Thursday, March 28, 2024
Google search engine
Homeಜಸ್ಟ್ ನ್ಯೂಸ್ದೇವಲಕೆರೆಯಲ್ಲಿ ವಿಜೃಂಭಣೆಯ ರಾಜ್ಯೋತ್ಸವ

ದೇವಲಕೆರೆಯಲ್ಲಿ ವಿಜೃಂಭಣೆಯ ರಾಜ್ಯೋತ್ಸವ

ರಾಜ್ಯೋತ್ಸವ ವಾರ್ಷಿಕೋತ್ಸವವಾಗದೆ ನಿತ್ಯೋತ್ಸವವಾಗಬೇಕು ಎಂದು ಶಿಕ್ಷಕ ಸುವರ್ಣರೆಡ್ಡಿ ತಿಳಿಸಿದರು.

ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ದೇವಲಕೆರೆ ಗ್ರಾಮದಲ್ಲಿ ಬುಧವಾರ ರಾತ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಮತ್ತು ಕನ್ನಡ ಅಭಿಮಾನಿಗಳ ಬಳಗ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗಡಿ ಭಾಗದಲ್ಲಿ ನಿತ್ಯವೂ ಕನ್ನಡಕ್ಕೆ ಸಂಬಂಧಿಸಿ ಕಾರ್ಯಾಗಾರ, ವಿಚಾರ ಸಂಕಿರಣಗಳು ನಡೆಯಬೇಕು ಎಂದರು. ವರ್ಷಕ್ಕೊಮ್ಮೆ ರಾಜ್ಯೋತ್ಸವ ಆಚರಿಸಿ ಸುಮ್ಮನಾಗಬಾರದು ಎಂದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಮಾತನಾಡಿ, ತಾಲ್ಲೂಕಿನಾದ್ಯಂತ ತೆಲುಗು ಪ್ರಭಾವ ಇದ್ದರೂ ಕನ್ನಡ ಭಾಷೆ ಸಂಸ್ಕೃತಿ ಉಳಿಸುವಲ್ಲಿ ವಿವಿಧ ಸಂಸ್ಥೆಗಳು ಶ್ರಮಿಸುತ್ತಿವೆ. ನಾಡು ನುಡಿಯ ಸೇವೆ ಮಾಡುವಲ್ಲಿ ಪ್ರತಿಯೋರ್ವರು ಕೈಜೋಡಿಸಬೇಕು ಎಂದರು.

ಶಾಲಾ ಕ್ಷೇಮಾಭಿವೃದ್ದಿ ಸವಿತಿ ಮಾಜಿ ಅಧ್ಯಕ್ಷ ಪಾಳೇಗಾರ್ ಲೋಕೇಶ್, ನಿಡಗಲ್ ಹೋಬಳಿಯಲ್ಲಿ ವರ್ಷದಿಂದ ವರ್ಷಕ್ಕೆ ಕಲಾವಿದರ ಸಂಖ್ಯೆ ಹೆಚ್ಚುತ್ತಿದೆ. ಯುವ ಜನತೆ ರಾಜ್ಯೋತ್ಸವದ ಹೆಸರಿನಲ್ಲಿ ಸಮಾಜ ಮುಖಿ ಕಾರ್ಯಕ್ರಮಗಳಲ್ಲಿ ತೊಡಗುತ್ತಿರುವುದು ಶ್ಲಾಘನೀಯ ಎಂದರು.

 ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಗ್ರಾಮವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಕಲಾ ತಂಡಗಳು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದವು.

ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಭಾರತಿ, ನಮ್ಮ ಹಕ್ಕು ತಾಲ್ಲೂಕು ಘಟಕದ ಅಧ್ಯಕ್ಷ ಗಿರಿ ಫ್ಯಾಷನ್ಸ್ ಗಿರೀಶ್, ಬಲರಾಂ, ನವೀನ್, ಲಿಂಗಪ್ಪ, ಶಶಿಕಿರಣ್, ಸುವರ್ಣರೆಡ್ಡಿ ಅವರನ್ನು ಸನ್ಮಾನಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ, ಸದಸ್ಯೆ ಚಂದ್ರಮ್ಮ, ಬಿ.ಆರ್.ಸಿ ಸುವರ್ಣರೆಡ್ಡಿ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಈರಣ್ಣ, ಶಾಲಾ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಅಂಬರೀಷ್, ವೈದ್ಯ ಪ್ರಭಾಕರ ರೆಡ್ಡಿ, ಸಿಬ್ಬಂದಿ ಲೋಕೇಶ್ ನಾಯಕ, ಶಿಲ್ಪ, ಕನ್ನಡ ಅಭಿಮಾನಿ ಬಳಗದ ಪದಾಧಿಕಾರಿ ಅಜಯ್ ಕುಮಾರ್, ಮದೂಶ್, ರಾಮಚಂದ್ರ, ನಾರಾಯಣರೆಡ್ಡಿ, ಕೆ.ಪಿ.ಲಿಂಗಣ್ಣ, ಹನುಮಂತರಾಯಪ್ಪ, ರಾಜಶೇಖರ್, ಗೌತಮಿ, ರಘು, ನಾಗರಾಜು ಉಪಸ್ಥಿತರಿದ್ದರು.

RELATED ARTICLES

1 COMMENT

Leave a Reply to Dasanna Cancel reply

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?