Thursday, March 28, 2024
Google search engine
Homeತುಮಕೂರ್ ಲೈವ್ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಡ್ಡಿ: ಪ್ರತಿಭಟನೆ

ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಡ್ಡಿ: ಪ್ರತಿಭಟನೆ

ಚಿಕ್ಕನಾಯಕನಹಳ್ಳಿ: ಬೆಳಗಾವಿ ಜಿಲ್ಲಾ, ಬೆಳಗಾವಿ ತಾಲೂಕು ಪೀರನವಾಡಿಯಲ್ಲಿ ಸ್ವತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ಸ್ಥಾಪನೆ ವೇಳೆ ನಡೆದಿರುವ ಪೊಲೀಸ್ ನವರ ವರ್ತನೆಯನ್ನು ಖಂಡಿಸುತ್ತೇವೆ ಎಂದು ಚಿಕ್ಕನಾಯಕನಹಳ್ಳಿ ತಾಲೂಕು ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳ ಬಳಗ ಒತ್ತಾಯಿಸಿತು.

ಪಿರನವಾಡಿ ಯಲ್ಲಿ ಅವರ ಪ್ರತಿಷ್ಠಾಪನೆ ಮಾಡುವ ಸಂದರ್ಭದಲ್ಲಿ ಪೊಲೀಸರು ಅಡ್ಡಿಪಡಿಸಿದರ ಜೊತೆಗೆ ಪ್ರತಿಮೆಯನ್ನು ತೆಗೆದುಕೊಂಡು ಹೋಗಿರುವುದು ಖಂಡನೀಯ ಕೂಡಲೇ ಸರಕಾರ ಮುಂದೆ ಬಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನವರ ಪ್ರತಿಮೆಯನ್ನು ನಿಗದಿತ ಸ್ಥಳದಲ್ಲಿ ಸ್ಥಾಪಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದ ರಾಯಣ್ಣನ ಅಭಿಮಾನಿಗಳು ಉಗ್ರವಾದ ಹೋರಾಟವನ್ನು ಮಾಡಲಾಗುತ್ತದೆ ಎಂದು ಈ ಮೂಲಕ ಸರಕಾರಕ್ಕೆ ಎಚ್ಚರಿಸುತ್ತೆವೆ ಎಂದು ಚಿಕ್ಕನಾಯಕನಹಳ್ಳಿ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳ ಬಳಗ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿ.ಡಿ. ಚಂದ್ರಶೇಖರ್, ಸಿ.ಎಲ್ ರವಿಕುಮಾರ್, ಪವನ್ ಕುಮಾರ್, ಸಿ ಎಚ್ ಗಂಗಾಧರಯ್ಯ, ವಿನಯ್ ಸೀಮೆಎಣ್ಣೆ, ಆಟೋ ಮಂಜುನಾಥ್, ಸಿ.ಡಿ ಗಂಗಾಧರಯ್ಯ, ರೇಣುಕುಮಾರ್, ಲವ ಮತ್ತಿತರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?