Thursday, March 28, 2024
Google search engine
Homeಜಸ್ಟ್ ನ್ಯೂಸ್ಮಹಾರಾಷ್ಟ್ರ ಸರ್ಕಾರ ರಚನೆ ಬಿಕ್ಕಟ್ಟು - ಸುಪ್ರೀಂಕೋರ್ಟ್ ಕಾಯ್ದಿರಿಸಿದ ಆದೇಶದಲ್ಲಿ ಏನಿರಬಹುದು?

ಮಹಾರಾಷ್ಟ್ರ ಸರ್ಕಾರ ರಚನೆ ಬಿಕ್ಕಟ್ಟು – ಸುಪ್ರೀಂಕೋರ್ಟ್ ಕಾಯ್ದಿರಿಸಿದ ಆದೇಶದಲ್ಲಿ ಏನಿರಬಹುದು?

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚಿಸಲು ಆಹ್ವಾನ ನೀಡಿರುವ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಕುರಿತು ವಾದ-ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ಆದೇಶವನ್ನು ಮಂಗಳವಾರಕ್ಕೆ ಕಾಯ್ದಿರಿಸಿದೆ.

ಎನ್.ಸಿ.ಪಿ. ಶಿವಸೇನೆ ಮತ್ತು ಕಾಂಗ್ರೆಸ್ ಹಾಗೂ ಬಿಜೆಪಿಯ ಪರ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಮಂಗಳವಾರ ಬೆಳಗ್ಗೆ 10.30ಕ್ಕ ಆದೇಶ ಪ್ರಕಟಿಸಲಿದೆ.

ಬಿಜೆಪಿ ಮತ್ತು ಎನ್.ಸಿ.ಪಿ ಶಾಸಕರ ಬೆಂಬಲ ಪತ್ರವನ್ನು ಮಂಗಳವಾರ ಹಾಜರುಪಡಿಸುವುದಾಗಿ ಹೇಳಿದ್ದು ಕೇಂದ್ರ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ ಹಾಜರಾಗಲಿದ್ದಾರೆ.

ಇದೇ ವೇಳೆ ಅಜಿತ್ ಪವಾರ್ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ಮೆಹ್ತಾ, ಎನ.ಸಿ.ಪಿ ನಾಯಕ ಅಜಿತ್ ಪವಾರ್ 54 ಮಂದಿ ಎನ್.ಸಿ.ಪಿ ಶಾಸಕರು ಮತ್ತು ರಾಜ್ಯಪಾಲರ ಸಹಿಯುಳ್ಳ ಪತ್ರವನ್ನು ನ್ಯಾಯಾಲಯಕ್ಕೆ ತೋರಿಸಿದರು.

ಆ ಪತ್ರದ ಪ್ರಕಾರ ನವೆಂಬರ್ 22ರಂದು ಅಜಿತ್ ಪವಾರ್ ತನ್ನ ಶಾಸಕರ ಬೆಂಬಲ ಪತ್ರವನ್ನು ನೀಡಿ ದೇವೇಂದ್ರ ಫಡ್ನಾವೀಸ್ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ ಎಂದಿದೆ.

ಮಹಾರಾಷ್ಟ್ರದ ವಿಧಾನಸಭೆಯ 288 ಶಾಸಕರ ಪೈಕಿ ಬಿಜೆಪಿ 105, ಎನ್.ಸಿ.ಪಿ. 54, ಪಕ್ಷೇತರ ಶಾಸಕರು 11 ಮಂದಿ ಸೇರಿ ಒಟ್ಟು 170 ಶಾಸಕರ ಬೆಂಬಲ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಲಾಗಿದೆ. ಈ ಪತ್ರವನ್ನು ಸುಪ್ರೀಂಕೋರ್ಟ್ ಪರಿಶೀಲನೆ ನಡೆಸುವುದನ್ನು ಮೆಹ್ತಾ ಪ್ರಶ್ನಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?