Saturday, April 13, 2024
Google search engine
Homeತುಮಕೂರು ಲೈವ್ಮನೆಗೆ ನುಗ್ಗಿ ಬಾಲಕಿ ಕಿವಿ ಹರಿದು ಹಾಕಿದ ಚಿರತೆ

ಮನೆಗೆ ನುಗ್ಗಿ ಬಾಲಕಿ ಕಿವಿ ಹರಿದು ಹಾಕಿದ ಚಿರತೆ

Publicstory. in


ಕುಣಿಗಲ್: ತಾಲೂಕು ತೆರದಕುಪ್ಪೆಯಲ್ಲಿ ಆರು ವರ್ಷದ ಬಾಲಕಿಯೊಬ್ಬಳ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ತೆರೆದಕುಪ್ಪೆಯ ನಾಗರಾಜು ತಮ್ಮ ತೋಟದ ಮನೆಯಲ್ಲಿ ವಾಸವಾಗಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ತೋಟದ ಮನೆಗೆ ದಾಳಿ ಮಾಡಿದ ಚಿರತೆ ಬಾಲಕಿ ರೇಖಾಳ ಬಲಗಿವಿ ಕೆಳಗೆ ಗಾಯಗೊಳಿಸಿದೆ.

ಕೂಡಲೇ ಬಾಲಕಿ ರೇಖಾಳನ್ನು ಕುಣಿಗಲ್ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಗೆ ದಾಖಲಿಸಲಾಗಿದೆ.

ಚಿರತೆ ಬಾಲಿಕಿ ಮೇಲೆ ದಾಳಿ ನಡೆಸಿರುವುದನ್ನು ಖಂಡಿಸಿ ಕುಣಿಗಲ್ ವಡ್ಡರಕುಪ್ಪೆಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಚಿರತೆ ದಾಳಿ ಮುಂದುವರೆದಿದ್ದರೂ ಅರಣ್ಯ ಇಲಾಖೆ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸೂಕ್ತ ಪರಿಹಾರ ಕೊಡುವುದಾಗಿ ಭರವಸೆ ನೀಡಿದರು.

ಹೆಬ್ಬೂರಿನಲ್ಲಿ ಪ್ರತಿಭಟನೆ


ಮತ್ತೊಂದು ಕಡೆ ತುಮಕೂರು ತಾಲೂಕು ಹೆಬ್ಬೂರಿನಲ್ಲಿ ಚಿರತೆ ದಾಳಿಯನ್ನು ಖಂಡಿಸಿ ನೂರಾರು ಮಂದಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಮಣಿಕುಪ್ಪೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕಿಗೆ ಪರಿಹಾರ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಅಹಿತಕರ ಘಟನೆ ನಡೆಯದಂತೆ ಕ್ರಮ ಜರುಗಿಸಿದ್ದಾರೆ. ಚಿರತೆ ದಾಳಿಯಿಂದ ಕುಣಿಗಲ್ ಮತ್ತು ಹೆಬ್ಬೂರು ಸುತ್ತಮುತ್ತ ಇದುವರೆಗೆ ಚಿರತೆ ದಾಳಿಗೆ ನಾಲ್ವರು ಮೃತಪಟ್ಟಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?