೆಂಗಳೂರು ಜಿಲ್ಲೆಯ ಘಟಕದ ಅಧ್ಯಕ್ಷರಾದರು(1981-83).
ತದನಂತರ ವಿದ್ಯಾಭ್ಯಾಸಕ್ಕೆಂದು ಬೆಂಗಳೂರು ಸೇರಿದ ಅವರು ಆರ್.ಸಿ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಯುವ ಕಾಂಗ್ರೆಸ್‍ಗೆ ಸೇರಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್‍ ಅಧ್ಯಕ್ಷರಾಗಿ ಕನಕಪುರ ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಜನಮನ ಸೆಳೆದರು.

1985ರ ಸಾತನೂರು ವಿಧಾನಸಭಾ ಕ್ಷೇತ್ರದಲ್ಲಿ ಅಂದಿನ ಪ್ರಭಾವಿ ಜನತಾದಳ ಮುಖಂಡರಾಗಿದ್ದ ಹೆಚ್.ಡಿ. ದೇವೇಗೌಡ ವಿರುದ್ಧ ಕಾಂಗ್ರೆಸ್ ಪಕ್ಷದಲ್ಲಿ ಉತ್ತಮ ಅಭ್ಯರ್ಥಿ ಸಿಗುವುದು ದುರ್ಲಭವಾದಾಗ ಪಕ್ಷದ ವರಿಷ್ಠರ ಕಣ್ಣು ಡಿ.ಕೆ. ಶಿವಕುಮಾರ್ ಮೇಲೆ ಬಿತ್ತು. ಹೀಗಾಗಿ ರಾಜಕಾರಣದ ಪರಿಚಯವೇ ಇಲ್ಲದಿದ್ದ ಡಿ.ಕೆ. ಶಿವಕುಮಾರ್ ಅವರನ್ನು ಹೆಚ್.ಡಿ. ದೇವೇಗೌಡ ಅವರ ವಿರುದ್ದ ಸ್ಪರ್ಧಿಸಲು ಪಕ್ಷದ ಅಭ್ಯರ್ಥಿಯನ್ನಾಗಿ ಮೊದಲಭಾರಿಗೆ ಕಣಕ್ನಿಳಿಸಲಾಯಿತು. ಸಾಕಷ್ಟು ಪ್ರಬಲ ಪ್ರತಿರೋಧವನ್ನೇ ತೋರಿದ ಡಿ.ಕೆ.ಶಿ ಚುನಾವಣೆಯಲ್ಲಿ ಹೆಚ್.ಡಿ. ದೇವೇಗೌಡರು ಅವರು ಅತ್ಯಂತ ಪ್ರಯಾಸದ ಜಯ ಪಡೆಯುವಂತೆ ಮಾಡುವಲ್ಲಿ ಯಶಸ್ವಿಯಾದರು.

ವಿಧಾನಸಭಾಚುನಾವಣೆಯಾದ ಕೆಲವೇ ದಿನಗಳಲ್ಲಿ 1987ರಲ್ಲಿ ಅವರು ಸಾತನೂರು ಕ್ಷೇತ್ರದಿಂದ ಬೆಂಗಳೂರು ಗ್ರಾಮಾಂತರಜಿಲ್ಲಾ ಪಂಚಾಯಿತಿಗೆ ಸದಸ್ಯರಾಗಿಆಯ್ಕೆಗೊಂಡರು.
1989ರಲ್ಲಿ ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷದ ಮುಖೇನ ಸಾತನೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಯನ್ನಾಗಿ ನಿಲ್ಲಿಸಲಾಯಿತು. ಅಭೂತ ಪೂರ್ವ ರೀತಿ ಕ್ಷೇತ್ರದಲ್ಲಿ ಬೇರೂರಿದ ಜನತಾದಳದ ಪ್ರಾಬಲ್ಯವನ್ನು ಮೊಟಕುಗೊಳಿಸಿದ ಡಿ.ಕೆ. ಶಿವಕುಮಾರ್ ಅತ್ಯಧಿಕ ಮತಗಳಿಂದ ಜಯಗಳಿಸಿದರು.
1991ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್‍ ಅವರು ಅನಾರೋಗ್ಯದ ಕಾರಣ ಮುಖ್ಯಮಂತ್ರಿ ಪದವಿಯನ್ನು ತ್ಯಜಿಸಬೇಕಾಗಿ ಬಂದಾಗ ಅವರ ಉತ್ತರಾಧಿಕಾರಿಯನ್ನಾಗಿ ಸೋರೆಕೊಪ್ಪ ಬಂಗಾರಪ್ಪ ಅವರು ಸರ್ವಾನುಮತದಿಂದ ಆಯ್ಕೆಯಾಗುವಂತೆ ಮಾಡುವಲ್ಲಿ ಡಿ.ಕೆ. ಶಿವಕುಮಾರ್ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದರು. ಇದಕ್ಕೆ ಬಹುಮಾನದ್ಯೋತಕವಾಗಿ ಬಂಗಾರಪ್ಪನವರು ಈ ಯುವಕನನ್ನು ರಾಜ್ಯಮಟ್ಟದ ಸಚಿವರನ್ನಾಗಿ ಮಾಡಿ ಬಂಧಿಖಾನೆ ಖಾತೆ ನೀಡಿದರು.
ಆದರೂ ಕಾಂಗ್ರೆಸ್ ಪಕ್ಷದಲ್ಲಿದ್ದ ಹಲವು ವಿರೋಧಿಗಳ ರಾಜಕೀಯ ಪಿತೂರಿಯಿಂದಾಗಿ 1994ರಲ್ಲಿ ಪಕ್ಷದ ಟಿಕೆಟ್ ವಿರೋಧಿಸಲಾಯಿತು, ಧೃತಿಗೆಡದೆ ಡಿ.ಕೆ. ಶಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಜಯಗಳಿಸಿ ಜಯದ ಪರಂಪರೆ ಮುಂದುವರೆಸಿದರು.
2004ರಲ್ಲಿ ಸಾತನೂರು ವಿಧಾನಸಭಾಕ್ಷೇತ್ರದಿಂದ 4ನೇ ಭಾರಿ ಆರಿಸಿ ಬಂದರೂ ಕೂಡ ಕಾಂಗ್ರೆಸ್ ಪಕ್ಷ ಬಹುಮತಗಳಿಸುವಲ್ಲಿ ವಿಫಲವಾಯಿತು. ಸ್ವಂತ ಶಕ್ತಿಯ ಮೇಲೆ ಸರ್ಕಾರ ರಚಿಸಲು ಅಗತ್ಯವಾದ ಬಹುಮತವಿಲ್ಲದ ಕಾರಣ ಕೋಮವಾದಿ ಬಿ.ಜೆ.ಪಿ. ಪಕ್ಷ ಅಧಿಕಾರಕ್ಕೇರದಂತೆ ತಡೆಯಲು ದೇವೇಗೌಡ ನೇತೃತ್ವದ ಜೆ.ಡಿ.ಎಸ್.(ಜಾತ್ಯಾತೀತ) ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಯಿತು. ಹೀಗೆ ರಾಜ್ಯದಲ್ಲಿ ಪ್ರಥಮ ಬಾರಿಗೆ ಉದಯಿಸಿದ ಕಾಂಗ್ರೆಸ್-ಜೆ.ಡಿ.ಎಸ್.(ಜಾ), ಸಮ್ಮಿಶ್ರ ಸರ್ಕಾರದಲ್ಲಿ ಡಿ.ಕೆ. ಶಿಗೆ ಸ್ಥಾನವಿರಲಿಲ್ಲ, ಏಕೆಂದರೆ ಅವರು ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿಯಾಗಬಾರದೆಂಬುದು ಹೆಚ್.ಡಿ. ದೇವೇಗೌಡರು ಷರತ್ತು ವಿಧಿಸಿದ್ದರು.
ಆದರೂ ಒಟ್ಟಾರೆ ರಾಜ್ಯದ ಹಿತದೃಷ್ಟಿಯಿಂದ ಹಾಗೂ ಕಾಂಗ್ರೆಸ್ ಪಕ್ಷದ ಹಿತದೃಷ್ಟಿಯಿಂದ ಡಿ.ಕೆ. ಶಿವಕುಮಾರ್ ತಮಗೆ ಮಾಡಲಾದ ಅಪಮಾನವನ್ನು ಸಹಿಸಿಕೊಂಡರು ಹಾಗೂ ಕಾಂಗ್ರೆಸ್ ಪಕ್ಷವನ್ನು ಪುನರ್ ಸಂಘಟಿಸುವಲ್ಲಿ ತಮ್ಮ ಸಮಯವನ್ನು ಮೀಸಲಿಟ್ಟರು.
ತಮ್ಮ ವಿರುದ್ಧ ದೇವೇಗೌಡರು ನಡೆಸಿದ ಸೇಡಿನ ರಾಜಕಾರಣಕ್ಕೆ ತಮ್ಮದೇ ರೀತಿಯಲ್ಲಿ ಪ್ರತ್ಯುತ್ತರ ನೀಡುವಲ್ಲಿ ಶೀಘ್ರದಲ್ಲಿಯೇ ಯಶಸ್ವಿಯಾದರು. 2006ರ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ವಿರುದ್ಧ ರಾಜಕೀಯವಾಗಿ, ಸಾರ್ವಜನಿಕವಾಗಿ ಅಷ್ಟೇನು ಪರಿಚಿತರಲ್ಲದ ಅಜ್ಞಾತ ಹೆಣ್ಣು ತೇಜಸ್ವಿನಿಗೌಡ ಅವರನ್ನು ನಿಲ್ಲಿಸಿ ಗೆಲ್ಲಿಸುವ ಮೂಲಕ ಸೇಡು ತೀರಿಸಿಕೊಂಡರು.
ಪಕ್ಕದ ರಾಜ್ಯವಾದ ಮಹಾರಾಷ್ಟ್ರದಲ್ಲಿ ವಿಲಾಸ್‍ ರಾವ್‍ ದೇಶ್‍ ಮುಖ್ ಸಮ್ಮಿಶ್ರ ಸರ್ಕಾರ ಓಅP ಪಕ್ಷದೊಂದಿಗೆ ಸೆಣಸಾಟಕ್ಕಿಳಿದಾಗ ಸರ್ಕಾರ ಅಲ್ಪಮತದ ಅಪಾಯಕ್ಕೆ ಸಿಕ್ಕಿಕೊಂಡಿತ್ತು. ಆಗ ಓಅP ಮತ್ತು ವಿರೋಧ ಪಕ್ಷಗಳು ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಕುದುರೆ ವ್ಯಾಪಾರಕ್ಕೆ ಇಳಿದಿದ್ದವು. ತಕ್ಷಣ ಕಾಂಗ್ರೆಸ್ ಹೈಕಮಾಂಡಿನ ಆದೇಶದಂತೆ ಕಾರ್ಯಪ್ರವೃತ್ತರಾದ ಡಿ.ಕೆ. ಶಿವಕುಮಾರ್ ರವರು ಮಹಾರಾಷ್ಟ್ರ ಕಾಂಗ್ರೆಸ್ ಶಾಸಕರನ್ನು ಮುಂಬೈಯಿಂದ ಬೆಂಗಳೂರಿಗೆ ಕರೆದುಕೊಂಡು ಬಂದು ಸುಮಾರು 10-12 ದಿನಗಳ ಕಾಲ ಬೆಂಗಳೂರಿನ ವೈಭವಪೇತರೆ ಸಾರ್ಟ್‍ ಹೊಟೆಲ್ಒಂದರಲ್ಲಿ ಇರಿಸಿಕೊಂಡು ರಕ್ಷಣೆ ನೀಡಿದರು. ಮುಂಬೈಯಲ್ಲಿ ಪರಿಸ್ಥಿತಿ ತಿಳಿಯಾಗಿ ಸರ್ಕಾರಕ್ಕೆ ಅಪಾಯವಿಲ್ಲವೆಂಬ ಸಂಗತಿ ಮನವರಿಕೆಯಾದ ನಂತರವಷ್ಟೇ ಮಹಾರಾಷ್ಟ್ರ ಶಾಸಕರನ್ನು ಕ್ಷೇಮವಾಗಿ ಕಳುಹಿಸಲಾಯಿತು.
ಹೀಗೆ ಡಿ.ಕೆ. ಶಿವಕುಮಾರ್ ಅವರ ಸಕಾಲಿಕ ರಾಜಕೀಯ ತಂತ್ರಗಾರಿಕೆ ಫಲಕೊಟ್ಟು ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ವಿಲಾಸ್‍ ರಾವ್‍ದೇಶ ಮುಖ್‍ ರವರ ಸರ್ಕಾರ ಯಾವುದೇ ಅಪಾಯ ಎದುರಿಸದೆ ಪಾರಾಗಿ ಮುಂದುವರೆಯುವಂತಾಯಿತು. ಇದರ ಎಲ್ಲಾ ಶ್ರೇಯಸ್ಸು ಡಿ.ಕೆ. ಶಿವಕುಮಾರ್ ರವರಿಗೆ ಸಲ್ಲಬೇಕು.

2004ರಲ್ಲಿ ಪ್ರಥಮ ಬಾರಿಗೆ ಜೆ.ಡಿ.ಎಸ್.-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರೂಪುಗೊಂಡಾಗ ಎಸ್.ಎಂ. ಕೃಷ್ಣ ಅವರನ್ನು ಕಡೆಗಣಿಸಿ ಹೆಚ್.ಡಿ. ದೇವಗೌಡರ ಒಪ್ಪಿಗೆಯಂತೆ ಧರ್ಮಸಿಂಗ್ ಅವರನ್ನು ಮುಖ್ಯಮಂತ್ರಿ ಮಾಡಬೇಕಾಗಿ ಬಂದಾಗ ಎಸ್.ಎಂ. ಕೃಷ್ಣ ಅವರಿಗೆ ಬದಲಿಯಾಗಿ ಯಾವುದಾದರೊಂದು ಸ್ಥಾನ ಕೊಡಲೇಬೇಕೆಂದು ಪಕ್ಷದ ವರಿಷ್ಠರ ಮನವೊಲಿಸಿ ಎಸ್.ಎಂ. ಕೃಷ್ಣ ಅವರು ಮಹಾರಾಷ್ಟ್ರದ ರಾಜ್ಯಪಾಲರಾಗುವಂತೆ ಮಾಡುವಲ್ಲಿ ಯಶಸ್ವಿಯಾದರು.

ಬಂಡಾಯ ಶಾಸಕರಾಗಿಯೂಕಾಂಗ್ರೆಸ್ ಪಕ್ಷದ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸುತ್ತಿದ್ದ ಅವರು ಆಗಲೇ ರಾಜಕೀಯವಾಗಿ ಮೂಲೆಗುಂಪಾಗಿದ್ದ ಎಸ್.ಎಂ. ಕೃಷ್ಣ ಅವರನ್ನು ಓಲೈಸಿ ಮರಳಿ ರಾಜಕೀಯ ರಂಗಕ್ಕೆ ಕರೆತಂದರು ಹಾಗೂ ಜನತಾದಳ ಅಧಿಕಾರದಲ್ಲಿದ್ದರೂ ಅಲ್ಪಮತದ ಬೆಂಬಲದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಎಸ್.ಎಂ. ಕೃಷ್ಣ ಅವರು ರಾಜ್ಯಸಭೆಗೆ ಸ್ಪರ್ಧಿಸುವಂತೆ ಮಾಡಿದರು. ಜನತಾದಳದಿಂದಲೇ ಅಗತ್ಯವಾದ ಸದಸ್ಯರ ಬೆಂಬಲ ಸಿಗುವಂತೆ ವ್ಯೂಹರಚನೆ ಮಾಡಿ ಎಸ್.ಎಂ. ಕೃಷ್ಣ ರಾಜ್ಯಸಭೆಗೆ ಆಯ್ಕೆಯಾಗುವಂತೆ ಮಾಡಿದರು.
ಎಸ್.ಎಂ. ಕೃಷ್ಣ ಅವರು ಪ್ರತಿಕೂಲ ಪರಿಸ್ಥಿತಿಯಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಪ್ರಸಂಗದ ಸಂಪೂರ್ಣಕೀರ್ತಿ, ಗೌರವ, ಡಿ.ಕೆ. ಶಿವಕುಮಾರ್ ಅವರ ವ್ಯೂಹರಚನೆಗೆ ಸಂದ ವಿಜಯ ಎಂದೇ ಭಾವಿಸಲಾಗುತ್ತಿದೆ.

1999ರಲ್ಲಿ ಎಸ್.ಎಂ. ಕೃಷ್ಣ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಗೊಂಡಾಗ ಡಿ.ಕೆ. ಶಿವಕುಮಾರ್ ಅವರ ಹಿಂದೆ ಬೆನ್ನೆಲುಬಾಗಿ ನಿಂತು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವರೀತಿಯಲ್ಲಿ ಜಯಗಳಿಸಿ ಸರ್ಕಾರರಚಿಸುವಲ್ಲಿ ಕಾರಣೀಭೂತರಾದರು.
ಎಸ್.ಎಂ. ಕೃಷ್ಣ ಚುನಾವಣಾ ಪೂರ್ವದಲ್ಲಿ ಪಾಂಚಜನ್ಯ ಮೊಳಗಿಸುವ ಮೂಲಕ ಚುನಾವಣಾ ಸಮರ ಆರಂಭಿಸಿದಾಗ, ಈ ಐತಿಹಾಸಿಕ ಯಾತ್ರೆಯನ್ನು ಆಯೋಜಿಸಿದವರು ಡಿ.ಕೆ. ಶಿ. ಇದರಿಂದಲೇ ಕಾಂಗ್ರೆಸ್ ಪಕ್ಷ 139 ಸ್ಥಾನಗಳನ್ನು ಗಳಿಸಿ ಸ್ವಂತ ಬಲದ ಮೇಲೆ ಸರ್ಕಾರವನ್ನು ರಚಿಸುವಂತಾಯಿತು.

1999ರಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಸಾತನೂರು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ಅನುಮತಿ ನೀಡಿತ್ತು. ಆಗ ಅವರ ಎದುರಾಳಿ ಹೆಚ್.ಡಿ. ದೇವೇಗೌಡ ಅವರ ಪುತ್ರ ಹೆಚ್.ಡಿ. ಕುಮಾರಸ್ವಾಮಿ ಸ್ಪರ್ಧೆಗಿಳಿದಿದ್ದರು. ದೇವೇಗೌಡರು ರಾಜಕೀಯ ಸ್ಥಿತ್ಯಂತರದಿಂದ ಅಂದಿನ ಪ್ರಧಾನ ಮಂತ್ರಿಯಾಗಿದ್ದರು. ತಂದೆಯನ್ನೇ ರಾಜಕೀಯ ವ್ಯೂಹದಲ್ಲಿ ಮಣಿಸಿದ ಡಿ.ಕೆ. ಶಿವಕುಮಾರ್ ಗೆ ಮಗ ಯಾವ ಲೆಕ್ಕ? ನಿರೀಕ್ಷಿಸಿದಂತೆ ಹೆಚ್.ಡಿ. ಕುಮಾರಸ್ವಾಮಿ ಚುನಾವಣೆಯಲ್ಲಿ ಸೋತರು. ಡಿ.ಕೆ. ಶಿವಕುಮಾರ್ ಸತತ 3ನೇ ಬಾರಿಗೆ ಮರಳಿ ಗೆಲುವು ಸಾಧಿಸಲು ಸಾಧ್ಯವಾಯಿತು. ಎಸ್.ಎಂ. ಕೃಷ್ಣ ಅವರು ಕ್ಯಾಬಿನೆಟ್‍ ದರ್ಜೆ ಸಚಿವರನ್ನಾಗಿ ನೇಮಿಸಿ ಮಹತ್ವದ ಸಹಕಾರ ಖಾತೆ ನೀಡುವ ಮೂಲಕ ಡಿ.ಕೆ. ಶಿವಕುಮಾರ್ ಅವರ ಶ್ರಮಕ್ಕೆ ತಕ್ಕ ಮನ್ನಣೆ ನೀಡಿದರು.(1999-2002).

2002ರಲ್ಲಿ ನಗರಾಭಿವೃದ್ಧಿ ಖಾತೆ ಸಚಿವರಾಗಿ ರಾಜ್ಯ ನಗರಯೋಜನಾ ಮಂಡಳಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು. ಸಚಿವ ಸಂಪುಟದ ಉಪ ಸಮಿತಿಯ ಅಧ್ಯಕ್ಷರಾಗಿ ಯುವಕರನ್ನು ಸಂಘಟಿಸಿ ಜೀವನದಲ್ಲಿ ನೆಲೆಗೊಳಿಸುವ “ರಾಜೀವ್‍ಯುವ ಶಕ್ತಿ” ಸಂಘಟನೆಗಳು ರಾಜ್ಯದಲ್ಲಿ ತಲೆಎತ್ತಲು ಕಾರಣೀಭೂತರಾದರು.

ವಿಶ್ವದಲ್ಲಿಯೇ ಮೊದಲನೆಯದು ಎನ್ನಿಸಿದ ಸ್ತ್ರೀಶಕ್ತಿ ಸಂಘಟನೆಗಳನ್ನು ಆರಂಭಿಸುವಲ್ಲಿ ಡಿ.ಕೆ. ಶಿವಕುಮಾರ್ ಅವರ ಪಾಲು ಮಹತ್ವದ್ದು.

2008ರಲ್ಲಿ ಎಸ್.ಎಂ. ಕೃಷ್ಣ ರಾಜ್ಯಪಾಲ ಪದವಿ ತ್ಯಜಿಸಿ ಪುನಃ ರಾಜಕಾರಣಕ್ಕೆ ಬರಬೇಕು ಎಂದು ಬಯಸಿದಾಗ ಅವರನ್ನು ಕರೆತಂದು ಮತ್ತೊಮ್ಮೆ ಕರ್ನಾಟಕದಿಂದ ರಾಜ್ಯಸಭೆಗೆ ಅವರನ್ನು ಆಯ್ಕೆ ಮಾಡುವಲ್ಲಿ ಡಿ.ಕೆ. ಶಿವಕುಮಾರ್ ಮಹತ್ವದ ಪಾತ್ರ ವಹಿಸಿದರು. ಆನಂತರ ಎಸ್.ಎಂ. ಕೃಷ್ಣ ಕೇಂದ್ರ ಸಚಿವ ಸಂಪುಟಕ್ಕೆ ಸೇರಿ ವಿದೇಶಾಂಗ ವ್ಯವಹಾರಗಳ ಮಹತ್ವದ ಖಾತೆಯನ್ನು ನಿಭಾಯಿಸಿದರು.

ಕನಕಪುರ ಕ್ಷೇತ್ರದಲ್ಲಿ ವಿಡಿಯೋಕಾನ್ಫರೆನ್ಸ್ ಸೌಲಭ್ಯವನ್ನು ಸ್ಥಾಪಿಸಿ ಆ ಮೂಲಕ ಕ್ಷೇತ್ರದ ಮತದಾರರೊಂದಿಗೆ ನೇರಾ-ನೇರಾ ಸಂಪರ್ಕ ಸಾಧಿಸಿದ ದೇಶದ ಪ್ರಥಮ ಶಾಸಕರೆಂಬ ಕೀರ್ತಿಗೆ ಭಾಜನರಾದವರು. ಸಾತನೂರು ಹಾಗೂ ಕನಕಪುರ ಕಛೇರಿಗಳಲ್ಲಿ ಸ್ಥಾಪಿಸಿದ ವಿಡಿಯೋ ಸಂಪರ್ಕ ಸೌಲಭ್ಯದಿಂದಾಗಿ ಗ್ರಾಮೀಣ ಮತದಾರರು ತಮ್ಮ ಶಾಸಕರೊಂದಿಗೆ ನೇರಾ-ನೇರಾ ಮಾತುಕತೆ ನಡೆಸಿ ತಮ್ಮ ಕುಂದುಕೊರತೆಗಳನ್ನು ಹೇಳಿಕೊಂಡು ಅವುಗಳಿಂದ ಪರಿಹಾರ ಪಡೆದುಕೊಳ್ಳಲು ಸಾಧ್ಯವಾಯಿತು. ಇದರಿಂದ ಸಾರ್ವಜನಿಕರ ಅಪಾರ ಹಣ ಹಾಗೂ ವೇಳೆಯು ಅಪವ್ಯಯವಾಗುವುದು ತಪ್ಪಿತು.
ಈ ಬಗ್ಗೆ ರಾಷ್ಟ್ರಮಟ್ಟದ ಇಂಡಿಯಾಟುಡೆಯಂತಹ ದಿನಪತ್ರಿಕೆಯು ಅವರ ಸಾಧನೆಯ ಬಗ್ಗೆ ತನ್ನ 2006 ಏಪ್ರಿಲ್ 17ನೇ ದಿನದ ಸಂಚಿಕೆಯಲ್ಲಿ ಭಾರತೀಯ ಶಾಸಕನೊಬ್ಬ ಕೈಗೊಂಡ ಈ ಮಹತ್ವದ ಸಾಧನೆಯನ್ನು ಗುರುತಿಸಿ ಶ್ಲಾಘಿಸಿತು.
ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆಯಾಗಿ ರಾಜಕೀಯಕ್ಕೆ ಕುಮಾರಿ ರಮ್ಯಾ ಕಾಲೂರಿದ್ದು ಡಿ.ಕೆ. ಶಿವಕುಮಾರ್ ಅವರ ಸತತ ಒತ್ತಾಸೆ ಹಾಗೂ ಪ್ರೇರಣೆಯಿಂದ.

ಬೆಂಗಳೂರು ಅರಮನೆ ಆವರಣದಲ್ಲಿ ಬೃಹತ್‍ ಯುವಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್‍ ಉಪಾಧ್ಯಕ್ಷ ರಾಹುಲ್‍ಗಾಂಧಿ ಸಮ್ಮುಖದಲ್ಲಿ ಕುಮಾರಿ ರಮ್ಯಾ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಕೇವಲ ಕೆಲವೇ ದಿನಗಳ ಅಂತರದಲ್ಲಿ ರಮ್ಯಾ ಮತದಾರರ ಮೇಲೆ ವಿಶ್ವಾಸ, ಪ್ರಭಾವ ಭೀರಿದರಿಂದಾಗಿ ಅವರು ಉಪ ಚುನಾವಣೆಯಲ್ಲಿ ಎದುರಾಳಿಯ ಮಣ್ಣುಮುಕ್ಕಿಸಿ ಸಂಸದೆಯಾಗಿ ಸುಲಭ ಜಯಗಳಿಸಿದರು.

2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಪೀಠಕ್ಕೆ ಮರಳಿ ಬಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ ಆಯ್ಕೆಗೊಂಡಾಗ ಪಕ್ಷದಲ್ಲಿನ ವಿರೋಧಿಗಳು ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಕಪೋಲಕಲ್ಪಿತ ದಾಖಲೆಗಳನ್ನು ಪಕ್ಷದ ವರಿಷ್ಠರಿಗೆ ಕಳುಹಿಸಿ, ಡಿ.ಕೆ.ಶಿ ಅವರಿಗೆ ಸಚಿವ ಸ್ಥಾನ ತಪ್ಪುವಂತೆ ಮಾಡಿದರು. ಇದರಿಂದ ದೃತಿಗೆಡದ ಅವರು, ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿ ಯಾವುದೇ ಪ್ರತಿಭಟನೆ ತೋರದೆ, ತಮ್ಮ ವಿರುದ್ಧ ಆಪಾದನೆಗಳ ಬಗ್ಗೆ ನ್ಯಾಯಾಂಗ ತಜ್ಞರಿಂದ ವಿಮರ್ಶೆ ಮಾಡಿಸುವಂತೆ ವರಿಷ್ಠರನ್ನು ಕೋರಿಕೊಂಡರು.

ಪಕ್ಷದಿಂದ ನೇಮಿತರಾದ ಇಬ್ಬರು ನ್ಯಾಯಾಂಗ ತಜ್ಞರು ಯಾವುದೇ ರೀತಿಯ ಅಕ್ರಮ ಎಸಗಿಲ್ಲ ಎಂಬ ಅಭಿಪ್ರಾಯಕ್ಕೆ ಬಂದು ಡಿ.ಕೆ. ಶಿವಕುಮಾರ್ ಅವರನ್ನು ಆರೋಪ ಮುಕ್ತರನ್ನಾಗಿಸಿದರು. ಇದರಿಂದ ಏಳು ತಿಂಗಳ ಅಲ್ಪಅವಧಿಯ ನಂತರ ಡಿ.ಕೆ. ಶಿವಕುಮಾರ್, ಸಿದ್ಧರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಪಡೆದುಕೊಂಡರು. ಇಂಧನ ಖಾತೆಯಂತಹ ಪ್ರಮುಖ ಖಾತೆಯನ್ನು ನಿಭಾಯಿಸಿದರು. .

ಈ ವೇಳೆಯಲ್ಲಿ ಮಂತ್ರಿ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಉಪಚುನಾವಣೆಗಳು ಎದುರಾದವು. ತಮ್ಮ ಸಂಘಟನಾ ಶಕ್ತಿ, ರಾಜಕೀಯತಂತ್ರ ಹಾಗೂ ಚಾಣಾಕ್ಯ ನೀತಿ ಇವುಗಳನ್ನು ಧಾರಾಳವಾಗಿ ಬಳಸಿಕೊಂಡು ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅಭೂತ ಪೂರ್ವರೀತಿಯಲ್ಲಿ ವಿಜಯ ಸಾಧಿಸಲು ಕಾರಣೀಭೂತರಾದರಲ್ಲದೆ ಜನತಾದಳದಿಂದ ಎರಡು ಕ್ಷೇತ್ರಗಳನ್ನು ಕಸಿದುಕೊಂಡು ಕಾಂಗ್ರೆಸ್ಸಿಗೆ ಪ್ರತಿಷ್ಟೆಯನ್ನುತಂದುಕೊಟ್ಟರು.

ಇಂಧನ ಸಚಿವರಾಗಿ ಜಡ್ಡುಗಟ್ಟಿದ್ದ ಇಂಧನ ಇಲಾಖೆಯನ್ನು ಅಮೂಲಾಗ್ರ ಸುಧಾರಣೆ ಮಾಡಲಾರಂಭಿಸಿದರು. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಸಹಿ ಮಾಡಲಾಗಿದ್ದ ಹಲವಾರು ವಿದ್ಯುತ್‍ ಖರೀದಿ ಒಪ್ಪಂದಗಳನ್ನು ರದ್ದುಗೊಳಿಸಿದರು.
ಅಷ್ಟೇ ಅಲ್ಲ ಹಿಂದಿನ ಸರ್ಕಾರದ ಕಾಲಾವಧಿಯಲ್ಲಿ ಮಾಡಲಾದ ವಿದ್ಯುತ್ ಖರೀದಿಯಲ್ಲಿ ಅಕ್ರಮ ಕುರಿತ ಸದನ ಸಮಿತಿ ರಚನೆಗೆ ಕಾರಣರಾದರು. ರೈತ ಸೂರ್ಯ ಯೋಜನೆಯನ್ನು ರೂಪಿಸಿ ಭೂ ಮಾಲೀಕರಾದ ರೈತರು ಸ್ವಯಂ 1 ರಿಂದ 3 ಮೆ.ವ್ಯಾ. ಸೌರವಿದ್ಯುತ್ ಉತ್ಪಾದನೆ ಮಾಡುವಂತೆ ಅವಕಾಶ ಕಲ್ಪಿಸಿದರು. ರಾಜ್ಯ ಸರ್ಕಾರದ ಈ ಯೋಜನೆಯನ್ನು ಕೇಂದ್ರ ಸರ್ಕಾರ ಮುಕ್ತ ಕಂಠದಿಂದ ಪ್ರಶಂಸಿದಲ್ಲದೇ ಉಳಿದ ರಾಜ್ಯಗಳೂ ಕರ್ನಾಟಕದ ಮಾದರಿ ಅನುಸರಿಸುವಂತೆ ಮಾನ್ಯ ಕೇಂದ್ರ ಇಂಧನ ಸಚಿವರೇ ಕರೆ ನೀಡುವಂತೆ ಮಾಡಿದರು.
2018ರಲ್ಲಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮೊದಲಿಗೆ ಜಲಸಂಪನ್ಮೂಲ ನಂತರ ಹೆಚ್ಚುವರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಖಾತೆಯನ್ನು ಪಡೆದು ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದರು. ಮಹದಾಯಿ ಸಮಸ್ಯೆ ಪರಿಹಾರ, ಎತ್ತಿನಹೊಳೆ, ಮೇಕೆದಾಟು ಯೋಜನೆಗಳ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಿದ ಅವರು ರಾಜ್ಯದಲ್ಲಿ ಅತೀ ಹೆಚ್ಚು ಪ್ರಮಾಣದ ಚೆಕ್ ಡ್ಯಾಮ್‍ಗಳ ನಿರ್ಮಾಣಕ್ಕೆ ಪ್ರೋತ್ಸಾಹ ಧನ ನೀಡಿಕೆ ಮೂಲಕ ಉತ್ತೇಜಿಸಿದರು.
ಕೆ.ಆರ್.ಎಸ್‍ನ ಬೃಂದಾವನ ಉದ್ಯಾನವನವನ್ನು ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಿದರಲ್ಲದೇ ಬೃಹತ್ ಕಾವೇರಿ ಪ್ರತಿಮೆ ನಿರ್ಮಾಣಕ್ಕೂ ನಿರ್ಧರಿಸಿದ್ದರು.
ಮೈತ್ರಿ ಸರ್ಕಾರದ ಉಳಿವಿಗೆ ಟೊಂಕ ಕಟ್ಟಿ ನಿಂತು ಪಕ್ಷದ ನಾಯಕತ್ವ ತಮಗೆ ಜವಬ್ದಾರಿ ವಹಿಸಿದ ಅನೇಕ ಉಪಚುನಾವಣೆಗಳಲ್ಲಿ ಪಕ್ಷ ಗೆಲುವಂತೆ ನೋಡಿಕೊಂಡಿರು. ಬಳ್ಳಾರಿ ಲೋಕಸಭೆ ಕ್ಷೇತ್ರ ಕುಂದಗೋಳ ವಿಧಾನಸಭಾ ಕ್ಷೇತ್ರದ ಗೆಲುವಿನಲ್ಲಿ ಡಿ.ಕೆ. ಶಿ ಕೊಡುಗೆ ಗಮನಾರ್ಹ.
3.5 ದಶಕಕ್ಕೂ ಹೆಚ್ಚು ಕಾಲ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಸೇನಾನಿಯಾಗಿ ಕಾರ್ಯ ನಿರ್ವಹಿಸಿರುವ ಅವರು ಯಾವುದೇ ಸಂದರ್ಭದಲ್ಲೂ ಯಾವುದೇ ಆಮಿಷಗಳಿಗೂ ಬಲಿಯಾಗದೇ ಪಕ್ಷ ನಿಷ್ಠೆಯನ್ನು ಬದಲಿಸಲಿಲ್ಲ.
ಕಾಂಗ್ರೆಸ್ ಕಟ್ಟಾಳು ಆಗಿರುವ ಡಿ.ಕೆ.ಶಿ 2017ರಲ್ಲಿ ಹೈಕಮಾಂಡ್ ವಹಿಸಿದ ಜವಬ್ದಾರಿಯ ಮೇರೆಗೆ ಗುಜರಾತ್ ಕಾಂಗ್ರೆಸ್ ಶಾಸಕರನ್ನು ರಕ್ಷಿಸಿಟ್ಟುಕೊಂಡ ಅವರು ಅದಕ್ಕಾಗಿ ಭಾರಿ ಬೆಲೆಯನ್ನೇ ತೆರಬೇಕಾಯಿತಾದರೂ ವಿಚಲಿತರಾಗಲಿಲ್ಲ. ಐಟಿ, ಇಡಿ ಮತ್ತಿತರ ತನಿಖಾ ಸಂಸ್ಥೆಗಳು, ಅವರು ಮತ್ತು ಅವರ ಪರಿವಾರದ ಮೇಲೆ ದಾಳಿ ನಡೆಸಿದಲ್ಲದೇ ಡಿ.ಕೆ.ಶಿವಕುಮಾರ್ ಅವರನ್ನು ಜೈಲಿಗೂ ಅಟ್ಟಿದರು. ಈ ಸಂದರ್ಭದಲ್ಲಿ ಸ್ವತಃ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂದಿ ಅವರು ಜೈಲಿಗೆ ಭೇಟಿ ಕೊಟ್ಟು ಡಿ.ಕೆ.ಶಿವಕುಮಾರ್ ಅವರಿಗೆ ಧೈರ್ಯ ತುಂಬಿದ್ದು ಅವರ ಪಕ್ಷ ನಿಷ್ಠೆಗೆ ಸಿಕ್ಕ ಗೌರವಕ್ಕೆ ಸಾಕ್ಷಿ.
ಡಿ.ಕೆ.ಶಿ ಜೈಲಿನಲ್ಲಿದ್ದಾಗ ಲಕ್ಷಾಂತರ ಜನ ಬೀದಿಗಿಳಿದು ಮಾಡಿದ ಹೋರಾಟ ಹಾಗೂ ಅವರು ಜೈಲಿನಿಂದ ಬಂದ ಬಳಿಕ ಡಿ.ಕೆ.ಶಿವಕುಮಾರ್ ಗೆ ಸಿಕ್ಕ ಸ್ವಾಗತ ಅವರ ನಿಷ್ಠಾವಂತ ನಾಯಕತ್ವಕ್ಕೆ ಸಾಕ್ಷಿಯಾಗಿದೆ.
ವೈಯಕ್ತಿಕ ಜೀವನದಲ್ಲಿ ಪ್ರಗತಿಪರ ರೈತರಾಗಿ, ವಸತಿ ಯೋಜನೆಗಳ ನಿರ್ಮಾತೃ ಆಗಿರುವ ಡಿ.ಕೆ. ಶಿವಕುಮಾರ್, ನ್ಯಾಷನಲ್‌ ಎಜುಕೇಷನ್ ಫೌಂಡೇಷನ್‍ನ ಸ್ಥಾಪಕ ಅಧ್ಯಕ್ಷರಾಗಿ ಇಂಜಿನಿಯರಿಂಗ್, ನರ್ಸಿಂಗ್ ಹಾಗೂ ಮ್ಯಾನೇಜ್‍ಮೆಂಟ್ ವಿದ್ಯಾಸಂಸ್ಥೆಗಳನ್ನು ಯಶಸ್ವಿಯಾಗಿ ನಡೆಸುತ್ತಿದ್ದಾರೆ. ಅಲ್ಲದೆ ವಿಶ್ವಮಟ್ಟದ ಎರಡು ಪ್ರಾಥಮಿಕ ಶಾಲೆಗಳನ್ನು ನಡೆಸುತ್ತಿದ್ದಾರೆ.
ಡಿ.ಕೆ. ಶಿವಕುಮಾರ್ ನೇತೃತ್ವದ ಡಿ.ಕೆ.ಎಸ್. ಚಾರಿಟೇಬಲ್ ಟ್ರಸ್ಟ್ ಕ್ಷೇತ್ರದ ಹಲವಾರು ಸಮಸ್ಯಾತ್ಮಕ ಗ್ರಾಮಗಳಲ್ಲಿ ಶುದ್ಧಕುಡಿಯುವ ನೀರು ತಯಾರಿಕಾ ಘಟಕಗಳನ್ನು ಸ್ಥಾಪಿಸಿ ಕೇವಲ 10 ಪೈಸೆಗೆ ಒಂದು ಲೀಟರ್ ಪರಿಶುದ್ಧ ಕುಡಿಯುವ ನೀರು ಸಿಗುವಂತೆ ಮಾಡಿದೆ.
100ಕ್ಕೂ ಹೆಚ್ಚು ಗ್ರಾಮಗಳಲ್ಲಿ ಈಗಾಗಲೇ ಸ್ಥಾಪಿಸಲಾಗಿರುವ ಈ ಸ್ಥಾವರಗಳ ಮೂಲಕ ಪರಿಶುದ್ಧ ಕುಡಿಯುವ ನೀರು ದೊರಕಿಸಿಕೊಡುವ ಮೂಲಕ ಅಶುದ್ದ ನೀರಿನ ಬಳಕೆಯಿಂದ ಜನರಿಗಾಗುತ್ತಿದ್ದ ರೋಗರುಜಿನಗಳನ್ನು ನಿವಾರಿಸುವಲ್ಲಿ ಡಿ.ಕೆ.ಎಸ್. ಚಾರಿಟೇಬಲ್ ಟ್ರಸ್ಟ್ ಯಶಸ್ವಿಯಾಗಿದೆ.
ಈ ಯೋಜನೆಯನ್ನುಕಾಲಾನುಕ್ರಮದಲ್ಲಿ ಸಹೋದರ ಡಿ.ಕೆ.ಸುರೇಶ್ ಪ್ರತಿನಿಧಿಸುತ್ತಿರುವ ಇಡೀ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ವಿಸ್ತರಿಸುವ ಕಾರ್ಯಕ್ರಮವನ್ನು ಡಿ.ಕೆ.ಎಸ್.ಚಾರಿಟೇಬಲ್ ಟ್ರಸ್ಟ್ ಹಾಕಿಕೊಂಡಿದೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?