Friday, March 29, 2024
Google search engine
Homeತುಮಕೂರು ಲೈವ್ಸಂವಿಧಾನ ದೇಶದ ಹೃದಯ

ಸಂವಿಧಾನ ದೇಶದ ಹೃದಯ

ತುಮಕೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ಹಿರಿಯ ಪತ್ರಕರ್ತ ಹಾಗೂ ವಕೀಲ ಸಿ.ಕೆ. ಮಹೇಂದ್ರ ಚಾಲನೆ ನೀಡಿದರು .

Public story


ತುಮಕೂರು: ಸಂವಿಧಾನ ದೇಶದ ಹೃದಯವಿದ್ದಂತೆ, ಎಲ್ಲರಿಗೂ ಸಂವಿಧಾನದ ಸಾಮಾನ್ಯ ಜ್ಞಾನವಿರಬೇಕು ಎಂದು ಹಿರಿಯ ಪತ್ರಕರ್ತ ಹಾಗೂ ವಕೀಲ ಸಿ.ಕೆ. ಮಹೇಂದ್ರ ತಿಳಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಭಾರತದ ಸಂವಿಧಾನದಲ್ಲಿ ವ್ಯಕ್ತಿ ಸ್ವಾತಂತ್ರ್ಯಕ್ಕೆ ಹೆಚ್ಚಿನ ಮನ್ನಣೆ ನೀಡಲಾಗಿದೆ‌. ಎಲ್ಲರನ್ನೂ ಒಳಗೊಳ್ಳುವ ಪ್ರಜಾಪ್ರಭುತ್ವ ನಮ್ಮದಾಗಬೇಕೆಂಬುದು ಸಂವಿಧಾನದ ಆಶಯವಾಗಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಮುಕ್ತ ಅವಕಾಶ ಸಿಗಬೇಕು ಎಂದರು.

ವ್ಯಕ್ತಿಯ ಘನತೆ ಗೌರವ ಕಾಪಾಡುವ ಸಂವಿಧಾನದಡಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿದೆ. ಹಾಗಾಗಿ ಸಂವಿಧಾನಕ್ಕೆ ಗೌರವ ನೀಡುವ ಜೊತೆಗೆ ವಿಧೇಯರಾಗಿರಬೇಕು.ಭಾರತದ ಸಂವಿಧಾನವೆಂದರೆ ಕೇವಲ ಕಾನೂನು ಕಟ್ಟಳೆಗಳ ಪುಸ್ತಕವಲ್ಲ. ಅದು ಈ ದೇಶದ ಸಂಸ್ಕೃತಿ ಪರಂಪರೆ ಮತ್ತು ಸಮಗ್ರ ಬೆಳವಣಿಗೆಗೆ ಪೂರಕ ಅಂಶ ಒಳಗೊಂಡ ಗ್ರಂಥ ಎಂದರು.

ಪ್ರಾಂಶುಪಾಲರಾದ ಟಿ.ಡಿ.ವಸಂತ ಮಾತನಾಡಿ ವಿಶ್ವದ ಎಲ್ಲಾ ಸಂವಿಧಾನವನ್ನು ಅಧ್ಯಯನಮಾಡಿ ಭಾರತ ಶ್ರೇಷ್ಟ ಸಂವಿಧಾನ ರಚಿಸಲಾಗಿದೆ. ಜನರಿಗೆ ಮೂಲ ಹಕ್ಕುಗಳ ಜೊತೆಗೆ ಕರ್ತವ್ಯವನ್ನು ನೀಡಲಾಗಿದೆ. ಭಾರತವನ್ನು ಆರ್ಥಿಕವಾಗಿ ಸಾಮಾಜಿಕವಾಗಿ ಮತ್ತಷ್ಟು ಬಲಿಷ್ಟಗೊಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕು ಎಂದು ಹೇಳಿದರು

ಕಾರ್ಯಕ್ರಮದಲ್ಲಿ ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ನಾರಾಯಣಪ್ಪ, ಮತದಾರರ ಸಾಕ್ಷರತಾ ಕ್ಲಬ್ ಸಂಚಾಲಕ ಡಾ.ಜಿ.ತಿಪ್ಪೇಸ್ವಾಮಿ, ಉಪನ್ಯಾಸಕ ಸಿದ್ದೇಗೌಡ, ವಾಣಿಜ್ಯ ಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಪ್ರೊ.ಮುದ್ದಗಂಗಯ್ಯ, ಎನ್ ಎಸ್ ಎಸ್ ಅಧಿಕಾರಿ ಹನುಮಂತ ರಾಯುಡು ಇನ್ನಿತರರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?