Saturday, April 20, 2024
Google search engine
Homeತುಮಕೂರು ಲೈವ್ಆಟೋ ಚಾಲಕರಿಗೆ ಡಿ ಎಲ್ ವಿತರಣೆ

ಆಟೋ ಚಾಲಕರಿಗೆ ಡಿ ಎಲ್ ವಿತರಣೆ

ಪಾವಗಡ: ಕಾನೂನು ಸುವ್ಯವಸ್ಥೆ ಕಾಪಾಡಲು ಆಟೋ ಚಾಲಕರು ಪೊಲೀಸರಿಗೆ ಸಹಕರಿಸಬೇಕು ಎಂದು ಡಿ ವೈ ಎಸ್ ಪಿ ಕೆ.ಜಿ.ರಾಮಕೃಷ್ಣ ತಿಳಿಸಿದರು.

ಪಟ್ಟಣದಲ್ಲಿ ಗುರುವಾರ ಪೊಲೀಸ್ ಇಲಾಖೆ, ಆಟೋ ಚಾಲಕರ ಕಲ್ಯಾಣ ಜಂಟಿ ಕ್ರಿಯಾ ಸಮಿತಿ ಆಯೋಜಿಸಿದ್ದ ಚಾಲನಾ ಪರವಾನಗಿ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪೊಲೀಸ್ ಇಲಾಖೆ ವತಿಯಿಂದ  ಪಟ್ಟಣದಲ್ಲಿ ಆಟೋ ದಾಖಲಾತಿಗಳ ನವೀಕರಣ   ಶಿಬಿರ  ಏರ್ಪಡಿಸಲು ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಚಾಲಕರು ಅಸಹಾಯಕರ ಬಗ್ಗೆ ಕಾಳಜಿ ತೋರಿ ಮಾನವೀಯತೆ ಮೆರೆಯಬೇಕು. ದುಡಿಮೆ ಜೊತೆ ಜೊತೆಗೆ ಸೇವೆಯನ್ನೂ ಮೈಗೂಡಿಸಿಕೊಳ್ಳಬೇಕು ಎಂದರು.

ಇನ್ ಸ್ಪೆಕ್ಟರ್ ಲಕ್ಷ್ಮಿಕಾಂತ್,  ಪಟ್ಟಣದ ಆಟೋ ನಿಲ್ದಾಣಗಳ ಬಳಿ    ಬ್ಯಾರಿಕೇಡ್ ಅಳವಡಿಸಿ ಸರದಿಯಂತೆ ಬಾಡಿಗೆಗೆ ಹೋಗುವ ವ್ಯವಸ್ಥೆ ಮಾಡಲಾಗುವುದು.   ಆಟೋ ಚಾಲಕರು ಖಡ್ಡಾಯವಾಗಿ ದಾಖಲಾತಿಗಳನ್ನು ಹೊಂದಿರಬೇಕು. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದರು.

ನೇರಳಕುಂಟೆ ನಾಗೇಂದ್ರಕುಮಾರ್, ಕೋವಿಡ್ ಲಾಕ್ ಡೌನ್ ವೇಳೆಯಲ್ಲಿ   ಕಷ್ಟದಲ್ಲಿದ್ದರೂ ಸಹ ಚಾಲಕರ ಸಂಘದ ವತಿಯಿಂದ ಬಡ ಜನತೆಗೆ, ಅಗತ್ಯವಿರುವವರಿಗೆ ಆಹಾರ ವಿತರಿಸಿರುವುದು ಶ್ಲಾಘನೀಯ. ವಾಲ್ಮೀಕಿ ಆಟೋ ನಿಲ್ದಾಣಕ್ಕೆ ಬ್ಯಾರಿಕೇಡ್ ಅಳವಡಿಸಿ ಕೊಡುವುದಾಗಿ ತಿಳಿಸಿದರು.

ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್,  ರೋಟರಿ ಸಂಸ್ಥೆ  ಅಧ್ಯಕ್ಷ ಶ್ರೀಧರ್ ಗುಪ್ತ,  ಆಟೋ ಚಾಲಕರ ಸಂಘದ ಅಧ್ಯಕ್ಷ ನಾಗರಾಜ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?