Thursday, March 28, 2024
Google search engine
Homeತುಮಕೂರು ಲೈವ್ಸತ್ಯನಾರಾಯಣ್ ನನ್ನ ಮಗನಂತೆ: ದೇವೇಗೌಡ

ಸತ್ಯನಾರಾಯಣ್ ನನ್ನ ಮಗನಂತೆ: ದೇವೇಗೌಡ

Publicstory


ತುಮಕೂರು: ಶಿರಾ ಶಾಸಕ ಬಿ.ಸತ್ಯನಾರಾಯಣ್ ಅವರ ನಿಧನ ಅತ್ಯಂತ ದುಃಖವನ್ನು ತರಿಸಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕಂಬನಿ ಮಿಡಿದಿದ್ದಾರೆ.

ತುಮಕೂರು ನಗರದ ಜಾತ್ಯತೀತ ಜನತಾ ದಳದ ಕಚೇರಿ ಆವರಣದಲ್ಲಿ ಸಾರ್ವಜನಿಕ ಪ್ರದರ್ಶನಕ್ಕೆ ಇಟ್ಟಿದ್ದ ಬಿ.ಸತ್ಯನಾರಾಯಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಬಳಿಕೆ ಮಾಧ್ಯಮಗಳೊಂದಿಗೆ ತಿಳಿಸಿದರು.

ಸತ್ಯನಾರಾಯಣ್ ನನ್ನ ಮಗನಂತೆ ಇದ್ದರು. ಅತ್ಯಂತ ಸರಳ ಮತ್ತು ಸಜ್ಜನ ವ್ಯಕ್ತಿ. ಅವರನ್ನು ಎರಡು ಬಾರಿ ಸಚಿವರನ್ನಾಗಿ ಮಾಡಿದ್ದೆ. ಅವರು ಪಕ್ಷ ನಿಷ್ಠೆಗೆ ಹಸರಾಗಿದ್ದರು. ಅವರನ್ನು ಕಳೆದುಕೊಂಡಿರುವುದು ನೋವು ತಂದಿದೆ ಎಂದು ಹೇಳಿದ್ದಾರೆ.

ಬಿಎಚ್.ರಸ್ತೆಯ ಕುಂಚಿಟಿಗ ಒಕ್ಕಲಿಗರ ಹಾಸ್ಟೆಲ್ ಬಳಿಯೂ ಸಾರ್ವಜನಿಕ ಪ್ರದರ್ಶನಕ್ಕೆ ಇಡಲಾಗಿತ್ತು. ಇಲ್ಲಿಗೆ ಆಗಮಸಿದ ಮಾಜಿ ಸಚಿವ ಎಸ್. ಶಿವಣ್ಣ, ಬಿಜೆಪಿ ನಗರ ಶಾಸಕ ಜ್ಯೋತಿಗಣೇಶ್ ಮತ್ತು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ಸಿದ್ದೇಗೌಡ ಮೊದಲಾದವರು ಮೃತ ದೇಹದ ಅಂತಿಮ ದರ್ಶನ ಪಡೆದರು.

ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಶಾಸಕರಾದ ಎಸ್.ಆರ್. ಶ್ರೀನಿವಾಸ್, ವೀರಭದ್ರಯ್ಯ, ಮಾಜಿ ಸಚಿವ ಡಿ.ನಾಗರಾಜಯ್ಯ, ಮಾಜಿ ಶಾಸಕರಾದ ಎಂಟಿ.ಕೃಷ್ಣಪ್ಪ, ಕೆ.ಎಂ.ತಿಮ್ಮರಾಯಪ್ಪ, ಬೆಮೆಲ್ ಕಾಂತರಾಜು, ಗೌರಿಶಂಕರ್ ಸೇರಿದಂತೆ ಜೆಡಿಎಸ್ ಹಾಲಿ ಮಾಜಿ ಶಾಸಕರು ಮುಖಂಡರು ಪಾಲ್ಗೊಂಡು ಬಿ.ಸತ್ಯನಾರಾಯಣ ಅವರ ಪಾರ್ಥೀವ ಶರೀರಕ್ಕೆ ಪುಷ್ಪನಮನ ಸಲ್ಲಿಸಿ ಅಂತಿಮ ದರ್ಶನ ಪಡೆದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?