Friday, March 29, 2024
Google search engine
Homeತುಮಕೂರು ಲೈವ್ತುಮಕೂರು ನ್ಯಾಯಾಲಯಕ್ಕೆ ಗದ್ದರ್ ಹಾಜರು

ತುಮಕೂರು ನ್ಯಾಯಾಲಯಕ್ಕೆ ಗದ್ದರ್ ಹಾಜರು

ತುಮಕೂರು: ಪಾವಗಡದ ವೆಂಕಟಮ್ಮನಹಳ್ಳಿಯಲ್ಲಿ ನಡೆದಿದ್ದ ನಕ್ಸಲ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಾಂತಿಕಾರಿ ಕವಿ, ಪ್ರಕರಣದಲ್ಲಿ ಆರೋಪಿಯಾಗಿರುವ ಗದ್ದರ್ ಸೋಮವಾರ ತುಮಕೂರು ನ್ಯಾಯಾಲಯಕ್ಕೆ ಹಾಜರಾದರು.

ಪ್ರಕರಣಲ್ಲಿ ಆರೋಪಿಗಳಾಗಿದ್ದ 19 ಮಂದಿಯನ್ನು ತುಮಕೂರು ಸೆಷನ್ಸ್ ನ್ಯಾಯಾಲಯ ಖುಲಾಸೆಗೊಳಿಸಿತ್ತು. ಆದರೆ ಪ್ರಕರಣದಲ್ಲಿ ಪಿತೂರಿದಾರರು ಎಂದು ಹೆಸರಿಸಿದ್ದ ಗದ್ದರ್,‌ವರವರ ರಾವ್ ಅವರು ತಲೆ ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.

ಹೈಕೋರ್ಟ್ ನಿರ್ದೇಶನದಂತೆ ಪ್ರಕರಣ ಮರು‌ವಿಚಾರಣೆ ಇವರಿಬ್ಬರ ಮೇಲೆ ನಡೆಯುತ್ತಿದೆ.‌ಈಚೆಗಷ್ಟೇ ಗದ್ದರ್ ಪಾವಗಡದ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ತುಮಕೂರು‌‌ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾದೀಶರ ಮುಂದೆ ಹಾಜರಾಗಿ ಜಾಮೀನು ಪಡೆದರು.

ಗದ್ದರನ್ನು ಅವರನ್ನು ನೋಡಲು ವಕೀಲರು, ಕಕ್ಷಿದಾರರು, ಮಾಧ್ಯಮದವರು ನ್ಯಾಯಾಲಯದ ಆವರಣದಲ್ಲಿ ಕಿಕ್ಕಿರಿದು ಸೇರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?