Thursday, March 28, 2024
Google search engine
Homeತುಮಕೂರ್ ಲೈವ್ತುಮಕೂರಿನಲ್ಲಿ 40 ಸಾವಿರ ಜನರಿಗೆ ಕ್ಷಯ

ತುಮಕೂರಿನಲ್ಲಿ 40 ಸಾವಿರ ಜನರಿಗೆ ಕ್ಷಯ

ತುಮಕೂರು;ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರವು ನವೆಂಬರ್ 25ರಿಂದ ಡಿಸೆಂಬರ್ 10ರವರೆಗೆ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಕಾರ್ಯಕ್ರಮ ಹಮ್ಮಿಕೊಂಡಿದೆ.

ಈ ಅಂದೋಲನದಲ್ಲಿ ಜಿಲ್ಲೆಯಲ್ಲಿ ಸುಮಾರು 395170 ಜನರನ್ನು ಕ್ಷಯರೋಗಕ್ಕೆ ತುತ್ತಾಗಿರುವುದಾಗಿ ಅಂದಾಜಿಸಿ, ಸದರಿ ಜನಸಂಖ್ಯೆಯಲ್ಲಿ ಸುಮಾರು 84538 ಮನೆಗಳಿಗೆ ಭೇಟಿ ನೀಡುವ ಉದ್ದೇಶವಿದೆ.

ಆಂದೋಲನದಲ್ಲಿ ಭಾಗವಹಿಸುವ ಪ್ರತಿ ತಂಡವು ಕ್ಷಯರೋಗ ಲಕ್ಷಣಗಳಾದ ರಾತ್ರಿ ವೇಳೆ ಜ್ವರ ಬರುವುದು, ತೂಕ ಕಡಿಮೆಯಾಗುವುದು, ಹಸಿರವಾಗದಿರುವುದು, ರಾತ್ರಿವೇಳೆ ಬೆವರುವುದು ಇದರ ಬಗ್ಗೆ ಅರಿವು ಮೂಡಿಸುವುದಾಗಿದೆ. ಕ್ಷಯರೋಗದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಯ ಕಫ ಸಂಗ್ರಹಣೆ ಮಾಡಿಸಿ ಅಂದೇ ಕಫ ಪರೀಕ್ಷೆ ಮಾಡಿಸುವುದು, ಕಫದಲ್ಲಿ ಕ್ರಿಮಿಗಳು ಪತ್ತೆಯಾದಲ್ಲಿ ಅಂದೇ ಚಿಕಿತ್ಸೆ ಪ್ರಾರಂಭಿಸಲಾಗುವುದು ಆಂದೋಲನದ ಮುಖ್ಯ ಉದ್ದೇಶವಾಗಿದೆ.

ಕ್ಷಯರೋಗಕ್ಕೆ ಸಂಬಂಧಿಸಿದಂತೆ ಯಾವುದೇ ಗೊಂದಲಗಳಿದ್ದಲ್ಲಿ ಉಚಿತ ಸಹಾಯವಾಣಿ ಸಂಖ್ಯೆ 104ಕ್ಕೆ ಕರೆಮಾಡಿ ಮಾಹಿತಿ ಪಡೆಯಬಹುದಾಗಿದೆ.

ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಿ.ಆರ್. ಚಂದ್ರಿಕಾ, ಮತ್ತು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಜಿ.ಕೆ ಸನತ್‍ಕುಮಾರ್, ಡಾ. ತ್ರಿವೇಣಿ, ಹಿರಿಯ ಪ್ರಯೋಗಾಲಯ ತಂತ್ರಜ್ಞರಾದ ಡಿ. ವಿಷ್ಣು, ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಸಿದ್ದಲಿಂಗಪ್ಪ, ಜಿಲ್ಲಾ ಟಿಬಿ ಮತ್ತು ಹೆಚ್‍ಐವಿ ಮೇಲ್ವಿಚಾರಕ ಕೃಷ್ಣಕುಮರ್, ಜಿಲ್ಲಾ ಪಿಪಿಎಂ ಸಂಯೋಜಕ ಆರ್. ಕಿಶೋರ್‍ಕುಮಾರ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?