Saturday, April 13, 2024
Google search engine
Homeಜಸ್ಟ್ ನ್ಯೂಸ್ನಿಗಮಗಳ ರಚನೆಯ ಹಿಂದೆ ರಾಜಕೀಯದ ವಾಸನೆ: ಪ್ರೊ ಕೆ ಮರುಳಸಿದ್ಧಪ್ಪ ವಿಷಾದ

ನಿಗಮಗಳ ರಚನೆಯ ಹಿಂದೆ ರಾಜಕೀಯದ ವಾಸನೆ: ಪ್ರೊ ಕೆ ಮರುಳಸಿದ್ಧಪ್ಪ ವಿಷಾದ

ಜಿ ಎನ್ ನಾಗರಾಜ್ ಅವರ ‘ಜಾತಿ ಬಂತು ಹೇಗೆ’ ಕೃತಿ ಬಿಡುಗಡೆ


Bengaluru: ರಾಜ್ಯದಲ್ಲಿ ವೀರಶೈವ – ಲಿಂಗಾಯತ ಅಭಿವೃದ್ಧಿ ನಿಗಮ ಮತ್ತು ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಸ್ಪಷ್ಟವಾಗಿ ರಾಜಕೀಯ ಉದ್ಧೇಶದಿಂದ ಕೂಡಿದೆ ಎಂದು ಹಿರಿಯ ವಿದ್ವಾಂಸ ಪ್ರೊ ಕೆ ಮರುಳಸಿದ್ಧಪ್ಪ ಅವರು ಟೀಕಿಸಿದರು.

‘ಬಹುರೂಪಿ’ ಪ್ರಕಾಶನ ಹಮ್ಮಿಕೊಂಡಿದ್ದ ಸಂವಾದದಲ್ಲಿ ಅವರು ಜಿ ಎನ್ ನಾಗರಾಜ್ ಅವರ ಹೊಸ ಕೃತಿ ‘ಜಾತಿ ಬಂತು ಹೇಗೆ?’ ಕುರಿತು ಮಾತನಾಡಿದರು.

ಉತ್ತರ ಕರ್ನಾಟಕದ ಜಾತಿ ಸಮುದಾಯಗಳ ಮತಗಳ ಮೇಲೆ ಕಣ್ಣಿಟ್ಟು ನಡೆಸಿರುವ ಈ ರಾಜಕೀಯಕ್ಕೆ ಅಂತಃಕರಣವೇ ಇಲ್ಲ ಎಂದು ಅವರು ವಿಷಾದಿಸಿದರು. ಇವತ್ತಿನ ರಾಜಕಾರಣ ಜಾತಿಯನ್ನು ಅಸ್ತ್ರವನ್ನಾಗಿ ಬಳಸುತ್ತಿದೆ. ರಾಜ್ಯದಲ್ಲಿ ಎಲ್ಲಾ ಜಾತಿಗಳಿಗೂ ಒಂದು ಪ್ರಾಧಿಕಾರ ಮಾಡಲು ಹೊರಟಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನಿರ್ಧಾರವೇ ಇದಕ್ಕೆ ಸಾಕ್ಷಿ ಒದಗಿಸುವಂತಿದೆ. ಇದು ಜಾತಿ ಉದ್ಧಾರ ಮಾಡುವ ಉದ್ಧೇಶವನ್ನು ಖಂಡಿತಾ ಹೊಂದಿಲ್ಲ ಬದಲಿಗೆ ಆ ಜಾತಿಯ ಮತಗಳನ್ನು ಮಾತ್ರ ಬಾಚಿಕೊಳ್ಳುವ ಉತ್ಸಾಹ ತೋರಿಸುತ್ತಿದೆ

ಸಂವಿಧಾನ ಜಾತ್ಯತೀತ ಆಶಯವನ್ನು ಹೊಂದಿದೆ. ಹಾಗಾಗಿ ಸ್ವಾತಂತ್ರ್ಯಾನಂತರ ಜಾತಿ ಎನ್ನುವುದು ನಾಶವಾಗಿ ಹೋಗುತ್ತದೆ ಎನ್ನುವ ಕನಸು ಇತ್ತು. ಆದರೆ ಈಗ ಜಾತಿ ಮತ್ತು ಧರ್ಮಗಳೆರಡೂ ಸ್ವಾತಂತ್ರ್ಯಪೂರ್ವಕ್ಕಿಂತ ಬಲವಾಗಿ ಬೆಳೆದು ನಿಂತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಮಹಿಳಾ ಹೋರಾಟಗಾರರಾದ ಕೆ ನೀಲಾ ಅವರು ಮಾತನಾಡಿ ವಚನ ಚಳವಳಿಯ ಆಶಯವನ್ನೇ ಇಲ್ಲವಾಗಿಸುವ ಹುನ್ನಾರ ಈ ಪ್ರಾಧಿಕಾರಗಳ ರಚನೆಯ ಹಿಂದಿದೆ. ವಚನ ಚಳವಳಿಯ ಜಾತ್ಯಾತೀತ ಆಶಯವನ್ನು ಹರಡದಂತೆ ವ್ಯವಸ್ಥಿತ ಕೋಟೆ ರೂಪಿಸಲಾಯಿತು. ನಂತರ ಅದನ್ನು ಜಾತಿಯಾಗಿಸಿ ಅದರಿಂದ ಲಾಭ ಪಡೆಯುವ ಹುನ್ನಾರ ಈಗ ನಡೆದಿದೆ ಎಂದು ಟೀಕಿಸಿದರು.

ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ ಅವರು ಕೃತಿಯನ್ನು ವಿಮರ್ಶಿಸುತ್ತಾ ಅಸ್ಪೃಶ್ಯತೆಯ ಅಗ್ನಿಕುಂಡ ಇನ್ನೂ ಜೀವಂತವಾಗಿದೆ. ಜಾತಿ ಎನ್ನುವುದು ವಿನಾಶವಾಗುವವರೆಗೆ ಅಸ್ಪೃಶ್ಯತೆಯ ಗಾಯಗಳು ಮರೆಯಾಗುವುದಿಲ್ಲ ಎಂದರು.

ಕೃತಿಕಾರ ಜಿ ಎನ್ ನಾಗರಾಜ್ ಅವರು ಮಾತನಾಡಿ ನನ್ನ ‘ಜಾತಿ ಬಂತು ಹೇಗೆ?’ ಕೃತಿ ಕರ್ನಾಟಕದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯ ಉಗಮವನ್ನು ಶೋಧಿಸುತ್ತದೆ. ಜಾತಿಯ ವಿರುದ್ಧ ಪ್ರಬಲ ಹೋರಾಟ ಕಟ್ಟಿದ ಡಾ ಅಂಬೇಡ್ಕರ್, ಇ ಎಂ ಎಸ್ ನಂಬೂದರಿಪಾಡ್, ಇ ಕೆ ನಾಯನಾರ್, ಬಿ ಟಿ ರಣದಿವೆ ಅವರ ಹೋರಾಟ ಅಮೂಲ್ಯವಾದದ್ದು ಅದನ್ನು ರಕ್ಷಿಸಿಕೊಳ್ಳಬೇಕು ಎಂದರು.

ಬಿಡುಗಡೆಯಾದ ಕೃತಿ ವಿವರ:

ಜಾತಿ ಬಂತು ಹೇಗೆ?
ಬಹುರೂಪಿ ಪ್ರಕಾಶನ
ಪುಟ ೨೫೬
ಬೆಲೆ: ರೂ ೩೦೦

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?