Friday, March 29, 2024
Google search engine
HomeUncategorizedಬಿ.ಎಸ್ ಯಡಿಯೂರಪ್ಪ ಮುಂದಿನ ನಡೆ ನಿಗೂಢ

ಬಿ.ಎಸ್ ಯಡಿಯೂರಪ್ಪ ಮುಂದಿನ ನಡೆ ನಿಗೂಢ

ಬೆಂಗಳೂರು; ನಿರೀಕ್ಷೆಯಂತೆ ಬಿ.ಎಸ್ ಯಡಿಯೂರಪ್ಪ ಇಂದು ತಮ್ಮ ಮುುಖ್ಯ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ನಡೆ ನಿಗೂಢವಾಗಿದೆ.

ಸಧ್ಯಕ್ಕೆ ಅವರು ಪಕ್ಷ ಕಟ್ಟುವ ಕೆಲಸ ಮಾಡುವುದಾಗಿ ಹೇಳಿದ್ದಾರೆ. ಅವರನ್ನು ರಾಜ್ಯಪಾಲರಾಗಿ ಮಾಡಲಾಗುತ್ತದೆ ಎಂಬ ಊಹಾಪೋಹಗಳಿವೆ. ಆದರೆ ಯಾವುದೇ ಹುದ್ದೆ ಒಪ್ಪಿಕೊಳ್ಳುವುದಿಲ್ಲ ಎಂದು ಅವರೇ ಹೇಳಿದ್ದಾರೆ.

ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆಯನ್ನು ಆಚರಿಸುವ ಸಾಧನಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದಾಗ ಅವರು ಗದ್ಗದಿತರಾದರು. ಇದು ಅವರ ಅಭಿಮಾನಿಗಳಲ್ಲಿ, ಲಿಂಗಾಯತ ಸಮುದಾಯದಲ್ಲಿ ನೋವು ಉಂಟು ಮಾಡಿದೆ.

ಸಮಾವೇಶ ಮುಗಿದ ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ನೀಡಿದರು.
ರಾಜೀನಾಮೆ ಸಲ್ಲಿಸುವುದನ್ನು ಘೋಷಿಸುವಾಗ ಸಿಎಂ ಬಿ.ಎಸ್ ಯಡಿಯೂರಪ್ಪ ಗದ್ಗದಿತರಾಗಿ ತಮಗೆ 75 ವರ್ಷ ಮೀರಿದ ಬಳಿಕವೂ ಎರಡು ವರ್ಷ ಅವಕಾಶ ನೀಡಿದ್ದಕ್ಕಾಗಿ ಪ್ರಧಾನಿ ಮೋದಿ, ಅಮಿತ್ ಷಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಧನ್ಯವಾದಗಳನ್ನು ತಿಳಿಸಿದರು.

ಅವರ ಪುತ್ರ ವಿಜಯೇಂದ್ರ ಅವರಿಗೆ ಕಲ್ಪಿಸುವ ರಾಜಕೀಯ ಸ್ಥಾನಮಾನದ ಮೇಲೆ ಯಡಿಯೂರಪ್ಪ ನಡೆ ನಿಂತಿದೆಯಾ ಎಂಬ ಪ್ರಶ್ನೆಗಳು ಕೇಳಿ ಬರುತ್ತಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?