Wednesday, March 27, 2024
Google search engine
Homeಜಸ್ಟ್ ನ್ಯೂಸ್ಜೂಜುಕೋರರಿಗೆ ಕಡಕ್ ಎಚ್ಚರಿಕೆ

ಜೂಜುಕೋರರಿಗೆ ಕಡಕ್ ಎಚ್ಚರಿಕೆ

ಪಾವಗಡ ತಾಲ್ಲೂಕಿನಲ್ಲಿ ನಡೆಯುತ್ತಿರುವ ಮಟ್ಕಾ, ಇಸ್ಪೀಟು, ಅಕ್ರಮ ಮದ್ಯ ಮಾರಾಟ ಇತ್ಯಾದಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾದ ವ್ಯಕ್ತಿಗಳ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಡಿ.ವೈ.ಎಸ್.ಪಿ. ಎಂ. ಪ್ರವೀಣ್ ತಿಳಿಸಿದರು
ಪಟ್ಟಣದ ಪೋಲಿಸ್ ಠಾಣೆಯಲ್ಲಿ ಮಂಗಳವಾರ ಪತ್ರಿಕಾಗೋಷ್ಟಿಯಲ್ಲಿ  ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಮಟ್ಕಾ ಇಸ್ಪೀಟು ಮದ್ಯ ಮಾರಟ ದಿನೇ ದಿನೇ ಜಾಸ್ತಿಯಾಗುತ್ತಿದ್ದು ಅದಕ್ಕೆ ಕಡಿವಾಣ ಹಾಕಲು ಪೋಲಿಸ್ ಇಲಾಖೆ ಸರ್ವ ಸನ್ನದ್ದವಾಗಿದೆ ಎಂದರು.

ಈಗಾಗಲೇ ಪಾವಗಡದಲ್ಲಿ 12 ಮಂದಿ, ಅರಸೀಕೆರೆ ವ್ಯಾಪ್ತಿಯಲ್ಲಿ 4, ವೈ.ಎನ್. ಹೊಸಕೋಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ 9 ಮಂದಿ ವಿರುದ್ದ ಕೇಸ್ ದಾಖಲಿಸಲಾಗಿದೆ.  ಅಕ್ರಮ ಮದ್ಯ ಮಾರಟಗಾರರ ವಿರುದ್ದವೂ ಕಠಿಣ ಕ್ರಮ ಜರುಗಿಸಲು ಕ್ರಮ ಕೈಗೊಳ್ಳಲಾಗಿದೆ.

ಸರಗಳ್ಳತನದ ಬಗ್ಗೆ ತೀವ್ರ ನಿಗಾ ವಹಿಸಲಾಗುತ್ತಿದೆ, ಜನಜಂಗುಳಿ ಇರುವ ಬಸ್ ನಿಲ್ದಾಣದಂತಹ ಪ್ರದೇಶದಲ್ಲಿ ಸಿ.ಸಿ. ಟಿ.ವಿ.ಯನ್ನು ಅಳವಡಿಸಲು ಸೂಚಿಸಲಾಗಿದೆ. ಬಸ್ ನಿಲ್ದಾಣದಲ್ಲಿ ಪೋಲಿಸ್ ಚೌಕಿಯನ್ನು ಪ್ರಾರಂಭಿಸಲಾಗುವುದು.

ಒಟ್ಟಾರೆ ಅಕ್ರಮವಾಗಿ ನಡೆಯುವ ಎಲ್ಲ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೋಲಿಸ್ ಇಲಾಖೆ ಸರ್ವ ಸನ್ನದ್ದವಾಗಿದ್ದು ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದರು

ಪತ್ರಿಕಾಗೋಷ್ಟಿಯಲ್ಲಿ  ಸರ್ಕಲ್ ಇನ್ ಸ್ಪೆಕ್ಟರ್ ವೆಂಕಟೇಶ್,  ಸಬ್ ಇನ್ ಸ್ಪೆಕ್ಟರ್ ನಾಗರಾಜು, ರಾಮಯ್ಯ, ರಾಮಕೃಷ್ಣಪ್ಪ ಮಂಗಳಗೌರಮ್ಮ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?