Friday, March 29, 2024
Google search engine
Homeತುಮಕೂರು ಲೈವ್ಗಮನ ಸೆಳೆದ‌ ಬೆಳ್ಳಿ ಪಲ್ಲಕ್ಕಿ ಉತ್ಸವ

ಗಮನ ಸೆಳೆದ‌ ಬೆಳ್ಳಿ ಪಲ್ಲಕ್ಕಿ ಉತ್ಸವ

ಗುಬ್ಬಿ : ತಾಲೂಕಿನ ಸಿಎಸ್.ಪುರ ಹೋಬಳಿ ವೀರಣ್ಣನಗುಡಿ ಗ್ರಾಮದ ಇತಿಹಾಸ ಪ್ರಸಿದ್ದ ಶ್ರೀಭದ್ರಕಾಳಿ ಸಮೇತ ವೀರಭದ್ರಸ್ವಾಮಿಯವರ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಬೆಳ್ಳಿಪಲ್ಲಕ್ಕಿ ಉತ್ಸವವು ಸಹಸ್ರಾರು ಭಕ್ತಾಧಿಗಳ ಸಮ್ಮುಖದಲ್ಲಿ ವೈಭವಯುತವಾಗಿ ನಡೆಯಿತು.

ವರ್ಷಕ್ಕೊಮ್ಮೆ ಜಾತ್ರಾ ಮಹೋತ್ಸವÀದ ಅಂಗವಾಗಿ ನಡೆಯುವ ಅತ್ಯಾಕರ್ಷಕವಾದ ಬೆಳ್ಳಿಪಲ್ಲಕ್ಕಿ ಉತ್ಸವವನ್ನು ಕಣ್ತುಂಬಿಕೊಳ್ಳಲು ನಾಡಿನ ವಿವಿಧ ಭಾಗಗಳಿಂದ ಮತ್ತು ತಾಲೂಕಿನ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿದ್ದರು.

ಬೆಳ್ಳಿಪಲ್ಲಕ್ಕಿ ಉತ್ಸವದ ಅಂಗವಾಗಿ ದೇವಾಲಯದಲ್ಲಿ ರುದ್ರಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು.

ಬೆಳ್ಳಿಪಲ್ಲಕ್ಕಿಯನ್ನು ವಿವಿಧ ಹೊಗಳಿಂದ ಮತ್ತು ವಿದ್ಯುತ್ ದೀಪಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ಬೆಳಿಗ್ಗೆಯಿಂದ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯ ನಡೆಸಿ ಉತ್ಸವಮೂರ್ತಿಯನ್ನು ಅತ್ಯಾಕರ್ಷಕವಾಗಿ ಅಲಂಕರಿಸಿದ್ದ ಬೆಳ್ಳಿ ಪಲ್ಲಕ್ಕಿಯಲ್ಲಿ ಮೆರವಣಿಗೆ ನಡೆಸಲಾಯಿತು.

ಮೆರವಣಿಗೆಯಲ್ಲಿ ಲಿಂಗವೀರರ ಕುಣಿತ, ವೀರಗಾಸೆ, ಧ್ವಜಕುಣಿತ, ನಾದಸ್ವರ ಸೇರಿದಂತೆ ವಿವಿಧ ಜನಪದ ಪ್ರಕಾರಗಳ ನೃತ್ಯಗಳು ನಡೆದವು.
ಬೆಳ್ಳಿಪಲ್ಲಕ್ಕಿ ಉತ್ಸವದಲ್ಲಿ ದೇವಾಲಯದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ವಿ,ಪುಟ್ಟಸ್ವಾಮಿ ಕಾರ್ಯಾಧ್ಯಕ್ಷ ಎಂ.ವಿ.ಬಸವರಾಜು, ಕಾರ್ಯದರ್ಶಿ ಟಿ.ಎನ್.ಶಿವರುದ್ರಯ್ಯ, ಖಜಾಂಚಿ ನಂಜುಡAಪ್ಪ, ಅರ್ಚಕ ಶ್ರೀಧರದೀಕ್ಷಿತ್ ಸೇರಿದಂತೆ ಭಕ್ತಾಗಳು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?