Thursday, April 25, 2024
Google search engine
Homeತುಮಕೂರು ಲೈವ್ತುರುವೇಕೆರೆ:  ಮತಗಟ್ಟೆಗೆ ತೆರಳಿದ ಸಿಬ್ಬಂದಿ

ತುರುವೇಕೆರೆ:  ಮತಗಟ್ಟೆಗೆ ತೆರಳಿದ ಸಿಬ್ಬಂದಿ

Publicstory. in


ತುರುವೇಕೆರೆ: ತಾಲ್ಲೂಕಿನ 2ನೇ ಹಂತದ ಸ್ಥಳೀಯ ಗ್ರಾಮ ಪಂಚಾಯಿತಿ ಚುನಾವಣೆಯು ಭಾನುವಾರ ನಡೆಯುವ ಹಿನ್ನೆಲೆಯಲ್ಲಿ ಚುನಾವಣೆಗೆ ನಿಯೋಜನೆಗೊಂಡಿದ್ದ ಸಿಬ್ಬಂದಿಗಳು ಇಲ್ಲಿನ ಜಿಜೆಪಿ ಕಾಲೇಜಿನ ಮಸ್ಟರಿಂಗ್ ಕೇಂದ್ರದಿಂದ ಚುನಾವಣಾ ಸಾಮಗ್ರಿಗಳೊಂದಿಗೆ ತಮ್ಮ ಮತಗಟ್ಟೆ ಕೇಂದ್ರಗಳಿಗೆ ಶನಿವಾರ ತೆರಳಿದರು.

ತಾಲ್ಲೂಕಿನ 27 ಗ್ರಾಮ ಪಂಚಾಯಿತಿಯ 401 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ 178 ಮೂಲ ಮತಗಟ್ಟೆಯ ಜೊತೆಗೆ 22 ಹೆಚ್ಚುವರಿ ಮತಗಟ್ಟೆ ಕೇಂದ್ರಗಳನ್ನು ತೆರೆಯಲಾಗಿದೆ. ತಾಲ್ಲೂಕಿನಲ್ಲಿ 84 ಸೂಕ್ಷ್ಮ, 49 ಅತಿ ಸೂಕ್ಷ್ಮ ಮತಗಟ್ಟೆ ಕೇಂದ್ರಗಳೆಂದು ಗುರತಿಸಲಾಗಿದ್ದು ಅಲ್ಲಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಒಂದು ಮತಗಟ್ಟೆಗೆ 4 ಸಿಬ್ಬಂದಿಗಳಂತೆ ಒಟ್ಟು 200 ಮತಗಟ್ಟೆ ಕೇಂದ್ರಗಳಿಗೆ ಪಿಆರ್ಒ 200. ಎಪಿಆರ್ಒ 200, 3ನೇ ಮತಗಟ್ಟೆಯಧಿಕಾರಿ ಮತ್ತು ಪಿಒ ತಲಾ200 ಸಿಬ್ಬಂದಿಗಳು ಹಾಗು 200 ಕಾಯ್ದಿರಿಸಿದ ಸೇರಿದಂತೆ ಒಟ್ಟು 1000 ಸಿಬ್ಬಂದಿಗಳು ಇದರ ಜೊತೆಗೆ ಕಂದಾಯ ಇಲಾಖೆಯ ಸಿಬ್ಬಂದಿಗಳು ಕೂಡ ಚುನಾವಣಾ ಕೆಲಸದಲ್ಲಿ ಸಕ್ರಿಯರಾಗಿದ್ದಾರೆ.

23 ಕೆಎಸ್ಆರ್ಟಿಸಿ ಬಸ್, 13 ಖಾಸಗಿ ವಾಹನಗಳು, 1 ಡಿಎಸ್ಪಿ, 3 ಸಿಪಿಐ, ಪಿಎಸ್ಐ4, ಎಸ್ಐ18, ಗೃಹರಕ್ಷಕ 100 ಹಾಗು ಇನ್ನಿತರೆ 193 ಪೊಲೀಸ್ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. 4ರಿಂದ 5 ಗಂಟೆಯ ವರೆಗೆ ಕೋವಿಡ್ ಸೋಕಿತ ವ್ಯಕ್ತಿಗಳು ಅಗತ್ಯ ಕ್ರಮಗಳೊಂದಿಗೆ ಮತದಾನ ಮಾಡಲು ಅವಕಾಶ ಮಾಡಿಕೊಡಲಾಗಿದೆ.

ಕೋವಿಡ್ ಮಾರ್ಗ ಸೂಚಿಯಂತೆ ಚುನಾವಣೆಯು ನಡೆಯಲಿದ್ದು ಮತದಾರರು ಮತಗಟ್ಟೆ ಕೇಂದ್ರಗಳಿಗೆ ಮೊಬೈಲ್ ಸೇರಿದಂತೆ ಇನ್ನಿತರ ನಿರ್ಭಂದಿತ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ. ಎಲ್ಲ ಕಡೆ ಕ್ಯಾಮರ ಕಣ್ಗಾವಲಿದ್ದು ಎಲ್ಲರಿಗೂ ಶಾಂತಿಯುತ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆಂದು ತಹಶೀಲ್ದಾರ್ ಆರ್.ನಯಿಂಉನ್ನೀಸಾ ತಿಳಿಸಿದರು.

ಸಿಬ್ಬಂದಿಗಳಿಗೆ ಊಟ ಮತ್ತು ತಿಂಡಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಆರೋಗ್ಯ ಇಲಾಖೆಯ ಚಂದ್ರಶೇಖರ್ ಹಾಗು ಸಿಬ್ಬಂದಿಗಳು ಚುನಾವಣಾ ಸಿಬ್ಬಂದಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ಮತ್ತು ಸ್ಯಾನಿಟೈಸರ್ ಮಾಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್, ಆರ್.ನಯಿಂಉನ್ನೀಸಾ, ಚುನಾವಣಾ ಸಿಬ್ಬಂದಿ ಪಿ.ಕಾಂತರಾಜು, ಹಾಗು ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?