Thursday, March 28, 2024
Google search engine
Homeಜಸ್ಟ್ ನ್ಯೂಸ್ಹೆಚ್ಚಿನ ಬೆಲೆಗೆ ದಿನಸಿ ಮಾರಿದರೆ ಕ್ರಿಮಿನಲ್ ಕೇಸ್

ಹೆಚ್ಚಿನ ಬೆಲೆಗೆ ದಿನಸಿ ಮಾರಿದರೆ ಕ್ರಿಮಿನಲ್ ಕೇಸ್

ಪಾವಗಡ: ನಿತ್ಯವಸರ ಪದಾರ್ಥಗಳನ್ನು ಹೆಚ್ಚಿನ ಬೆಲೆಗೆ ಮಾರಿದರೆ ಹುಷಾರ್. ಕ್ರಮಿನಲ್ ಕೇಸ್ ಹಾಕಿ ಬಾಗಿಲು ಮುಚ್ಚಿಸುತ್ತೇನೆ.

ಹೀಗೆ ಮಾತಾಡುತ್ತೇನೆ ಎಂದು ಬೇಸರ ಮಾಡಿಕೊಳ್ಳಬೇಡಿ ಪರಿಸ್ಥಿತಿ ಹಾಗಿದೆ ಎಂದು ಸಂದರ್ಭವನ್ನು ವಿವರಿಸುತ್ತಾ ವ್ಯಾಪಾರಿಗಳಿಗೆ ಡಿ ವೈ ಎಸ್ ಪಿ ಪ್ರವಿಣ್ ಎಚ್ಚರಿಕೆ ಕೊಟ್ಟರು.

ತಹಶೀಲ್ದಾರ್ ಕಚೇರಿಯಲ್ಲಿ ಶನಿವಾರ ನಡೆದ ವ್ಯಾಪಾರಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ

ತರಕಾರಿ, ಹಣ್ಣು, ಆಹಾರ ಪದಾರ್ಥಗಳನ್ನು ದುಭಾರಿ ಬೆಲೆಗೆ ಮಾರಾಟ ಮಾಡಬೇಡಿ. ದೂರುಗಳು ಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ವ್ಯಾಪಾರ ಮಾಡುವುದರ ಜೊತೆಗೆ ಜನತೆಗೆ ಮಾಸ್ಕ್ ಹಾಗೂ ಗ್ಲೌಸ್ ಧರಿಸುವಂತೆ ತಿಳಿಸಿ. ಕೊರೊನಾ ಬಗ್ಗೆ ಅರಿವು ಮೂಡಿಸಿ ಎಂದರು.

ತಹಶೀಲ್ದಾರ್ ವರದರಾಜು ಮಾತನಾಡಿ, ನೂತನ ಬಸ್ ನಿಲ್ದಾಣದಲ್ಲಿ ತರಕಾರಿ ಮಾರಾಟ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಕಂದಾಯ ನಿರೀಕ್ಷಕ ರಾಜಗೋಪಾಲ್, ಗ್ರಾಮ ಲೆಕ್ಕಿಗ ಗಿರೀಶ್, ಸರ್ಕಲ್ ಇನ್ ಸ್ಪೆಕ್ಟರ್ ನಾಗರಾಜು, ಸಬ್ ಇನ್ ಸ್ಪೆಕ್ಟರ್ ನಾಗರಾಜು, ಪುರಸಭೆ ಮುಖ್ಯಾಧಿಕಾರಿ ನವೀನ್ ಚಂದ್ರ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?