Thursday, March 28, 2024
Google search engine
Homeಜಸ್ಟ್ ನ್ಯೂಸ್ಪಾವಗಡ: ಭ್ರಷ್ಟ ಸಿಬ್ಬಂದಿಗೆ ಕಠಿಣ ಶಿಕ್ಷೆ

ಪಾವಗಡ: ಭ್ರಷ್ಟ ಸಿಬ್ಬಂದಿಗೆ ಕಠಿಣ ಶಿಕ್ಷೆ

ತುಮಕೂರು ಜಿಲ್ಲೆ  ಪಾವಗಡದಲ್ಲಿ ಲಂಚ ಸ್ವೀಕರಿಸಿ ಎಸಿಬಿ   ಬಲೆಗೆ ಬಿದ್ದಿದ್ದ ಆರೋಪಿ ಪುರಸಭೆ ಕಿರಿಯ ಎಂಜಿನಿಯರ್ ಪ್ರಕಾಶ್ ಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ,  4 ಲಕ್ಷ ರೂ ದಂಡ ಹಾಗೂ  ಎರಡನೇ ಆರೋಪಿ ವಾಟರ್ ಮನ್ ರಿಯಾಜ್ ಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 5 ಸಾವಿರ ರೂ ದಂಡವನ್ನು 7 ನೇ ಜಿಲ್ಲಾ ಮತ್ತು ಸತ್ರ ನ್ಯಾಯಲಯ ವಿಧಿಸಿದೆ.

ಪಾವಗಡ ಪುರಸಭೆ ವ್ಯಾಪ್ತಿಯ ವಿವಿಧ  ಕಾಮಗಾರಿಗಳ ಬಿಲ್ ಮಂಜೂರು ಮಾಡಿಕೊಡಲು  ಪುರಸಭೆ ಕಿರಿಯ ಎಂಜಿನಿಯರ್ ಪ್ರಕಾಶ್, ವಾಟರ್ ಮನ್ ರಿಯಾಜ್  7 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 3 ಲಕ್ಷ ರೂ ಹಣವನ್ನು ಪಡೆದುಕೊಂಡು, ಉಳಿಕೆ 4 ಲಕ್ಷ  ರೂ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ  ಗುತ್ತಿಗೆದಾರ ಲಿಂಗಮಯ್ಯ   8,  ಸೆಪ್ಟಂಬರ್- 2016 ರಂದು ಜಿಲ್ಲಾ ಭ್ರಷ್ಟಾಚಾರ ನಿಗ್ರಹ ಧಳಕ್ಕೆ ದೂರು ನೀಡಿದ್ದರು. ಕಿರಿಯ ಎಂಜಿನಿಯರ್ 1 ಲಕ್ಷ ರೂ ಹಣ ಪಡೆಯುವಾಗ ಎಸಿಬಿ ಅಧಿಕಾರಿಗಳು  ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು.

ತನಿಖಾಧಿಕಾರಿ ಎಸಿಬಿ ಇನ್ ಸ್ಪೆಕ್ಟರ್ ವಿ.ಎ. ಗುರುಪ್ರಸಾದ್ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ  ಮಾರ್ಚ್-16 ಸೋಮವಾರದಂದು ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ನೀಡಿದೆ.  ವಿಶೇಷ ವಕೀಲ ಆರ್.ಪಿ ಪ್ರಕಾಶ್ ವಾದ ಮಂಡಿಸಿದ್ದಾರೆ.

ಇದೀಗ ಮತ್ತೆ ಪುರಸಭೆ ಕಛೇರಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು, ಭ್ರಷ್ಟ ಅಧಿಕಾರಿಗಳಿಗೆ ಯಾರಾದರೂ ಬುದ್ದಿಕಲಿಸಲಿದ್ದಾರೆಯೇ ಎಂದು ಜನತೆ ಕಾದು ನೋಡುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?